AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ

ಚಿಕ್ಕಬಳ್ಳಾಪುರ ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಒಂದು ದಿನದ ಪ್ರವಾಸ ಪ್ಯಾಕೇಜ್ ಶುರುವಾಗಿದ್ದು, ಇದು ಯಶಸ್ಸು ಕಂಡಿದ್ದರೆ. ಹಾಗಿದ್ದರೆ ಈ ಪ್ಯಾಕೇಜ್​ನ ವಿಶೇಷತೆಗಳೇನು? ಪ್ರವಾಸದ ದರ ಎಷ್ಟು ಎಂಬ ಎಲ್ಲ ಮಾಹಿತಿ ಇಲ್ಲಿದೆ.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ
ಬಿಎಂಟಿಸಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 17, 2024 | 10:44 AM

Share

ಚಿಕ್ಕಬಳ್ಳಾಪುರ, ಜುಲೈ 17: ಕೇವಲ 500 ರೂಪಾಯಿಗಳಲ್ಲಿ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಒಂದು ದಿನದ ಪ್ರವಾಸ ಪ್ಯಾಕೇಜ್ (One Day Package) ಯಶಸ್ಸು ಕಂಡಿದೆ. ಮೊದಲಿಗೆ ಎರಡು ಬಸ್​ಗಳಿಂದ ಆರಂಭವಾಗಿದ್ದ ಪ್ಯಾಕೇಜ್​ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ.

ಬಿಎಂಟಿಸಿಯ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಒಂದು ದಿನದ ಪ್ರವಾಸಕ್ಕೆ ಕೇವಲ 500 ರೂಪಾಯಿ ನಿಗದಿಗೊಳಿಸಿ ಒಂದು ದಿನದ ಪ್ಯಾಕೇಜ್ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡುವ ಬಸ್​ ಚಿಕ್ಕಬಳ್ಳಾಪುರ ತಾಲೂಕಿನ ಪ್ರವಾಸಿ ತಾಣಗಳಾದ ಕಣಿವೆಬಸವಣ್ಣ, ಬೋಗನಂದೀಶ್ವರ ದೇವಾಲಯ, ಸರ್.ಎಂ.ವಿಶ್ವೇಶ್ವರಯ್ಯ ಸ್ಮಾರಕ, ರಂಗಸ್ಥಳ ಸೇರಿದಂತೆ ಈಶಾ ಫೌಂಡೇಶನ್​ವರೆಗೆ ಹೋಗುತ್ತದೆ. ಮಧ್ಯಾಹ್ನ 12 ರಿಂದ ರಾತ್ರಿ 9:30ರ ವರೆಗೆ ಪ್ರವಾಸ ಇರುತ್ತೆ.

ಮೊದಲು ಎರಡು ಬಸ್ ಗಳಿಂದ ಆರಂಭವಾದ ಟೂರ್ ಪ್ಯಾಕೇಜ್ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ. ವೀಕೆಂಡ್ ಸೇರಿದಂತೆ ರಜಾ ದಿನಗಳಲ್ಲಿ, ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ.

ರಾಜಧಾನಿ ಬೆಂಗಳೂರಿಂದ ಕಾರಿನಲ್ಲಿ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟರೆ, ಹೆದ್ದಾರಿ ಟೊಲ್​ಗೆಂದೇ ಸುಮಾರು 500 ರೂಪಾಯಿ ಕಟ್ಟಬೇಕು. ಹಾಗೂ ಟ್ರಾಫಿಕ್ ಕಿರಿಕಿರಿ ಅನುಭವಿಸಬೇಕು. ಆದರೆ ಬಿಎಂಟಿಸಿ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಹಾಯಾಗಿ ಕೇವಲ 500 ರೂಪಾಯಿಯಲ್ಲಿ ಒಂದು ದಿನ ಪ್ರವಾಸ ಮಾಡಬಹುದು ಎಂದು ಪ್ರವಾಸಿ ಚಿನ್ಮಯಿ ಬಿಎಂಟಿಸಿ ಪ್ಯಾಕೆಜ್​ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ವಿಸ್ತರಣೆಯಾದಂತೆ, ಬಿಎಂಟಿಸಿ ಬಸ್​ಗೆ ಬೇಡಿಕೆ ಕಡಿಮೆಯಾಗುತ್ತಿದೆ, ಇದರಿಂದ ಬಿಎಂಟಿಸಿ ಉಳಿವಿಗಾಗಿ ದಿನನಿತ್ಯದ ಕಾರ್ಯಾಚರಣೆ ಜೊತೆಗೆ ಪ್ರವಾಸದ ಪ್ಯಾಕೇಜ್ ಮಾಡಿರೋದು ಲಾಭದಾಯಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​