AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC

ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಮತ್ತೆ ಶಾಕ್​ ನೀಡಿದ್ದು, ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC
ಪ್ರಾತಿನಿಧಿಕ ಚಿತ್ರImage Credit source: deccanherald.com
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 4:57 PM

Share

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ (BMTC) ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಆದರೆ ಈಗ ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಮತ್ತೆ ಶಾಕ್​ ನೀಡಿದೆ. ಬಿಎಂಟಿಸಿ ಬಸ್​ನಲ್ಲಿ ಟಿಕೆಟ್ ರಹಿತ 3,591 ಪ್ರಯಾಣಿಕರು ಪತ್ತೆಯಾಗಿದ್ದು, 16,226 ಟ್ರಿಪ್​ ತಪಾಸಣೆ ನಡೆಸಿ 6,77,190 ರೂ. ದಂಡ ವಸೂಲಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ BMTC ಬಸ್ ನಿರ್ವಾಹಕರ ವಿರುದ್ಧ 1521 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರುವ ಸೀಟ್​ನಲ್ಲಿ ಪುರುಷರ ಪ್ರಯಾಣ ಹಿನ್ನೆಲೆ 322 ಪುರುಷ ಪ್ರಯಾಣಿಕರಿಂದ 32,200 ರೂ. ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​ ಶಾಕ್ ನೀಡಿದೆ.​ ಇನ್ಮುಂದೆ ಮಹಿಳಾ ಆಸನಗಳಲ್ಲಿ ಕುಳಿತು ಪ್ರಯಾಣಿಸದಿರಲು ಸೂಚನೆ ಕೂಡ ನೀಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್​, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣ ಉಚಿತ

ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್​ಗಳು 

ಕೇವಲ ಬೆಂಗಳೂರು ನಗರ, ಬೆಂ.ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ಸರ್ಕಾರ ವಿಸ್ತರಣೆ ಮಾಡಿದೆ. ಇತ್ತೀಚೆಗೆ ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂದಿಸಿ, BMTC ಬೋರ್ಡ್ ಅನುಮತಿ ನೀಡುವ ಮೂಲಕ ಪ್ರಯಾಣಿಕರಿಗೆ ಗುಡ್​ನ್ಯೂಸ್​ ನೀಡಿದೆ.

ಇದನ್ನೂ ಓದಿ: BMTC Driver: ಬಿಎಂಟಿಸಿ ಎಂಡಿಯನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬಸ್ ಚಾಲಕ

ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ನಿರಾಸೆ ಮೂಡಿಸಿದ್ದು, ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿತ್ತು, ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿತ್ತು. ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್​ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ ಎಂದು ಹೇಳಿದ್ದು, ಇದೀಗ ತನ್ನ ವ್ಯಾಪ್ತಿಯನ್ನ ವಿಸ್ತರಿಸುವ ಮೂಲಕ ಬಹುದಿನಗಳ ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸಮ್ಮತಿಸಿದೆ. ಇನ್ನು ಮುಂದೆ ಸಾಮಾನ್ಯ ಹಾಗೂ ಐಷಾರಾಮಿ ಬಸ್​ಗಳು ಬೆಂಗಳೂರು ಟು ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:57 pm, Wed, 22 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?