AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್
ಬಿಎಂಟಿಸಿ ( ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Apr 13, 2022 | 9:08 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಜನರ ಜೀವನಾಡಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಿಎಂಟಿಸಿ ಬಸ್ಗಳಲ್ಲಿ(BMTC) ಓಡಾಡುವ ಜನರಿಗೆ ಶಾಕ್ ಕಾದಿದೆ. ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ತಟ್ಟಲಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ.20ರಷ್ಟು ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು. ಆದ್ರೆ ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ಕಳೆದ ವಾರ BMTC ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ. ಈ ಬಾರಿ ದರ ಏರಿಸದಿದ್ರೆ ಬಸ್ ಓಡಿಸೋದು ಕಷ್ಟ ಎಂದು ಸಿಎಂ ಬೊಮ್ಮಾಯಿಯವರಿಗೆ ಬಿಎಂಟಿಸಿ ಸಂಸ್ಥೆ ಮನವರಿಕೆ ಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟಿಕೆಟ್ ದರ 35 ಶೇಕಡಾ ಏರಿಸಿದ್ರೆ ಜನರ ಗತಿ ಏನು? ಇಷ್ಟೊಂದು ಏರಿಕೆ ಅಸಾಧ್ಯ, ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಆದ್ರೆ ಸಿಎಂ ಒಪ್ಪಿದ್ರೆ ಜನರ ಜೇಬಿಗೆ ಕತ್ತರಿ ಬೀಳುವುದಂತೋ ಪಕ್ಕ.

35 ಶೇಕಡಾ ದರ ಏರಿಕೆಯಾದ್ರೆ ಸ್ಟೇಜ್ ವೈಸ್ ದರ ಎಷ್ಟಾಗುತ್ತೆ? ಆರಂಭಿಕ ದರ ಈಗ ಇರೋದು 5 ರೂ. 35% ಹೆಚ್ಚಾದ್ರೆ 6.75 ಪೈಸೆ ಆಗಲಿದೆ. ಈ ವೇಳೆ ಚಿಲ್ಲರೆ ಸಮಸ್ಯೆ ಎಂದು ಬಿಎಂಟಿಸಿ 7 ರೂ ನಿಗದಿ ಮಾಡಬಹುದು. ಇದೇ ರೀತಿ 10 ರೂ ಇದ್ದ ದರ 13 ರೂ. 15 ಇದ್ದ ದರ 20ರೂ ಹೀಗೆ ಏರಿಕೆ ಆಗಲಿದೆ. ಪ್ರಯಾಣಿಕರಿಗೆ ದೊಡ್ಡಮಟ್ಟದ ಹೊರೆ ಬೀಳಲಿದೆ.

ಇದನ್ನೂ ಓದಿ: ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

ಭಾವೈಕ್ಯತೆಗೆ ಸಾಕ್ಷಿಯಾದ ಹನುಮ ಮಾಲೆ; ಶ್ರೀರಾಮನ ಪೂಜೆ, ಹನುಮಾನ್ ಚಾಲೀಸಾ ಪಠಣೆಯಲ್ಲಿ ಮುಸ್ಲಿಮರು ಭಾಗಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು