AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ

ಚಿಕ್ಕಬಳ್ಳಾಪುರ ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಒಂದು ದಿನದ ಪ್ರವಾಸ ಪ್ಯಾಕೇಜ್ ಶುರುವಾಗಿದ್ದು, ಇದು ಯಶಸ್ಸು ಕಂಡಿದ್ದರೆ. ಹಾಗಿದ್ದರೆ ಈ ಪ್ಯಾಕೇಜ್​ನ ವಿಶೇಷತೆಗಳೇನು? ಪ್ರವಾಸದ ದರ ಎಷ್ಟು ಎಂಬ ಎಲ್ಲ ಮಾಹಿತಿ ಇಲ್ಲಿದೆ.

ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ
ಬಿಎಂಟಿಸಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Jul 17, 2024 | 10:44 AM

Share

ಚಿಕ್ಕಬಳ್ಳಾಪುರ, ಜುಲೈ 17: ಕೇವಲ 500 ರೂಪಾಯಿಗಳಲ್ಲಿ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಐದು ಪ್ರವಾಸಿ ತಾಣಗಳನ್ನ ತೋರಿಸುವ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಒಂದು ದಿನದ ಪ್ರವಾಸ ಪ್ಯಾಕೇಜ್ (One Day Package) ಯಶಸ್ಸು ಕಂಡಿದೆ. ಮೊದಲಿಗೆ ಎರಡು ಬಸ್​ಗಳಿಂದ ಆರಂಭವಾಗಿದ್ದ ಪ್ಯಾಕೇಜ್​ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ.

ಬಿಎಂಟಿಸಿಯ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಒಂದು ದಿನದ ಪ್ರವಾಸಕ್ಕೆ ಕೇವಲ 500 ರೂಪಾಯಿ ನಿಗದಿಗೊಳಿಸಿ ಒಂದು ದಿನದ ಪ್ಯಾಕೇಜ್ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡುವ ಬಸ್​ ಚಿಕ್ಕಬಳ್ಳಾಪುರ ತಾಲೂಕಿನ ಪ್ರವಾಸಿ ತಾಣಗಳಾದ ಕಣಿವೆಬಸವಣ್ಣ, ಬೋಗನಂದೀಶ್ವರ ದೇವಾಲಯ, ಸರ್.ಎಂ.ವಿಶ್ವೇಶ್ವರಯ್ಯ ಸ್ಮಾರಕ, ರಂಗಸ್ಥಳ ಸೇರಿದಂತೆ ಈಶಾ ಫೌಂಡೇಶನ್​ವರೆಗೆ ಹೋಗುತ್ತದೆ. ಮಧ್ಯಾಹ್ನ 12 ರಿಂದ ರಾತ್ರಿ 9:30ರ ವರೆಗೆ ಪ್ರವಾಸ ಇರುತ್ತೆ.

ಮೊದಲು ಎರಡು ಬಸ್ ಗಳಿಂದ ಆರಂಭವಾದ ಟೂರ್ ಪ್ಯಾಕೇಜ್ ಈಗ 30 ಬಸ್​ಗಳ ವರೆಗೆ ಬಂದು ನಿಂತಿದೆ. ವೀಕೆಂಡ್ ಸೇರಿದಂತೆ ರಜಾ ದಿನಗಳಲ್ಲಿ, ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ.

ರಾಜಧಾನಿ ಬೆಂಗಳೂರಿಂದ ಕಾರಿನಲ್ಲಿ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟರೆ, ಹೆದ್ದಾರಿ ಟೊಲ್​ಗೆಂದೇ ಸುಮಾರು 500 ರೂಪಾಯಿ ಕಟ್ಟಬೇಕು. ಹಾಗೂ ಟ್ರಾಫಿಕ್ ಕಿರಿಕಿರಿ ಅನುಭವಿಸಬೇಕು. ಆದರೆ ಬಿಎಂಟಿಸಿ ಹಾವಾನಿಯಂತ್ರಿತ ಓಲ್ವೋ ಬಸ್​ಗಳಲ್ಲಿ ಹಾಯಾಗಿ ಕೇವಲ 500 ರೂಪಾಯಿಯಲ್ಲಿ ಒಂದು ದಿನ ಪ್ರವಾಸ ಮಾಡಬಹುದು ಎಂದು ಪ್ರವಾಸಿ ಚಿನ್ಮಯಿ ಬಿಎಂಟಿಸಿ ಪ್ಯಾಕೆಜ್​ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ವಿಸ್ತರಣೆಯಾದಂತೆ, ಬಿಎಂಟಿಸಿ ಬಸ್​ಗೆ ಬೇಡಿಕೆ ಕಡಿಮೆಯಾಗುತ್ತಿದೆ, ಇದರಿಂದ ಬಿಎಂಟಿಸಿ ಉಳಿವಿಗಾಗಿ ದಿನನಿತ್ಯದ ಕಾರ್ಯಾಚರಣೆ ಜೊತೆಗೆ ಪ್ರವಾಸದ ಪ್ಯಾಕೇಜ್ ಮಾಡಿರೋದು ಲಾಭದಾಯಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!