AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿನಗರ ಬಸ್​ ನಿಲ್ದಾಣದ ಮೇಲಿರುವ ರೆಕಾರ್ಡ್​ ಕಚೇರಿಯಲ್ಲೇ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ಬಿಎಂಟಿಸಿ(BMTC) ಸಿಬ್ಬಂದಿಯೊಬ್ಬ ಶಾಂತಿನಗರ ಬಸ್​ ನಿಲ್ದಾಣದ ಮೇಲಿರುವ ರೆಕಾರ್ಡ್​ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರೆಕಾರ್ಡ್​ ರೂಮ್​ನ ಬೀಗ ಕೇಳಿದ್ದನಂತೆ. ಇದೀಗ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಂತಿನಗರ ಬಸ್​ ನಿಲ್ದಾಣದ ಮೇಲಿರುವ ರೆಕಾರ್ಡ್​ ಕಚೇರಿಯಲ್ಲೇ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ
ಮೃತ ಬಿಎಂಟಿಸಿ ಸಿಬ್ಬಂದಿ ಮಹೇಶ್
ಕಿರಣ್ ಹನುಮಂತ್​ ಮಾದಾರ್
|

Updated on:Jul 16, 2024 | 4:09 PM

Share

ಬೆಂಗಳೂರು, ಜು.16: ಶಾಂತಿನಗರ ಬಸ್​ ನಿಲ್ದಾಣದಲ್ಲಿ ಬಿಎಂಟಿಸಿ(BMTC) ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಸೋಮವಾರ) ಸಂಜೆ ನಡೆದಿದೆ. ಬೆಳಗಾವಿ(Belagavi) ಜಿಲ್ಲೆಯ ಅಥಣಿ ಮೂಲದ ಮಹೇಶ್(42) ಎಂಬಾತ ಇಡಿ ಕಚೇರಿಯ ಪಕ್ಕದಲ್ಲಿರುವ ಬಸ್ ನಿಲ್ದಾಣದ ಮೂರನೇ ಮಹಡಿಯ ಕಚೇರಿಯಲ್ಲಿ ಆತ್ಮಹತ್ಯೆ ಶರಣಾಗಿದ್ದಾನೆ. ನಿನ್ನೆ(ಜು.15) ಬೆಳಗ್ಗೆ ಮೃತ ಮಹೇಶ್, ರೆಕಾರ್ಡ್ ರೂಮ್​ನ  ಬೀಗ ಕೇಳಿದ್ದನಂತೆ. ಇದೀಗ ಕಚೇರಿಯಲ್ಲಿ ನೇಣುಬಿಗಿದುಕೊಂಡು ಮಹೇಶ್ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಅಗ್ನಿ ಅವಘಡ: ಪತಿ ಸಾವಿನ ಬೆನ್ನಲ್ಲೇ ಪತ್ನಿಯೂ ಕೊನೆಯುಸಿರು

ಉಡುಪಿ: ನಿನ್ನೆ(ಜು.15) ಅಂಬಲಪಾಡಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಪತಿ ರಮಾನಂದ ಶೆಟ್ಟಿ ಮೃತಪಟ್ಟಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮನೆಯೊಡತಿ ಅಶ್ವಿನಿ(50) ಕೂಡ ಸಾವನ್ನಪ್ಪಿದ್ದಾರೆ. ಬೆಂಕಿಯಿಂದ ಉಸಿರಾಡಲು ಸಾಧ್ಯವಾಗದೆ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಸೆಂಟ್ರಲ್ ಎಸಿ ಶಾರ್ಟ್ ಸರ್ಕ್ಯೂಟ್​ನಿಂದ ಬ್ಲಾಸ್ಟ್ ಆಗಿ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ ಅಗ್ನಿ ಅವಘಡಕ್ಕೆ ದಂಪತಿ ದಾರುಣ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ

ವಿದ್ಯುತ್ ಶಾಕ್​ಗೆ ಹಸು ಬಲಿ

ಮೈಸೂರು: ಹೂಟಗಳ್ಳಿಯ ಎಸ್​ಆರ್​ಎಸ್​ ಬಡಾವಣೆಯಲ್ಲಿ ವಿದ್ಯುತ್​ ತಂತಿ ತಗುಲಿ ಹಸುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ರವಿಕುಮಾರ್ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಸ್ಥಳಕ್ಕೆ ಮೇಟಗಳ್ಳಿ ಠಾಣೆ ಪೊಲೀಸರು, ಚೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಮುಂಭಾಗದ ವಿದ್ಯುತ್ ಕಂಬದ ಬಳಿ ಹಸು ಕಟ್ಟಲಾಗಿತ್ತು. ಈ ವೇಳೆ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಹಸು ದುರ್ಘಟನೆ ನಡೆದಿದೆ. ಸೂಕ್ತ ಪರಿಹಾರ ನೀಡುವಂತೆ ರವಿಕುಮಾರ್ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Tue, 16 July 24

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್