Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Bus: 921 ಎಲೆಕ್ಟ್ರಿಕ್ ಬಸ್ ಖರೀದಿಗೆ ಟಾಟಾ ಮೋಟರ್ಸ್ ಅಂಗಸಂಸ್ಥೆ ಟಿಎಂಎಲ್ ಜತೆ ಬಿಎಂಟಿಸಿ ಒಪ್ಪಂದ

ಟಾಟಾ ಸ್ಟಾರ್​ಬಸ್ ಎಲೆಕ್ಟ್ರಿಕ್​ ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಸ್ ಆಗಿದ್ದು, ಉತ್ತಮ ವಿನ್ಯಾಸದೊಂದಿಗೆ 12 ಮೀಟರ್ ಉದ್ದವಿದೆ. ಅತ್ಯುತ್ತಮ ಗುಣಲಕ್ಷಣಗಳನ್ನು ಒಳಗೊಂಡಿದ್ದು, ಆರಾಮದಾಯಕ ಪ್ರಯಾಣಕ್ಕೆ ಪೂರಕವಾಗಿದೆ ಎಂದು ಟಾಟಾ ಮೋಟರ್ಸ್ ತಿಳಿಸಿದೆ.

Electric Bus: 921 ಎಲೆಕ್ಟ್ರಿಕ್ ಬಸ್ ಖರೀದಿಗೆ ಟಾಟಾ ಮೋಟರ್ಸ್ ಅಂಗಸಂಸ್ಥೆ ಟಿಎಂಎಲ್ ಜತೆ ಬಿಎಂಟಿಸಿ ಒಪ್ಪಂದ
ಬಿಎಂಟಿಸಿ ಬಸ್​ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Dec 17, 2022 | 6:49 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆಗಾಗಿ 921 ಎಲೆಕ್ಟ್ರಿಕ್ ಬಸ್ (Electric Bus) ಖರೀದಿಸಲು ಟಾಟಾ ಮೋಟರ್ಸ್ (Tata Motors) ಅಂಗಸಂಸ್ಥೆ ಟಿಎಂಎಲ್ (TML) ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ ಜತೆ ಬಿಎಂಟಿಸಿ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವಾಗಿ ಟಾಟಾ ಮೋಟರ್ಸ್ ಮತ್ತು ಬಿಎಂಟಿಸಿ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿವೆ. ಒಪ್ಪಂದದ ಪ್ರಕಾರ, 12 ವರ್ಷಗಳ ಕಾರ್ಯಾಚರಣೆಗಾಗಿ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ ಎಲೆಕ್ಟ್ರಿಕ್​ ಬಸ್​ಗಳನ್ನು ಬಿಎಂಟಿಸಿಗೆ ಪೂರೈಕೆ ಮಾಡಬೇಕಿದೆ.

ಟಾಟಾ ಸ್ಟಾರ್​ಬಸ್ ಎಲೆಕ್ಟ್ರಿಕ್​ ದೇಶೀಯವಾಗಿ ಅಭಿವೃದ್ಧಿಪಡಿಸಿದ ಬಸ್ ಆಗಿದ್ದು, ಉತ್ತಮ ವಿನ್ಯಾಸದೊಂದಿಗೆ 12 ಮೀಟರ್ ಉದ್ದವಿದೆ. ಅತ್ಯುತ್ತಮ ಗುಣಲಕ್ಷಣಗಳನ್ನು ಒಳಗೊಂಡಿದ್ದು, ಆರಾಮದಾಯಕ ಪ್ರಯಾಣಕ್ಕೆ ಪೂರಕವಾಗಿದೆ ಎಂದು ಟಾಟಾ ಮೋಟರ್ಸ್ ತಿಳಿಸಿದೆ.

ಇದನ್ನೂ ಓದಿ: ಬಿಎಂಟಿಸಿ ನೌಕರರಿಗೆ ಸಿಹಿ ಸುದ್ದಿ: ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಪ್ರಕಟಿಸಿದ ಸಚಿವ ಶ್ರೀರಾಮುಲು

ಒಪ್ಪಂದದ ಬಗ್ಗೆ ಬಿಎಂಟಿಸಿ ಕೂಡ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಬೆ೦ಗಳೂರಿನ ಸಾರ್ವಜನಿಕರಿಗೆ ಇನ್ನೂ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬೆ೦ಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಟಾಟಾ ಮೋಟರ್ಸ್ ಅಂಗಸಂಸ್ಥೆ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ ಜತೆ ಒಪ್ಪಂದ ಮಾಡಿಕೊಂಡಿದೆ. ಪರಿಸರಸ್ನೇಹಿ ವಿದ್ಯುತ್‌ ಚಾಲಿತ (ಎಲೆಕ್ಟ್ರಿಕ್‌) ಬಸ್‌ಗಳನ್ನು ತನ್ನ ಪಡೆಗೆ ಸೇರಿಸುವುದರ ಮುಂದುವರಿದ ಭಾಗವಾಗಿ ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

730 ಎಲೆಕ್ಟ್ರಿಕ್ ಬಸ್ ಪೂರೈಕೆ

ದೇಶದಾದ್ಯಂತ ಈವರೆಗೆ 730 ಎಲೆಕ್ಟ್ರಿಕ್ ಬಸ್​ಗಳನ್ನು ಪೂರೈಕೆ ಮಾಡಲಾಗಿದೆ. ಈ ಬಸ್​ಗಳು ಈಗಾಗಲೇ 5.5 ಕೋಟಿ ಕಿಲೋಮೀಟರ್ ಸಂಚರಿಸಿವೆ ಎಂದೂ ಟಾಟಾ ಮೋಟರ್ಸ್ ತಿಳಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ