AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತಷ್ಟು ಸಂಚರಿಸಲಿವೆ ಇವಿ ಬಸ್​​: ಟಾಟಾ ಕಂಪನಿಯಿಂದ 921 ವಿದ್ಯುತ್​ ಚಾಲಿತ ಬಸ್​​ ಖರೀದಿ

ಬಿಎಂಟಿಸಿ ಮೊದಲ ಬಾರಿಗೆ ಟಾಟಾ ಕಂಪನಿಯಿಂದ 921 ಇವಿ ಬಸ್​​ಗಳನ್ನು ಖರೀದಿಸಿದ್ದು, ಇನ್ನು ಮೂರು ತಿಂಗಳಲ್ಲಿ ನಗರದ ರಸ್ತೆಗಳಲ್ಲಿ ಸಂಚರಿಸಲಿವೆ. ಈ ಬಸ್​ಗಳ ವಿಶೇಷತೆ ಇಲ್ಲಿದೆ.

ಬೆಂಗಳೂರಲ್ಲಿ ಮತ್ತಷ್ಟು ಸಂಚರಿಸಲಿವೆ ಇವಿ ಬಸ್​​: ಟಾಟಾ ಕಂಪನಿಯಿಂದ 921 ವಿದ್ಯುತ್​ ಚಾಲಿತ ಬಸ್​​ ಖರೀದಿ
ಸಾಂದರ್ಭಿಕ ಚಿತ್ರ
ವಿನಾಯಕ ಬಡಿಗೇರ್​
| Edited By: |

Updated on: Jul 28, 2023 | 12:52 PM

Share

ಬೆಂಗಳೂರು: ಡೀಸೆಲ್​ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಿಎಂಟಿಸಿ (BMTC) ವಿದ್ಯುತ್​ ಚಾಲಿತ ಬಸ್ (Electric Bus) ​ಗಳತ್ತ ಮುಖ ಮಾಡಿದೆ. ಸಂಸ್ಥೆ JBM ಹಾಗೂ ಅಶೋಕ್​ ಲೇ ಲ್ಯಾಂಡ್​ ಕಂಪನಿಯಿಂದ ಈಗಾಗಲೆ 390 ಬಸ್​​ಗಳನ್ನು ಖರೀದಿಸಿದೆ. ಇದೀಗ ಬಿಎಂಟಿಸಿ ಮೊದಲ ಬಾರಿಗೆ ಟಾಟಾ ಕಂಪನಿಯಿಂದ (TATA Company) 921 ಇವಿ ಬಸ್​​ಗಳನ್ನು ಖರೀದಿಸಿ ರಸ್ತೆಗೆ ಇಳಿಸುತ್ತಿದೆ. ಇಂದು (ಜು.28) ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಈ ಬಸ್​ಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಸಿರು ನಿಶಾನೆ ತೋರಿಸಲಿದ್ದಾರೆ. ಫೇಮ್ 2 ಯೋಜನೆಯಡಿ 921 ಬಸ್​ಗಳನ್ನು ಖರೀದಿಸಲಾಗಿದ್ದು, ಮುಂದಿನ ಮೂರು ತಿಂಗಳಿನಲ್ಲಿ ನಗರದ ರಸ್ತೆಗಳಲ್ಲಿ ಸಂಚರಿಸಲಿವೆ. ಈ ಮೂಲಕ ಸಂಸ್ಥೆ ಒಟ್ಟು 1,311 ಎಲೆಕ್ಟ್ರಿಕ್​ ಬಸ್​ಗಳನ್ನು ಹೊಂದಿದಂತಾಗುತ್ತದೆ.

ಬಿಎಂಟಿಸಿ ಟಾಟಾ ಇವಿ ಬಸ್ ವಿಶೇಷತೆಯೇನು?

ಪರಿಸರ ಸ್ನೇಹಿ, ಮಾಲಿನ್ಯರಹಿತ ಬಸ್​ಗಳಾಗಿವೆ. ಅತಿ ಕಡಿಮೆ ಎತ್ತರದ ಬಸ್ (ಲೋ ಪ್ಲೋರ್ ಬಸ್) ಬಸ್​ಗಳಾಗಿದ್ದು ಅಂಗವಿಕಲರು, ಹಿರಿಯ ನಾಗರಿಕರು ಸುಲಭವಾಗಿ ಬಸ್​ ಹತ್ತಬಹುದಾಗಿದೆ. 12 ಅಡಿ ಉದ್ದದ ಬಸ್​ನಲ್ಲಿ 35 ಜನರಿಗೆ ಮಾತ್ರ ಆಸನದ ವ್ಯವಸ್ಥೆ ಇದೆ. ನಾಲ್ಕು ಕಡೆ ಸಿಸಿಟಿವಿ ಅಳವಡಿಸಲಾಗಿದೆ. ಒಂದು ಬಾರಿ ಚಾರ್ಜ್ ಮಾಡಿದರೇ 200 ಕಿ.ಮೀ. ಚಲಿಸಬಲ್ಲದು. ಡ್ರೈವರ್ ಎಕ್ಸ್ ಲೇಟರ್ ಒತ್ತದಿದ್ದರೇ ಆಟೋಮೆಟಿಕ್ ಚಾರ್ಜಿಂಗ್ ಆಗುತ್ತದೆ. ಖಾಸಗಿ ಚಾಲಕರು, ನಿರ್ವಾಹಕರು ಮಾತ್ರ ಬಿಎಂಟಿಸಿ ಸಿಬ್ಬಂದಿಗಳಿರುತ್ತಾರೆ.

ಇದನ್ನೂ ಓದಿ: ಇನ್ಮುಂದೆ ಈ ಎರಡು ಹೊಸ ಮಾರ್ಗಗಳಲ್ಲೂ ಸಂಚರಿಸಲಿವೆ BMTC ಬಸ್​​: ಇಲ್ಲಿದೆ ಮಾಹಿತಿ

ಟಾಟಾ ಕಂಪನಿಯಿಂದಲೇ ನಿರ್ವಹಣೆ

ಇನ್ನು ಈ ಬಸ್​​ಗಳ ನಿರ್ವಹಣೆಯನ್ನ ಟಾಟಾ ಕಂಪನಿಯೇ ಮಾಡುತ್ತದೆ. ಬಸ್ ಕಂಪನಿಯೆ ಚಾಲಕರನ್ನ ನೇಮಿಸಿರುತ್ತದೆ. ಕಂಡಕ್ಟರ್ ಬಿಎಂಟಿಸಿ ಕಡೆಯಿಂದ ಇರುತ್ತಾರೆ. ಇನ್ನು ಈ ಬಸ್​​ಗಳಿಗೆ ಶಾಂತಿ ನಗರ ಹಾಗೂ ಯಶವಂತಪುರ ಡಿಪೋಗಳಲ್ಲಿ ಚಾರ್ಜಿಂಗ್ ಸ್ಟೇಷನ್ ವ್ಯವಸ್ಥೆ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?