ಬೆಂಗಳೂರು, ಮೇ 29: ಕರ್ನಾಟಕ ರಾಜಧಾನಿ ಬೆಂಗಳೂರಿನ ಪ್ರಸಿದ್ದ ದೇವಾಲಯಗಳ ದರ್ಶನಕ್ಕಾಗಿ ಸಾರ್ವಜನಿಕರಿಗೆ ಬಿಎಂಟಿಸಿ (BMTC) ಹೊಸ ವಿಕೇಂಡ್ ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ‘ದಿವ್ಯ ದರ್ಶನ’ (Divya Darshana) ಹೆಸರಿನಲ್ಲಿ ಎಸಿ ಬಸ್ ಮೂಲಕ ಒಂದೇ ದಿನ ಬೆಂಗಳೂರಿನ 8 ಪ್ರಸಿದ್ಧ ದೇಗುಲಗಳ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ದೇವಾಲಯಗಳ ವೀಕ್ಷಣೆಯ ‘ಒನ್ ಡೇ ಟೆಂಪಲ್ ಟೂರ್’ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಬುಧವಾರ ಚಾಲನೆ ನೀಡಿದ್ದಾರೆ.
🚍 On May 28, 2025, Hon’ble Minister Sri Ramalinga Reddy inaugurated a new route under the Divya Darshana package tour.
The event was attended by senior officials from @BMTC_BENGALURU & @TransportDeptGoK including Dr. N. V. Prasad, Sri Ramachandran R., & Sri Abdul Ahad. pic.twitter.com/4xOY9h9dN2 ಇದನ್ನೂ ಓದಿ— BMTC (@BMTC_BENGALURU) May 28, 2025
ಪ್ರತಿ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜೆ ದಿನಗಳಲ್ಲಿ ಈ ಟೂರ್ ಪ್ಯಾಕೇಜ್ ಲಭ್ಯವಿರಲಿದೆ. ಅಲ್ಲದೆ, ಪೂರ್ತಿ ಸಂಖ್ಯೆಯ ಬುಕಿಂಗ್ ಆದರೆ ವಾರದ ಇತರ ದಿನಗಳಲ್ಲಿಯೂ ಸೇವೆ ಲಭ್ಯವಿರಲಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.
ಬೆಳಗ್ಗೆ 8-30ಕ್ಕೆ ಮೆಜೆಸ್ಟಿಕ್ನಿಂದ ಹೊರಟು ಸಂಜೆ 5-30 ರ ವರೆಗೆ ಎಸಿ ಬಸ್ ನಲ್ಲಿ 8 ಕಡೆ ಕರೆದೊಯ್ಯಲಾಗುತ್ತದೆ. ಮತ್ತೆ ಮೆಜೆಸ್ಟಿಕ್ಗೆ ಬಸ್ ವಾಪಸ್ಕರೆದುಕೊಂಡು ಬಂದು ಬಿಡಲಾಗುತ್ತದೆ.
ದಿವ್ಯ ದರ್ಶನ ಟೆಂಪರ್ ಟೂರ್ ಪ್ಯಾಕೇಜ್ಗೆ ವಯಸ್ಕರಿಗೆ 450 ರೂ., ಮಕ್ಕಳಿಗೆ 350 ರೂ. ದರ ನಿಗದಿ ಮಾಡಲಾಗಿದೆ.
ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ ksrtc.in ಮೂಲಕ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಬಿಎಂಟಿಸಿಯ ಸಂಪರ್ಕ ಸಂಖ್ಯೆ 080-22483777 ಅಥವಾ 7760991170 ಗೆ ಕರೆ ಮಾಡುವ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.