AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ

BMTC student bus pass: ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್‌ಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಬಿಎಂಟಿಸಿ ಇಂದಿನಿಂದ ಆರಂಭಿಸಿದ್ದು, ಜೂನ್ 1ರಿಂದ ಪಾಸ್ ವಿತರಣೆ ನಡೆಯಲಿದೆ. ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ? ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್? ಇತ್ಯಾದಿ ವಿವರ ಇಲ್ಲಿದೆ.

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ
ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ
ಗಣಪತಿ ಶರ್ಮಾ
|

Updated on: May 29, 2024 | 10:29 AM

Share

ಬೆಂಗಳೂರು, ಮೇ 29: ಬಿಎಂಟಿಸಿಯು 2024-25ನೇ ಸಾಲಿನ ವಿದ್ಯಾರ್ಥಿಗಳ (Student Bus Pass) ರಿಯಾಯಿತಿ ಬಸ್ ಪಾಸ್‌ಗಳಿಗಾಗಿ (BMTC Bus Pass) ಇಂದಿನಿಂದ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತಿದೆ. ಜೂನ್ 1 ರಿಂದ ಬಸ್ ಪಾಸ್‌ಗಳನ್ನು ವಿತರಿಸಲು ಆರಂಭಿಸಲಿದೆ. ಬಸ್ ಪಾಸ್​​​ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ (BMTC) ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್?

ಬೆಂಗಳೂರು ಒನ್ ಕೇಂದ್ರಗಳು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಮತ್ತು ಆನೇಕಲ್ ಬಸ್ ನಿಲ್ದಾಣದಲ್ಲಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6.30 ರವರೆಗೆ ಪಾಸ್‌ಗಳನ್ನು ನೀಡಲಾಗುತ್ತದೆ.

ಶಕ್ತಿ ಯೋಜನೆಯಡಿ, ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ, ಬಿಎಂಟಿಸಿ ಕಾಲ್ ಸೆಂಟರ್ ಸಂಖ್ಯೆ 080-22483777 ಸಂಪರ್ಕಿಸಿ ಅಥವಾ ಬಿಎಂಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳು ಮೇ 31ರವರೆಗೆ ರದ್ದು; ಇಲ್ಲಿದೆ ವಿವರ

ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸುವವರು ರಾಜ್ಯದಲ್ಲಿ ಶಾಶ್ವತ ನಿವಾಸವನ್ನು ಹೊಂದಿರಬೇಕು. ಇತರ ಪರ್ಯಾಯಗಳ ಜೊತೆಗೆ ವಿದ್ಯಾರ್ಥಿಯು ಪದವಿ, ತಾಂತ್ರಿಕ, ವೃತ್ತಿಪರ, ವೈದ್ಯಕೀಯ ಅಥವಾ ಡಾಕ್ಟರೇಟ್ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ?

ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸುವಾಗ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ ಆಧಾರ್ ಕಾರ್ಡ್, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ