AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC

ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಮತ್ತೆ ಶಾಕ್​ ನೀಡಿದ್ದು, ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC
ಪ್ರಾತಿನಿಧಿಕ ಚಿತ್ರImage Credit source: deccanherald.com
Follow us
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 4:57 PM

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ (BMTC) ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಆದರೆ ಈಗ ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಮತ್ತೆ ಶಾಕ್​ ನೀಡಿದೆ. ಬಿಎಂಟಿಸಿ ಬಸ್​ನಲ್ಲಿ ಟಿಕೆಟ್ ರಹಿತ 3,591 ಪ್ರಯಾಣಿಕರು ಪತ್ತೆಯಾಗಿದ್ದು, 16,226 ಟ್ರಿಪ್​ ತಪಾಸಣೆ ನಡೆಸಿ 6,77,190 ರೂ. ದಂಡ ವಸೂಲಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ BMTC ಬಸ್ ನಿರ್ವಾಹಕರ ವಿರುದ್ಧ 1521 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರುವ ಸೀಟ್​ನಲ್ಲಿ ಪುರುಷರ ಪ್ರಯಾಣ ಹಿನ್ನೆಲೆ 322 ಪುರುಷ ಪ್ರಯಾಣಿಕರಿಂದ 32,200 ರೂ. ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​ ಶಾಕ್ ನೀಡಿದೆ.​ ಇನ್ಮುಂದೆ ಮಹಿಳಾ ಆಸನಗಳಲ್ಲಿ ಕುಳಿತು ಪ್ರಯಾಣಿಸದಿರಲು ಸೂಚನೆ ಕೂಡ ನೀಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್​, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣ ಉಚಿತ

ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್​ಗಳು 

ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ಸರ್ಕಾರ ವಿಸ್ತರಣೆ ಮಾಡಿದೆ. ಇತ್ತೀಚೆಗೆ ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

ಇದನ್ನೂ ಓದಿ: BMTC Driver: ಬಿಎಂಟಿಸಿ ಎಂಡಿಯನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬಸ್ ಚಾಲಕ

ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು. ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್​ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:57 pm, Wed, 22 February 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ