AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ; ತನಿಖೆ ಕೈಗೆತ್ತಿಕೊಂಡ ಆ್ಯಂಟಿ ಟೆರರಿಸಂ ಸೆಲ್

ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಆ್ಯಂಟಿ ಟೆರರಿಸಂ ಸೆಲ್ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ; ತನಿಖೆ ಕೈಗೆತ್ತಿಕೊಂಡ ಆ್ಯಂಟಿ ಟೆರರಿಸಂ ಸೆಲ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 13, 2022 | 5:36 PM

Share

ಬೆಂಗಳೂರು: ನಗರದಲ್ಲಿ ಒಟ್ಟು 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ತಿಳಿದುಬಂದಿದ್ದು, 10 ಕ್ಕೂ ಅಧಿಕ ಇಮೇಲ್‌ಗಳಿಂದ ಬೆದರಿಕೆ ಬಂದಿದೆ. Proxy server ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 Proxy server ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದ್ರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66F ಅಡಿ ಪ್ರಕರಣ ದಾಖಲಾಗಿರೋದ್ರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಆ್ಯಂಟಿ ಟೆರರಿಸಂ ಸೆಲ್ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಕಸದ ರಾಶಿ ಕುಸಿದು ಇಬ್ಬರು ಸಾವು

ಸುಲ್ತಾನಪುರ ಬಳಿ ಕಸದ ರಾಶಿ ಕುಸಿದು ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. JSW ಡಂಪಿಂಗ್ ಯಾರ್ಡ್​ನಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನ

ಕೋರ್ಟ್​ನ 5ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2020ರಲ್ಲಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಮಕ್ಕಳನ್ನೇ ಹತ್ಯೆಗೈದ ಆರೋಪ ಜತಿನ್ ಮೇಲಿತ್ತು. ಹುಳಿಮಾವು ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ವಿಚಾರಣೆ ಹಿನ್ನೆಲೆ ಇಂದು ಕೋರ್ಟ್​ಗೆ ಕರೆತರಲಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡು ಜತಿನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳು ಆರೋಪಿ ಜತಿನ್​ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿವೃತ್ತ ಸೈನಿಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ದುಷ್ಕರ್ಮಿಗಳು ನಿವೃತ್ತ ಸೈನಿಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿವೃತ್ತ ಸೈನಿಕ ಸುರೇಶ್ ಅಲಿಯಾಸ್ ಜೂಡ್ ಬರ್ಬರ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಒಂಟಿಯಾಗಿರುವಾಗ ಸುರೇಶ್​ ಬರ್ಬರ ಕೊಲೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಪ್ರಕರಣ; VPN ಬಳಸಿ ಮೇಲ್ ಮಾಡಿರೋ ಶಂಕೆ

ಇದನ್ನೂ ಓದಿ: ಇನ್ನೂ ನಿಂತಿಲ್ಲದ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಪ್ರಕರಣ; ಬೆದರಿಕೆ ಬಂದ ಶಾಲೆಗಳ ಸಂಖ್ಯೆ 17ಕ್ಕೆ ಏರಿಕೆ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ