AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ

ಚಿಕ್ಕಬಳ್ಳಾಪುರ ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಒಂದು ದಿನದ ಪ್ರವಾಸ ಪ್ಯಾಕೇಜ್ ಶುರುವಾಗಿದ್ದು, ಇದು ಯಶಸ್ಸು ಕಂಡಿದ್ದರೆ. ಹಾಗಿದ್ದರೆ ಈ ಪ್ಯಾಕೇಜ್​ನ ವಿಶೇಷತೆಗಳೇನು? ಪ್ರವಾಸದ ದರ ಎಷ್ಟು ಎಂಬ ಎಲ್ಲ ಮಾಹಿತಿ ಇಲ್ಲಿದೆ.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ
ಬಿಎಂಟಿಸಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Jul 17, 2024 | 10:44 AM

Share

ಚಿಕ್ಕಬಳ್ಳಾಪುರ, ಜುಲೈ 17: ಕೇವಲ 500 ರೂಪಾಯಿಗಳಲ್ಲಿ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಒಂದು ದಿನದ ಪ್ರವಾಸ ಪ್ಯಾಕೇಜ್ (One Day Package) ಯಶಸ್ಸು ಕಂಡಿದೆ. ಮೊದಲಿಗೆ ಎರಡು ಬಸ್​ಗಳಿಂದ ಆರಂಭವಾಗಿದ್ದ ಪ್ಯಾಕೇಜ್​ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ.

ಬಿಎಂಟಿಸಿಯ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಒಂದು ದಿನದ ಪ್ರವಾಸಕ್ಕೆ ಕೇವಲ 500 ರೂಪಾಯಿ ನಿಗದಿಗೊಳಿಸಿ ಒಂದು ದಿನದ ಪ್ಯಾಕೇಜ್ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡುವ ಬಸ್​ ಚಿಕ್ಕಬಳ್ಳಾಪುರ ತಾಲೂಕಿನ ಪ್ರವಾಸಿ ತಾಣಗಳಾದ ಕಣಿವೆಬಸವಣ್ಣ, ಬೋಗನಂದೀಶ್ವರ ದೇವಾಲಯ, ಸರ್.ಎಂ.ವಿಶ್ವೇಶ್ವರಯ್ಯ ಸ್ಮಾರಕ, ರಂಗಸ್ಥಳ ಸೇರಿದಂತೆ ಈಶಾ ಫೌಂಡೇಶನ್​ವರೆಗೆ ಹೋಗುತ್ತದೆ. ಮಧ್ಯಾಹ್ನ 12 ರಿಂದ ರಾತ್ರಿ 9:30ರ ವರೆಗೆ ಪ್ರವಾಸ ಇರುತ್ತೆ.

ಮೊದಲು ಎರಡು ಬಸ್ ಗಳಿಂದ ಆರಂಭವಾದ ಟೂರ್ ಪ್ಯಾಕೇಜ್ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ. ವೀಕೆಂಡ್ ಸೇರಿದಂತೆ ರಜಾ ದಿನಗಳಲ್ಲಿ, ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ.

ರಾಜಧಾನಿ ಬೆಂಗಳೂರಿಂದ ಕಾರಿನಲ್ಲಿ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟರೆ, ಹೆದ್ದಾರಿ ಟೊಲ್​ಗೆಂದೇ ಸುಮಾರು 500 ರೂಪಾಯಿ ಕಟ್ಟಬೇಕು. ಹಾಗೂ ಟ್ರಾಫಿಕ್ ಕಿರಿಕಿರಿ ಅನುಭವಿಸಬೇಕು. ಆದರೆ ಬಿಎಂಟಿಸಿ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಹಾಯಾಗಿ ಕೇವಲ 500 ರೂಪಾಯಿಯಲ್ಲಿ ಒಂದು ದಿನ ಪ್ರವಾಸ ಮಾಡಬಹುದು ಎಂದು ಪ್ರವಾಸಿ ಚಿನ್ಮಯಿ ಬಿಎಂಟಿಸಿ ಪ್ಯಾಕೆಜ್​ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ವಿಸ್ತರಣೆಯಾದಂತೆ, ಬಿಎಂಟಿಸಿ ಬಸ್​ಗೆ ಬೇಡಿಕೆ ಕಡಿಮೆಯಾಗುತ್ತಿದೆ, ಇದರಿಂದ ಬಿಎಂಟಿಸಿ ಉಳಿವಿಗಾಗಿ ದಿನನಿತ್ಯದ ಕಾರ್ಯಾಚರಣೆ ಜೊತೆಗೆ ಪ್ರವಾಸದ ಪ್ಯಾಕೇಜ್ ಮಾಡಿರೋದು ಲಾಭದಾಯಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!