AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ

Bengaluru News: ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ
ಸೂಟ್​ಕೇಸ್ ಪತ್ತೆ
TV9 Web
| Updated By: ganapathi bhat|

Updated on: Oct 13, 2021 | 4:17 PM

Share

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸೂಟ್‌ಕೇಸ್ ಪತ್ತೆಯಾಗಿತ್ತು. ಸೂಟ್​ಕೇಸ್ ಪತ್ತೆಯಾಗುತ್ತಿದ್ದ ಹಾಗೆ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಕೂಡಲೇ ಸ್ಥಳಿಯರು ಪಶ್ಚಿಮ‌ ವಿಭಾಗದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಕೆ.ಆರ್.ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ಕೊಟ್ಟಿದ್ದರು. ಬಾಂಬ್ ಸ್ಕ್ವಾಡ್ ಗೆ ಸಿಟಿ ಪೊಲೀಸರು ಮಾಹಿತಿ ನೀಡಿದ್ದರು. ಇಷ್ಟೆಲ್ಲಾ ಆತಂಕದ ಬಳಿಕ, ಇದೀಗ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​ ಮಾಡಲಾಗಿದೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿ ಖಾಲಿ ಮೈದಾನದಲ್ಲಿ ಸೂಟ್​ಕೇಸ್ ತೆರೆಯಲಾಗಿದೆ.

ಕಳೆದ 2 ಗಂಟೆಯಿಂದ ತಲೆ ಕೆಡಿಸಿಕೊಂಡಿದ್ದ ಪೊಲೀಸರು ಸದ್ಯ ನಿರಾಳರಾಗಿದ್ದಾರೆ. ಒಂದು ಸೂಟ್​ಕೇಸ್​ನಲ್ಲಿ ಬೆಡ್​ಶೀಟ್, ಬಟ್ಟೆಗಳು ಪತ್ತೆಯಾಗಿದೆ. ಮತ್ತೊಂದು ಸೂಟ್​ಕೇಸ್​​ನಲ್ಲಿ ಸೀರೆ, ಪಂಚೆ, ಟವೆಲ್​ ಪತ್ತೆಯಾಗಿದೆ. ಸೂಟ್​ಕೇಸ್​ ತೆರೆದು ಬಾಂಬ್ ನಿಷ್ಕ್ರಿಯ ದಳ ವಸ್ತುಗಳನ್ನು ಪರಿಶೀಲಿಸಿದೆ. ಸೂಟ್​ಕೇಸ್​ನಲ್ಲಿ ಮಧುರ ಅರ್ಕೇಸ್ಟ್ರಾ ಎಂಬ ಐಡಿ ಕಾರ್ಡ್ಪ್ ಪತ್ತೆಯಾಗಿದೆ.

ಇದಕ್ಕೂ ಮೊದಲೇ ಬಾಂಬ್ ನಿಷ್ಕ್ರಿಯ ದಳ ಸ್ಪೋಟಕ ಏನೂ ಇಲ್ಲಾ ಎಂದು ಪ್ರಾಥಮಿಕ ಮಾಹಿತಿ ನೀಡಿತ್ತು. ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Crime: ಆಸ್ಟ್ರೇಲಿಯಾ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ಆಟೋ ಚಾಲಕ ಅರೆಸ್ಟ್

ಇದನ್ನೂ ಓದಿ: Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ