AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತಷ್ಟು ಸಂಚರಿಸಲಿವೆ ಇವಿ ಬಸ್​​: ಟಾಟಾ ಕಂಪನಿಯಿಂದ 921 ವಿದ್ಯುತ್​ ಚಾಲಿತ ಬಸ್​​ ಖರೀದಿ

ಬಿಎಂಟಿಸಿ ಮೊದಲ ಬಾರಿಗೆ ಟಾಟಾ ಕಂಪನಿಯಿಂದ 921 ಇವಿ ಬಸ್​​ಗಳನ್ನು ಖರೀದಿಸಿದ್ದು, ಇನ್ನು ಮೂರು ತಿಂಗಳಲ್ಲಿ ನಗರದ ರಸ್ತೆಗಳಲ್ಲಿ ಸಂಚರಿಸಲಿವೆ. ಈ ಬಸ್​ಗಳ ವಿಶೇಷತೆ ಇಲ್ಲಿದೆ.

ಬೆಂಗಳೂರಲ್ಲಿ ಮತ್ತಷ್ಟು ಸಂಚರಿಸಲಿವೆ ಇವಿ ಬಸ್​​: ಟಾಟಾ ಕಂಪನಿಯಿಂದ 921 ವಿದ್ಯುತ್​ ಚಾಲಿತ ಬಸ್​​ ಖರೀದಿ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: ವಿವೇಕ ಬಿರಾದಾರ|

Updated on: Jul 28, 2023 | 12:52 PM

Share

ಬೆಂಗಳೂರು: ಡೀಸೆಲ್​ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಿಎಂಟಿಸಿ (BMTC) ವಿದ್ಯುತ್​ ಚಾಲಿತ ಬಸ್ (Electric Bus) ​ಗಳತ್ತ ಮುಖ ಮಾಡಿದೆ. ಸಂಸ್ಥೆ JBM ಹಾಗೂ ಅಶೋಕ್​ ಲೇ ಲ್ಯಾಂಡ್​ ಕಂಪನಿಯಿಂದ ಈಗಾಗಲೆ 390 ಬಸ್​​ಗಳನ್ನು ಖರೀದಿಸಿದೆ. ಇದೀಗ ಬಿಎಂಟಿಸಿ ಮೊದಲ ಬಾರಿಗೆ ಟಾಟಾ ಕಂಪನಿಯಿಂದ (TATA Company) 921 ಇವಿ ಬಸ್​​ಗಳನ್ನು ಖರೀದಿಸಿ ರಸ್ತೆಗೆ ಇಳಿಸುತ್ತಿದೆ. ಇಂದು (ಜು.28) ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಈ ಬಸ್​ಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಸಿರು ನಿಶಾನೆ ತೋರಿಸಲಿದ್ದಾರೆ. ಫೇಮ್ 2 ಯೋಜನೆಯಡಿ 921 ಬಸ್​ಗಳನ್ನು ಖರೀದಿಸಲಾಗಿದ್ದು, ಮುಂದಿನ ಮೂರು ತಿಂಗಳಿನಲ್ಲಿ ನಗರದ ರಸ್ತೆಗಳಲ್ಲಿ ಸಂಚರಿಸಲಿವೆ. ಈ ಮೂಲಕ ಸಂಸ್ಥೆ ಒಟ್ಟು 1,311 ಎಲೆಕ್ಟ್ರಿಕ್​ ಬಸ್​ಗಳನ್ನು ಹೊಂದಿದಂತಾಗುತ್ತದೆ.

ಬಿಎಂಟಿಸಿ ಟಾಟಾ ಇವಿ ಬಸ್ ವಿಶೇಷತೆಯೇನು?

ಪರಿಸರ ಸ್ನೇಹಿ, ಮಾಲಿನ್ಯರಹಿತ ಬಸ್​ಗಳಾಗಿವೆ. ಅತಿ ಕಡಿಮೆ ಎತ್ತರದ ಬಸ್ (ಲೋ ಪ್ಲೋರ್ ಬಸ್) ಬಸ್​ಗಳಾಗಿದ್ದು ಅಂಗವಿಕಲರು, ಹಿರಿಯ ನಾಗರಿಕರು ಸುಲಭವಾಗಿ ಬಸ್​ ಹತ್ತಬಹುದಾಗಿದೆ. 12 ಅಡಿ ಉದ್ದದ ಬಸ್​ನಲ್ಲಿ 35 ಜನರಿಗೆ ಮಾತ್ರ ಆಸನದ ವ್ಯವಸ್ಥೆ ಇದೆ. ನಾಲ್ಕು ಕಡೆ ಸಿಸಿಟಿವಿ ಅಳವಡಿಸಲಾಗಿದೆ. ಒಂದು ಬಾರಿ ಚಾರ್ಜ್ ಮಾಡಿದರೇ 200 ಕಿ.ಮೀ. ಚಲಿಸಬಲ್ಲದು. ಡ್ರೈವರ್ ಎಕ್ಸ್ ಲೇಟರ್ ಒತ್ತದಿದ್ದರೇ ಆಟೋಮೆಟಿಕ್ ಚಾರ್ಜಿಂಗ್ ಆಗುತ್ತದೆ. ಖಾಸಗಿ ಚಾಲಕರು, ನಿರ್ವಾಹಕರು ಮಾತ್ರ ಬಿಎಂಟಿಸಿ ಸಿಬ್ಬಂದಿಗಳಿರುತ್ತಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಟಾಟಾ ಕಂಪನಿಯಿಂದಲೇ ನಿರ್ವಹಣೆ

ಇನ್ನು ಈ ಬಸ್​​ಗಳ ನಿರ್ವಹಣೆಯನ್ನ ಟಾಟಾ ಕಂಪನಿಯೇ ಮಾಡುತ್ತದೆ. ಬಸ್ ಕಂಪನಿಯೆ ಚಾಲಕರನ್ನ ನೇಮಿಸಿರುತ್ತದೆ. ಕಂಡಕ್ಟರ್ ಬಿಎಂಟಿಸಿ ಕಡೆಯಿಂದ ಇರುತ್ತಾರೆ. ಇನ್ನು ಈ ಬಸ್​​ಗಳಿಗೆ ಶಾಂತಿ ನಗರ ಹಾಗೂ ಯಶವಂತಪುರ ಡಿಪೋಗಳಲ್ಲಿ ಚಾರ್ಜಿಂಗ್ ಸ್ಟೇಷನ್ ವ್ಯವಸ್ಥೆ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ