AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ

BMTC student bus pass: ವಿದ್ಯಾರ್ಥಿಗಳ ರಿಯಾಯಿತಿ ಬಸ್ ಪಾಸ್‌ಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಲು ಬಿಎಂಟಿಸಿ ಇಂದಿನಿಂದ ಆರಂಭಿಸಿದ್ದು, ಜೂನ್ 1ರಿಂದ ಪಾಸ್ ವಿತರಣೆ ನಡೆಯಲಿದೆ. ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ? ಅರ್ಜಿ ಸಲ್ಲಿಸುವುದು ಹೇಗೆ? ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್? ಇತ್ಯಾದಿ ವಿವರ ಇಲ್ಲಿದೆ.

ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ: ಎಲ್ಲೆಲ್ಲಿ ಸಿಗುತ್ತೆ? ಇಲ್ಲಿದೆ ವಿವರ
ಜೂನ್ 1 ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ
Ganapathi Sharma
|

Updated on: May 29, 2024 | 10:29 AM

Share

ಬೆಂಗಳೂರು, ಮೇ 29: ಬಿಎಂಟಿಸಿಯು 2024-25ನೇ ಸಾಲಿನ ವಿದ್ಯಾರ್ಥಿಗಳ (Student Bus Pass) ರಿಯಾಯಿತಿ ಬಸ್ ಪಾಸ್‌ಗಳಿಗಾಗಿ (BMTC Bus Pass) ಇಂದಿನಿಂದ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತಿದೆ. ಜೂನ್ 1 ರಿಂದ ಬಸ್ ಪಾಸ್‌ಗಳನ್ನು ವಿತರಿಸಲು ಆರಂಭಿಸಲಿದೆ. ಬಸ್ ಪಾಸ್​​​ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ (BMTC) ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ದೊರೆಯುತ್ತದೆ ಬಸ್ ಪಾಸ್?

ಬೆಂಗಳೂರು ಒನ್ ಕೇಂದ್ರಗಳು, ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್), ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ ಡಿಪೋ-19, ಮತ್ತು ಆನೇಕಲ್ ಬಸ್ ನಿಲ್ದಾಣದಲ್ಲಿ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6.30 ರವರೆಗೆ ಪಾಸ್‌ಗಳನ್ನು ನೀಡಲಾಗುತ್ತದೆ.

ಶಕ್ತಿ ಯೋಜನೆಯಡಿ, ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ಬಿಎಂಟಿಸಿಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ಹೆಚ್ಚಿನ ವಿವರಗಳಿಗಾಗಿ, ಬಿಎಂಟಿಸಿ ಕಾಲ್ ಸೆಂಟರ್ ಸಂಖ್ಯೆ 080-22483777 ಸಂಪರ್ಕಿಸಿ ಅಥವಾ ಬಿಎಂಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ವಿವಿಧಡೆಯಿಂದ ಬೆಂಗಳೂರಿಗೆ ಬರುವ ಕೆಲವು ರೈಲುಗಳು ಮೇ 31ರವರೆಗೆ ರದ್ದು; ಇಲ್ಲಿದೆ ವಿವರ

ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸುವವರು ರಾಜ್ಯದಲ್ಲಿ ಶಾಶ್ವತ ನಿವಾಸವನ್ನು ಹೊಂದಿರಬೇಕು. ಇತರ ಪರ್ಯಾಯಗಳ ಜೊತೆಗೆ ವಿದ್ಯಾರ್ಥಿಯು ಪದವಿ, ತಾಂತ್ರಿಕ, ವೃತ್ತಿಪರ, ವೈದ್ಯಕೀಯ ಅಥವಾ ಡಾಕ್ಟರೇಟ್ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಬಸ್ ಪಾಸ್​ ಅರ್ಜಿಗೆ ಯಾವೆಲ್ಲ ದಾಖಲೆ ಅಗತ್ಯ?

ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸುವಾಗ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ ಆಧಾರ್ ಕಾರ್ಡ್, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!