AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಬೆಂಗಳೂರು ನಗರದಲ್ಲಿ ರಾತ್ರಿ ಬಸ್ ಸಂಚಾರ ಪುನಾರಂಭ

Bengaluru News: ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡುಬಂದಿದೆ. ಹೀಗಾಗಿ ಈಗ ರಾತ್ರಿ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

BMTC: ಬೆಂಗಳೂರು ನಗರದಲ್ಲಿ ರಾತ್ರಿ ಬಸ್ ಸಂಚಾರ ಪುನಾರಂಭ
ಬಿಎಂಟಿಸಿ ಬಸ್
TV9 Web
| Edited By: |

Updated on: Nov 15, 2021 | 6:48 PM

Share

ಬೆಂಗಳೂರು: ಕೊವಿಡ್ 19 ಕಾರಣದಿಂದಾಗಿ ಬಿಎಂಟಿಸಿ ರಾತ್ರಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಸುಮಾರು 20 ತಿಂಗಳಿನಿಂದ ರಾತ್ರಿ ಬಿಎಂಟಿಸಿ ಬಸ್ ಸೇವೆ ಲಭ್ಯವಿರಲಿಲ್ಲ. ಇದೀಗ ಕೊರೊನಾ ಸಾಂಕ್ರಾಮಿಕ ಇಳಿಕೆ ಆಗಿರುವ ಸಂದರ್ಭದಲ್ಲಿ ಮತ್ತೆ ಬಿಎಂಟಿಸಿ ರಾತ್ರಿ ಬಸ್ ಸೇವೆಯನ್ನು ಪುನಾರಂಭಿಸಲಾಗಿದೆ. ಭಾನುವಾರದಿಂದ ರಾತ್ರಿ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ವಿಧಿಸಿದ್ದ ರಾತ್ರಿ ಕರ್ಫ್ಯೂ ಆದೇಶ ಹಿಂತೆಗೆದುಕೊಂಡಿತ್ತು.

ಸುಮಾರು 70 ಬಿಎಂಟಿಸಿ ಬಸ್​ಗಳು ಬೆಂಗಳೂರು ನಗರದಲ್ಲಿ ಸಂಚಾರ ಆರಂಭಿಸಿವೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ಕರ್ನಾಟಕ ಸರ್ಕಾರ ಹಿಂತೆಗೆದುಕೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡುಬಂದಿದೆ. ಹೀಗಾಗಿ ಈಗ ರಾತ್ರಿ ಬಸ್ ಸಂಚಾರ ಆರಂಭಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾಕ್ಕಿಂತ ಮೊದಲು ಬಿಎಂಟಿಸಿ ಸುಮಾರು 130 ಬಸ್​ಗಳನ್ನು ಬೆಂಗಳೂರು ನಗರದಲ್ಲಿ ರಾತ್ರಿ ಓಡಿಸುತ್ತಿತ್ತು. ಈಗ ಬೇಡಿಕೆ, ಪ್ರಯಾಣಿಕರ ಸಂಖ್ಯೆ ಗಮನಿಸಿಕೊಂಡು ನಿಧಾನವಾಗಿ ರಾತ್ರಿ ಸಂಚರಿಸುವ ಬಸ್​ಗಳ ಸಂಖ್ಯೆಯನ್ನು ಹೆಚ್ಚು ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಇದರಲ್ಲಿ ಬಹುತೇಕ ಸಂಖ್ಯೆಯ ಬಸ್​ಗಳು ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್​ನಿಂದ ಪ್ರಯಾಣ ಮಾಡಲಿವೆ. ಹಾಗೂ ಸಾಮಾನ್ಯ ದರಕ್ಕಿಂತ 1.5 ಪಟ್ಟು ಹೆಚ್ಚು ಟಿಕೆಟ್ ದರ ರಾತ್ರಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಅಧಿಕಾರಿಗಳು ಹೇಳುವಂತೆ, ಸದ್ಯ ಸುಮಾರು 5,200 ಬಸ್​ಗಳು ದಿನ ಒಂದಕ್ಕೆ ಬೆಂಗಳೂರಿನಲ್ಲಿ ಸಂಚಾರ ನಡೆಸುತ್ತಿವೆ. ಅದರಲ್ಲಿ 120 ಎಸಿ ಬಸ್​ಗಳು ಕೂಡ ಒಳಗೊಂಡಿದೆ. ಭಾನುವಾರ ಸುಮಾರು ಆರು ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಪುನಾರಂಭಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆಯ ಸಂಖ್ಯೆ ಕೂಡ ಏರಿಕೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು

ಇದನ್ನೂ ಓದಿ: ಬೆಂಗಳೂರು: ಕಾವೇರಿ ನೀರಿಗೆ ಒಳಚರಂಡಿ ನೀರು ಮಿಶ್ರಣ; 20ಕ್ಕೂ ಹೆಚ್ಚು ಜನರು ಅಸ್ವಸ್ಥ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?