AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಣಗೌಡ ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು 2 ಠಾಣೆಯ ಪೊಲೀಸರ ತಯಾರಿ

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ ಅವರಿಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ.

ಕರವೇ ನಾರಾಯಣಗೌಡ ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು 2 ಠಾಣೆಯ ಪೊಲೀಸರ ತಯಾರಿ
ಕರವೇ ನಾರಾಯಣಗೌಡ
Jagadisha B
| Edited By: |

Updated on: Jan 08, 2024 | 10:06 AM

Share

ಬೆಂಗಳೂರು, ಜನವರಿ 08: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ (Narayangouda) ಅವರಿಗೆ ಜಾಮೀನು‌ ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು (Police) ಬಂಧಿಸಲು ಮುಂದಾಗಿದ್ದಾರೆ. ಹೌದು ಹಳೆ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ.

ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ.

ಇದನ್ನೂ ಓದಿ: ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

ನಾರಾಯಣಗೌಡ ಜೈಲು ಸೇರಿದ್ದೇಕೆ

ಕಳೆದ ವರ್ಷ ಡಿಸೆಂಬರ್ 27 ರಂದು ಮಾಲ್, ಹೋಟೆಲ್‌ಗಳೂ ಸೇರಿದಂತೆ ವಾಣಿಜ್ಯ ಕಟ್ಟಡಗಳ ನಾಮಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ನಗರದಾದ್ಯಂತ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಾರ್ಯಕರ್ತರು ಮಾಲ್, ಹೋಟೆಲ್‌ಗಳ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿ, ಒಳ ನುಗ್ಗಲು ಯತ್ನಿಸಿದ್ದರು. ಅಲ್ಲದೆ, ಅನ್ಯ ಭಾಷೆಯ ನಾಮಲಕಗಳು, ಫ್ಲೆಕ್ಸ್​, ಬ್ಯಾನರ್, ಹೋರ್ಡಿಂಗ್‌ಗಳನ್ನು ಕಿತ್ತೆಸೆದಿದ್ದರು. ಈ ಸಂಬಂಧ ನಗರದ ಹಲವು ಠಾಣೆಗಳಲ್ಲಿ ನಾರಾಯಣಗೌಡ ಮತ್ತು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.

ಪೊಲೀಸರ ಮೇಲೆ ಹಲ್ಲೆ, ಕರ್ತವ್ಯ ನಿರ್ವಹಣೆಗೆ ಅಡ್ಡಿ, ಸಾರ್ವಜನಿಕ ಆಸ್ತಿಗೆ ಹಾನಿ, ದೊಂಬಿ, ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಆರೋಪದಡಿ ಪೊಲೀಸರು ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್