AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯ ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಶಾಕ್! ಸಂಚಾರವೇ ಸ್ಥಗಿತ: ಕಾರಣವೇನು ಗೊತ್ತಾ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಬ್ರೇಕ್ ಹಾಕಲು ಬಿಎಂಟಿಸಿ ಬರೋಬ್ಬರಿ 320 ಎಸಿ ಎಲೆಕ್ಟ್ರಿಕ್ ಬಸ್​ಗಳ ಮೊರೆ ಹೋಗಿತ್ತು. ಟ್ರಯಲ್ ರನ್ ಕೂಡ ಯಶಸ್ವಿಯಾಗಿ ನಡೆದಿತ್ತು. ಆದರೆ ಇದೀಗ ಹೊಸ ಬಸ್​ಗಳು ಸಂಚಾರ ‌ಮಾಡುತ್ತಿಲ್ಲ. ಅದ್ಯಾಕೆ ಹೀಗಾಯ್ತು? ಕಾರಣವೇನು? ತಿಳಿಯಲು ಮುಂದೆ ಓದಿ.

ಬಿಎಂಟಿಸಿಯ ಹೊಸ ಎಲೆಕ್ಟ್ರಿಕ್ ಬಸ್​ಗಳಿಗೆ ಶಾಕ್! ಸಂಚಾರವೇ ಸ್ಥಗಿತ: ಕಾರಣವೇನು ಗೊತ್ತಾ?
ಬಿಎಂಟಿಸಿ ಇ ಬಸ್ (ಸಾಂದರ್ಭಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on: Feb 22, 2025 | 11:48 AM

Share

ಬೆಂಗಳೂರು, ಫೆಬ್ರವರಿ 22: ಬಿಎಂಟಿಸಿ ಗುತ್ತಿಗೆ ಆಧಾರದಲ್ಲಿ ಅಶೋಕ್ ಲೇಲ್ಯಾಂಡ್ ಬಸ್ಸುಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಆ 320 ಬಸ್​ಗಳಿಗೆ ಚಾಲಕರು ಸಿಗುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಫೆಬ್ರವರಿ 1 ರಿಂದಲೇ 320 ಎಸಿ ಎಲೆಕ್ಟ್ರಿಕ್ ಬಸ್ಸುಗಳು ರಸ್ತೆಗಿಳಿಯಬೇಕಿತ್ತು. ಆದರೆ ಡ್ರೈವರ್​ಗಳಿಲ್ಲದೆ ಬಸ್​ಗಳು ರೋಡಿಗಿಳಿತ್ತಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ಎಸಿ ಎಲೆಕ್ಟ್ರಿಕ್ ಬಸ್​ಗಳ ಟ್ರಯಲ್ ರನ್ ಯಶಸ್ವಿಯಾಗಿದೆ .ಖಾಸಗಿ ಏಜೆನ್ಸಿಗಳ ಮೂಲಕ ಎಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲಕರ ನೇಮಕ ಮಾಡಿಕೊಳ್ಳಲು ಬಿಎಂಟಿಸಿ ಮುಂದಾಗಿತ್ತು. ಆದರೆ ಏಜೆನ್ಸಿಗಳ ಮೂಲಕ ಕೆಲಸಕ್ಕೆ ಬರಲು ಚಾಲಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಬಿಎಂಟಿಸಿ ಚಾಲಕರಿಗೆ 35 ರಿಂದ 40 ಸಾವಿರ ರೂ. ಸಂಬಳ ಕೊಡಲಾಗುತ್ತಿದೆ. ಆದರೆ ಏಜೆನ್ಸಿ ಮೂಲಕ ಬರುವ ಚಾಲಕರಿಗೆ ಕೇವಲ 18 ಸಾವಿರ ರೂ. ಸಂಬಳ ನೀಡಲಾಗುತ್ತಿದೆ. ಅದಕ್ಕೆ ಚಾಲಕರು ಎಲೆಕ್ಟ್ರಿಕ್ ಬಸ್ ಚಲಾಯಿಸುವ ಕೆಲಸಕ್ಕೆ ಹಿಂದೇಟು ಹಾಕುತ್ತಿದ್ದಾರೆ.

ಎಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಗುತ್ತಿಲ್ಲ ಚಾಲಕರು

ಈ ಹೊಸ ಎಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಚಾಲಕರನ್ನು ಗುತ್ತಿಗೆ ಪಡೆದ ಬಸ್ ಕಂಪನಿಗಳಿಂದಲೇ ನೇಮಕ ಮಾಡಲಾಗುತ್ತಿದೆ. ಕಂಡಕ್ಟರ್ ಮಾತ್ರ ಬಿಎಂಟಿಸಿಯಿಂದ ನೇಮಕವಾಗುತ್ತಾರೆ. ಹನ್ನೆರಡು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗುತ್ತಿದೆ. ಒಂದು ಕಿಮೀಗೆ ಈ ಬಸ್​ಗೆ ಬಿಎಂಟಿಸಿ 68 ರುಪಾಯಿ ನೀಡಲಿದೆ. ಮೊದಲ ಬಾರಿಗೆ ರಾಜಧಾನಿಯಲ್ಲಿ ಸಂಚರಿಸಬೇಕಿದ್ದ ಐದು ಎಸಿ ಎಲೆಕ್ಟ್ರಿಕ್ ಬಸ್​ಗಳ ಟ್ರಯಲ್ ರನ್ ಮೆಜೆಸ್ಟಿಕ್​ನಿಂದ ಕಾಡುಗೋಡಿವರೆಗೆ ನಡೆಸಲಾಗಿತ್ತು. ಸರ್ಕಾರದಿಂದ ಇವುಗಳಿಗೆ 150 ಕೋಟಿ ರೂಪಾಯಿ ಸಹಾಯಧನ ನೀಡಲಾಗಿದೆ. ಫೆಬ್ರವರಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಎಲೆಕ್ಟ್ರಿಕ್ ಎಸಿ ಬಸ್​​ಗಳಿಗೆ ಚಾಲನೆ ನೀಡಬೇಕಿತ್ತು. ಆದರೆ ಚಾಲಕರು ಸಿಗದೆ ಎಲ್ಲವೂ ನಿಂತುಹೋಗಿದೆ.

ವಿಮಾನ ನಿಲ್ದಾಣ, ಮೆಜೆಸ್ಟಿಕ್, ಕತ್ರಿಗುಪ್ಪೆ, ಐಟಿಪಿಎಲ್, ಎಚ್​ಎಸ್​ಆರ್ ಡಿಪೋದಿಂದ ಬಸ್ ಹೊರಡಿಸಲು ಚಿಂತನೆ ನಡೆಸಲಾಗಿತ್ತು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?

ಈ ಎಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಕಂಡಕ್ಟರ್​ಗಳನ್ನು ಮಾತ್ರ ನಾವು ಕೊಡುತ್ತೇವೆ. ಕೇಂದ್ರ ಸರ್ಕಾರ ಬಸ್ ಕಂಪನಿಗಳಿಗೆ ಸಬ್ಸಿಡಿ ನೀಡುತ್ತದೆ. ಸಬ್ಸಿಡಿ ಪಡೆದ ಕಂಪನಿ ಡ್ರೈವರ್​ಗಳನ್ನು ನೇಮಕ ಮಾಡಿಕೊಳ್ಳುತ್ತದೆ. ನಮಗೆ ಸಬ್ಸಿಡಿ ನೀಡಿದ್ದರೆ ತುಂಬಾ ಸಹಾಯ ಆಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೇಳಬೇಕಿದ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಯಾಣ ದರ ಏರಿಕೆ ಪರಿಣಾಮ: ನಮ್ಮ ಮೆಟ್ರೋದಿಂದ ದೂರವುಳಿದ 6 ಲಕ್ಷ ಪ್ರಯಾಣಿಕರು!

ಒಟ್ಟಿನಲ್ಲಿ ಇತ್ತ ನಮ್ಮ ಮೆಟ್ರೋದಲ್ಲಿ ಟಿಕೆಟ್ ದರ ಏರಿಕೆ ಆಗಿದೆ. ಬಿಎಂಟಿಸಿಯ ಎಸಿ ಎಲೆಕ್ಟ್ರಿಕ್ ಬಸ್​​ನಲ್ಲಿ ಸಂಚಾರ ಮಾಡೋಣ, ಎಲೆಕ್ಟ್ರಿಕ್ ಬಸ್​ನಿಂದ ವಾಯುಮಾಲಿನ್ಯ ಕಡಿಮೆ ಆಗುತ್ತದೆ, ಜನರು ನೆಮ್ಮದಿಯಿಂದ ಉಸಿರಾಡಬಹುದು ಎಂದುಕೊಂಡಿದ್ದ ಪ್ರಯಾಣಿಕರ ಆಸೆಗೆ ಬಿಎಂಟಿಸಿ ತಣ್ಣೀರು ಹಾಕಿದ್ದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ