AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ.

ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್; ಶೇ.35ರಷ್ಟು ದರ ಏರಿಕೆಗೆ ಪ್ರಸ್ತಾವನೆ, ಸಿಎಂ ನಿರ್ಧಾರದ ಬಳಿಕ ದರ ಫಿಕ್ಸ್
ಬಿಎಂಟಿಸಿ ( ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Apr 13, 2022 | 9:08 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಜನರ ಜೀವನಾಡಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಿಎಂಟಿಸಿ ಬಸ್ಗಳಲ್ಲಿ(BMTC) ಓಡಾಡುವ ಜನರಿಗೆ ಶಾಕ್ ಕಾದಿದೆ. ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಶಾಕ್ ತಟ್ಟಲಿದೆ. ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಮಾಡಲಾಗಿದೆ. ಈಗಾಗಲೇ ಬಿಎಂಟಿಸಿ 2 ಬಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮೊದಲ ಬಾರಿ ಶೇ.20ರಷ್ಟು ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು. ಆದ್ರೆ ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ. ಕಳೆದ ವಾರ BMTC ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ತೈಲ ಬೆಲೆ, ಗ್ಯಾಸ್ ದರ, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದೆ. ಸತತ ನಷ್ಟದಿಂದ ಬಳಲಿ ಬೆಂಡಾಗಿ ನಷ್ಟದಲ್ಲಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಸಂಸ್ಥೆ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ. ಈ ಬಾರಿ ದರ ಏರಿಸದಿದ್ರೆ ಬಸ್ ಓಡಿಸೋದು ಕಷ್ಟ ಎಂದು ಸಿಎಂ ಬೊಮ್ಮಾಯಿಯವರಿಗೆ ಬಿಎಂಟಿಸಿ ಸಂಸ್ಥೆ ಮನವರಿಕೆ ಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟಿಕೆಟ್ ದರ 35 ಶೇಕಡಾ ಏರಿಸಿದ್ರೆ ಜನರ ಗತಿ ಏನು? ಇಷ್ಟೊಂದು ಏರಿಕೆ ಅಸಾಧ್ಯ, ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಆದ್ರೆ ಸಿಎಂ ಒಪ್ಪಿದ್ರೆ ಜನರ ಜೇಬಿಗೆ ಕತ್ತರಿ ಬೀಳುವುದಂತೋ ಪಕ್ಕ.

35 ಶೇಕಡಾ ದರ ಏರಿಕೆಯಾದ್ರೆ ಸ್ಟೇಜ್ ವೈಸ್ ದರ ಎಷ್ಟಾಗುತ್ತೆ? ಆರಂಭಿಕ ದರ ಈಗ ಇರೋದು 5 ರೂ. 35% ಹೆಚ್ಚಾದ್ರೆ 6.75 ಪೈಸೆ ಆಗಲಿದೆ. ಈ ವೇಳೆ ಚಿಲ್ಲರೆ ಸಮಸ್ಯೆ ಎಂದು ಬಿಎಂಟಿಸಿ 7 ರೂ ನಿಗದಿ ಮಾಡಬಹುದು. ಇದೇ ರೀತಿ 10 ರೂ ಇದ್ದ ದರ 13 ರೂ. 15 ಇದ್ದ ದರ 20ರೂ ಹೀಗೆ ಏರಿಕೆ ಆಗಲಿದೆ. ಪ್ರಯಾಣಿಕರಿಗೆ ದೊಡ್ಡಮಟ್ಟದ ಹೊರೆ ಬೀಳಲಿದೆ.

ಇದನ್ನೂ ಓದಿ: ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

ಭಾವೈಕ್ಯತೆಗೆ ಸಾಕ್ಷಿಯಾದ ಹನುಮ ಮಾಲೆ; ಶ್ರೀರಾಮನ ಪೂಜೆ, ಹನುಮಾನ್ ಚಾಲೀಸಾ ಪಠಣೆಯಲ್ಲಿ ಮುಸ್ಲಿಮರು ಭಾಗಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್