AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ‘ದಿವ್ಯ ದರ್ಶನ’: ಒಂದೇ ದಿನದಲ್ಲಿ ಬೆಂಗಳೂರಿನ 8 ದೇಗುಲಗಳಿಗೆ ಪ್ರವಾಸದ ಅವಕಾಶ

Divya Darshana package tour: ಬೆಂಗಳೂರಿನಲ್ಲಿರುವ ಪ್ರಸಿದ್ಧ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾರಾಂತ್ಯದ ಟೂರ್ ಪ್ಯಾಕೇಜ್​ ಆರಂಭಿಸಿದೆ. ಬಿಎಂಟಿಸಿಯ ನೂತನ ‘ದಿವ್ಯ ದರ್ಶನ’ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಚಾಲನೆ ನೀಡಿದರು. ಈ ಯೋಜನೆಯಡಿ ಯಾವೆಲ್ಲ ದೇಗುಲಗಳಿಗೆ ಕರೆದೊಯ್ಯಲಾಗುತ್ತದೆ? ಟಿಕೆಟ್ ದರ ಎಷ್ಟು? ಯಾವೆಲ್ಲ ಸಮಯದಲ್ಲಿ ಸೇವೆ ಲಭ್ಯ ಎಂಬ ಮಾಹಿತಿ ಇಲ್ಲಿದೆ.

Ganapathi Sharma
|

Updated on: May 29, 2025 | 8:29 AM

Share

ಬೆಂಗಳೂರು, ಮೇ 29: ಕರ್ನಾಟಕ ರಾಜಧಾನಿ ಬೆಂಗಳೂರಿನ ಪ್ರಸಿದ್ದ ದೇವಾಲಯಗಳ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬಿಎಂಟಿಸಿ (BMTC) ಹೊಸ ವಿಕೇಂಡ್ ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ‘ದಿವ್ಯ ದರ್ಶನ’ (Divya Darshana) ಹೆಸರಿನಲ್ಲಿ ಎಸಿ ಬಸ್​​​ ಮೂಲಕ ಒಂದೇ ದಿನ ಬೆಂಗಳೂರಿನ 8 ಪ್ರಸಿದ್ಧ ದೇಗುಲಗಳ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ದೇವಾಲಯಗಳ ವೀಕ್ಷಣೆಯ ‘ಒನ್ ಡೇ ಟೆಂಪಲ್ ಟೂರ್’ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಬುಧವಾರ ಚಾಲನೆ ನೀಡಿದ್ದಾರೆ.

ಬಿಎಂಟಿಸಿ ‘ದಿವ್ಯ ದರ್ಶನ’ದಲ್ಲಿ ಯಾವೆಲ್ಲ ದೇಗುಲ?

  • ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇಗುಲ
  • ಆರ್ ಆರ್ ನಗರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನ
  • ಆರ್​.ಆರ್​.ನಗರದಲ್ಲಿರುವ ಶೃಂಗಗಿರಿ ಷಣ್ಮುಖ ದೇವಾಸ್ಥಾನ
  • ಆರ್​.ಆರ್​.ನಗರದಲ್ಲಿರುವ ಕರುಮಾರಿ ಅಮ್ಮ ದೇವಾಲಯ
  • ಉತ್ತರಹಳ್ಳಿ ಬಳಿಯ ಓಂಕಾರ ಹೀಲ್ಸ್
  • ಇಸ್ಕಾನ್ ದೇವಸ್ಥಾನ (ವಸಂತಪುರ) ವೈಕುಂಠ
  • ಕನಕಪುರ ರಸ್ತೆಯಲ್ಲಿ ಆರ್ಟ್ ಆಫ್ ಲೀವಿಂಗ್
  • ಬನಶಂಕರಿಯಲ್ಲಿನ ಬನಶಂಕರಿ ದೇವಾಲಯ

ಬಿಎಂಟಿಸಿ ಟ್ವೀಟ್ ಮಾಹಿತಿ

ಯಾವಗೆಲ್ಲ ದಿವ್ಯ ದರ್ಶನ ಟೆಂಪಲ್ ಟೂರ್?

ಪ್ರತಿ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜೆ ದಿನಗಳಲ್ಲಿ ಈ ಟೂರ್ ಪ್ಯಾಕೇಜ್ ಲಭ್ಯವಿರಲಿದೆ. ಅಲ್ಲದೆ, ಪೂರ್ತಿ ಸಂಖ್ಯೆಯ ಬುಕಿಂಗ್ ಆದರೆ ವಾರದ ಇತರ ದಿನಗಳಲ್ಲಿಯೂ ಸೇವೆ ಲಭ್ಯವಿರಲಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ದಿವ್ಯ ದರ್ಶನ ಸಮಯ

ಬೆಳಗ್ಗೆ 8-30ಕ್ಕೆ ಮೆಜೆಸ್ಟಿಕ್​ನಿಂದ ಹೊರಟು ಸಂಜೆ 5-30 ರ ವರೆಗೆ ಎಸಿ ಬಸ್ ನಲ್ಲಿ 8 ಕಡೆ ಕರೆದೊಯ್ಯಲಾಗುತ್ತದೆ. ಮತ್ತೆ ಮೆಜೆಸ್ಟಿಕ್​​ಗೆ ಬಸ್ ವಾಪಸ್ಕರೆದುಕೊಂಡು ಬಂದು ಬಿಡಲಾಗುತ್ತದೆ.

ದಿವ್ಯ ದರ್ಶನ ಟಿಕೆಟ್ ದರ ಎಷ್ಟು?

ದಿವ್ಯ ದರ್ಶನ ಟೆಂಪರ್ ಟೂರ್ ಪ್ಯಾಕೇಜ್​ಗೆ ವಯಸ್ಕರಿಗೆ 450 ರೂ., ಮಕ್ಕಳಿಗೆ 350 ರೂ. ದರ ನಿಗದಿ ಮಾಡಲಾಗಿದೆ.

ದಿವ್ಯ ದರ್ಶನ ಟಿಕೆಟ್ ಬುಕಿಂಗ್ ಮಾಡುವುದು ಹೇಗೆ?

ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ ksrtc.in ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಬಿಎಂಟಿಸಿಯ ಸಂಪರ್ಕ ಸಂಖ್ಯೆ 080-22483777 ಅಥವಾ 7760991170 ಗೆ ಕರೆ ಮಾಡುವ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!