Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್
ಬಿಎಂಟಿಸಿ ( ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Apr 13, 2022 | 9:08 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಜನರ ಜೀವನಾಡಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಿಎಂಟಿಸಿ ಬಸ್ಗಳಲ್ಲಿ(BMTC) ಓಡಾಡುವ ಜನರಿಗೆ ಶಾಕ್ ಕಾದಿದೆ. ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ತಟ್ಟಲಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ.20ರಷ್ಟು ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು. ಆದ್ರೆ ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ಕಳೆದ ವಾರ BMTC ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ. ಈ ಬಾರಿ ದರ ಏರಿಸದಿದ್ರೆ ಬಸ್ ಓಡಿಸೋದು ಕಷ್ಟ ಎಂದು ಸಿಎಂ ಬೊಮ್ಮಾಯಿಯವರಿಗೆ ಬಿಎಂಟಿಸಿ ಸಂಸ್ಥೆ ಮನವರಿಕೆ ಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟಿಕೆಟ್ ದರ 35 ಶೇಕಡಾ ಏರಿಸಿದ್ರೆ ಜನರ ಗತಿ ಏನು? ಇಷ್ಟೊಂದು ಏರಿಕೆ ಅಸಾಧ್ಯ, ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಆದ್ರೆ ಸಿಎಂ ಒಪ್ಪಿದ್ರೆ ಜನರ ಜೇಬಿಗೆ ಕತ್ತರಿ ಬೀಳುವುದಂತೋ ಪಕ್ಕ.

35 ಶೇಕಡಾ ದರ ಏರಿಕೆಯಾದ್ರೆ ಸ್ಟೇಜ್ ವೈಸ್ ದರ ಎಷ್ಟಾಗುತ್ತೆ? ಆರಂಭಿಕ ದರ ಈಗ ಇರೋದು 5 ರೂ. 35% ಹೆಚ್ಚಾದ್ರೆ 6.75 ಪೈಸೆ ಆಗಲಿದೆ. ಈ ವೇಳೆ ಚಿಲ್ಲರೆ ಸಮಸ್ಯೆ ಎಂದು ಬಿಎಂಟಿಸಿ 7 ರೂ ನಿಗದಿ ಮಾಡಬಹುದು. ಇದೇ ರೀತಿ 10 ರೂ ಇದ್ದ ದರ 13 ರೂ. 15 ಇದ್ದ ದರ 20ರೂ ಹೀಗೆ ಏರಿಕೆ ಆಗಲಿದೆ. ಪ್ರಯಾಣಿಕರಿಗೆ ದೊಡ್ಡಮಟ್ಟದ ಹೊರೆ ಬೀಳಲಿದೆ.

ಇದನ್ನೂ ಓದಿ: ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

ಭಾವೈಕ್ಯತೆಗೆ ಸಾಕ್ಷಿಯಾದ ಹನುಮ ಮಾಲೆ; ಶ್ರೀರಾಮನ ಪೂಜೆ, ಹನುಮಾನ್ ಚಾಲೀಸಾ ಪಠಣೆಯಲ್ಲಿ ಮುಸ್ಲಿಮರು ಭಾಗಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ