AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC NIMMBUS App: ಬಿಎಂಟಿಸಿ ಬಹುನಿರೀಕ್ಷಿತ ನಿಮ್ ಬಸ್ ಮೊಬೈಲ್​ ಆ್ಯಪ್ ಮುಂದಿನವಾರ ಬಿಡುಗಡೆ

ಬಿಎಂಟಿಸಿಯ ಬಹುನಿರೀಕ್ಷಿತ NIMMBUS ಅಪ್ಲಿಕೇಶನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇತರ ವೈಶಿಷ್ಟ್ಯಗಳೊಂದಿಗೆ BMTC ಬಸ್‌ಗಳ ನೈಜ-ಸಮಯದ ಮಾಹಿತಿ ನೀಡಲಿದ್ದು, ಶೇಕಡಾ 90 ರಷ್ಟು ನಿಖರತೆಯನ್ನು ಪಡೆಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

BMTC NIMMBUS App: ಬಿಎಂಟಿಸಿ ಬಹುನಿರೀಕ್ಷಿತ ನಿಮ್ ಬಸ್ ಮೊಬೈಲ್​ ಆ್ಯಪ್ ಮುಂದಿನವಾರ ಬಿಡುಗಡೆ
ಬಿಎಂಟಿಸಿ
Follow us
Prajwal D'Souza
| Updated By: Digi Tech Desk

Updated on:Apr 20, 2023 | 12:11 PM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (Bengaluru Metropolitan Transport Corporation – BMTC) ಬಿಎಂಟಿಸಿ ಬಹು ನಿರೀಕ್ಷಿತ ನಿಮ್ಮ ​ಬಸ್ ಆ್ಯಪ್ ಮುಂದಿನ ವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ (ಮಾರ್ಚ್ 10) ತಿಳಿಸಿದ್ದಾರೆ. ಐಒಸ್ ಮತ್ತು ಆಂಡ್ರಾಯ್ಡ್​ ಪ್ಲಾಟ್​ಫಾರ್ಮ್​ಗಳಲ್ಲಿ ಶೀಘ್ರವೇ ಆ್ಯಪ್ ಬಿಡುಗಡೆಯಾಗುತ್ತಿದೆ. ಈ ಹಿಂದೆ ಆ್ಯಪ್ ಬಿಡುಗಡೆಗೆಂದು ನಿಗದಿಯಾಗಿದ್ದ ಹಲವು ಗಡುವುಗಳನ್ನು ಬಿಎಂಟಿಸಿ ಮೀರಿತ್ತು. ಇದೀಗ ಶೀಘ್ರದಲ್ಲೇ ಪ್ರಯಾಣಿಕರಿಗೆ ಆ್ಯಪ್ ಲಭ್ಯವಾಗಲಿದೆ. ಈ ಬಗ್ಗೆ ನ್ಯೂಸ್9 ನೊಂದಿಗೆ ಮಾತನಾಡಿದ ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನದ ನಿರ್ದೇಶಕ ಸೂರ್ಯ ಸೇನ್, ಸದ್ಯ ಬೀಟಾ ಪರೀಕ್ಷೆ ನಡೆಯುತ್ತಿದೆ. ಪ್ರಸ್ತುತ ಶೇಕಡಾ 90 ರಷ್ಟು ನಿಖರತೆಯನ್ನು ಪಡೆಯುತ್ತಿದ್ದೇವೆ. ನಾವು ಬಹುಶಃ ಇನ್ನೊಂದು ವಾರದ ಸಮಯದಲ್ಲಿ NIMMBUS ಅಪ್ಲಿಕೇಶನ್ ಅನ್ನು ಪ್ರಾರಂಭಿಸುತ್ತೇವೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ದಿನಗಳಷ್ಟೇ ಬಾಕಿ ಇದೆ. ಅದರಂತೆ ಭಾರತೀಯ ಚುನಾವಣಾ ಆಯೋಗದ (ECI) ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿರುವ ಹಿನ್ನಲೆ ಮಾರ್ಚ್ 8 ರ ಬುಧವಾರದಂದು ನಡೆಯಬೇಕಿದ್ದ NIMMBUS ಆ್ಯಪ್ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

“ನನಗೆ ಹೆಚ್ಚುವರಿ ಚುನಾವಣಾ ಉಸ್ತುವಾರಿ ವಹಿಸಿರುವುದರಿಂದ ಆ ಬಗ್ಗೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಚುನಾವಣಾ ಆಯೋಗದ ಅಧಿಕಾರಿಗಳು ಮೂರು ದಿನಗಳ ಕಾಲ ರಾಜ್ಯದಲ್ಲೇ ಇರುತ್ತಾರೆ, ಬಹುಶಃ ಅಧಿಕಾರಿಗಳು ತೆರಳಿದ ನಂತರ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡುತ್ತೇವೆ. ಆದರೆ ಲೋಕಾರ್ಪಣೆ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ ಎಂದು ಸೇನ್ ಹೇಳಿದರು. “ಎರಡು-ಮೂರು ತಿಂಗಳ ಹಿಂದೆ ನಾವು ಎಲ್ಲಾ ಬಸ್‌ಗಳಲ್ಲಿ ಸಾಧನಗಳನ್ನು ಅಳವಿಡಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದೇವೆ. ಐದು ಸಾವಿರ ಬಸ್‌ಗಳಿಗೆ ಅಳವಡಿಸಲು ಸೂಚಿಸಲಾಗಿತ್ತು. ಇದಲ್ಲದೇ ಎಲೆಕ್ಟ್ರಿಕ್ ಬಸ್​ಗಳೂ ಸೇರಿದಂತೆ ಎಲ್ಲಾ ಹೊಸ ಬಸ್‌ಗಳಲ್ಲಿ ಸಾಧನಗಳನ್ನು ಅಳವಡಿಸಲಾಗಿದೆ. ನಾವು ಸುಮಾರು 6,000 ಬಸ್‌ಗಳನ್ನು ಹೊಂದಿದ್ದೇವೆ, ಅವುಗಳನ್ನು ಪ್ರಸ್ತುತ ಟ್ರ್ಯಾಕ್ ಮಾಡಲಾಗುತ್ತಿದೆ” ಎಂದು ಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಚಾಲಕರ ಜೇಬಿನಿಂದಲೇ ರಿಯಾಯ್ತಿ ಟ್ರಾಫಿಕ್ ದಂಡ ಪಾವತಿಗೆ ಮುಂದಾದ ಬಿಎಂಟಿಸಿ, ಕೆರಳಿ ಕೆಂಡವಾದ ಸಿಬ್ಬಂದಿ!

ಈ ಮೊದಲು ಡಿಸೆಂಬರ್ 13ಕ್ಕೆ ಆ್ಯಪ್ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಕೊನೆಯ ಕ್ಷಣದಲ್ಲಿ ಒಂದಿಷ್ಟು ಸಮಸ್ಯೆಗಳು (ಬಗ್) ಕಾಣಿಸಿಕೊಂಡಿದ್ದರಿಂದ ನಂತರ ಡಿಸೆಂಬರ್ 23ಕ್ಕೆ ಮುಂದೂಡಲಾಯಿತು. ಆದರೆ ಅಂದೂ ಸಹ ಲಾಂಚ್ ಮಾಡಲು ಸಾಧ್ಯವಾಗಲಿಲ್ಲ. ಕಂಡುಬಂದ ದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಲೋಕಾರ್ಪಣೆಯನ್ನು ಮುಂದೂಡಲಾಗಿತ್ತು. ಅದಾದ ನಂತರ ಮಾರ್ಚ್ 8ರಂದು ಬಿಡುಗಡೆಗೆ ಪ್ಲಾನ್ ಹಾಕಲಾಗಿತ್ತು. ನಿಮ್ಮ​ಬಸ್ ಆ್ಯಪ್​ನಲ್ಲಿ ಬಿಎಂಟಿಸಿ ಬಸ್​ಗಳ ಕ್ಷಣಕ್ಷಣದ ಸಂಚಾರ ವಿವರ (Real-time tracking) ಲಭ್ಯವಾಗಲಿದೆ. ಅದರ ಜೊತೆಗೆ ತುರ್ತು ಪರಿಸ್ಥಿತಿಯ ವೇಳೆ ಗಮನ ಸೆಳೆಯಲು ಎಸ್​ಒಎಸ್ (SOS) ಎಚ್ಚರಿಕೆಯ ಸೌಲಭ್ಯವೂ ಲಭ್ಯವಿದೆ. ಪ್ರಯಾಣಿಕರು ತಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸವನ್ನು ಬಳಸಿಕೊಂಡು ಸೈನ್ ಅಪ್ ಮಾಡುವ ಮೂಲಕ ಅಪ್ಲಿಕೇಶನ್ ಅನ್ನು ಬಳಸಬಹುದಾಗಿದೆ. ಈ ಆ್ಯಪ್ ಪ್ರಸ್ತುತ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಲಭ್ಯವಿದೆ.

ವರದಿ: ಪ್ರಜ್ವಲ್ ಡಿ’ಸೋಜಾ, ನ್ಯೂಸ್9

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Thu, 9 March 23

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!