AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ

Bengaluru News: ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ
ಸೂಟ್​ಕೇಸ್ ಪತ್ತೆ
TV9 Web
| Edited By: |

Updated on: Oct 13, 2021 | 4:17 PM

Share

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸೂಟ್‌ಕೇಸ್ ಪತ್ತೆಯಾಗಿತ್ತು. ಸೂಟ್​ಕೇಸ್ ಪತ್ತೆಯಾಗುತ್ತಿದ್ದ ಹಾಗೆ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಕೂಡಲೇ ಸ್ಥಳಿಯರು ಪಶ್ಚಿಮ‌ ವಿಭಾಗದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಕೆ.ಆರ್.ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ಕೊಟ್ಟಿದ್ದರು. ಬಾಂಬ್ ಸ್ಕ್ವಾಡ್ ಗೆ ಸಿಟಿ ಪೊಲೀಸರು ಮಾಹಿತಿ ನೀಡಿದ್ದರು. ಇಷ್ಟೆಲ್ಲಾ ಆತಂಕದ ಬಳಿಕ, ಇದೀಗ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​ ಮಾಡಲಾಗಿದೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿ ಖಾಲಿ ಮೈದಾನದಲ್ಲಿ ಸೂಟ್​ಕೇಸ್ ತೆರೆಯಲಾಗಿದೆ.

ಕಳೆದ 2 ಗಂಟೆಯಿಂದ ತಲೆ ಕೆಡಿಸಿಕೊಂಡಿದ್ದ ಪೊಲೀಸರು ಸದ್ಯ ನಿರಾಳರಾಗಿದ್ದಾರೆ. ಒಂದು ಸೂಟ್​ಕೇಸ್​ನಲ್ಲಿ ಬೆಡ್​ಶೀಟ್, ಬಟ್ಟೆಗಳು ಪತ್ತೆಯಾಗಿದೆ. ಮತ್ತೊಂದು ಸೂಟ್​ಕೇಸ್​​ನಲ್ಲಿ ಸೀರೆ, ಪಂಚೆ, ಟವೆಲ್​ ಪತ್ತೆಯಾಗಿದೆ. ಸೂಟ್​ಕೇಸ್​ ತೆರೆದು ಬಾಂಬ್ ನಿಷ್ಕ್ರಿಯ ದಳ ವಸ್ತುಗಳನ್ನು ಪರಿಶೀಲಿಸಿದೆ. ಸೂಟ್​ಕೇಸ್​ನಲ್ಲಿ ಮಧುರ ಅರ್ಕೇಸ್ಟ್ರಾ ಎಂಬ ಐಡಿ ಕಾರ್ಡ್ಪ್ ಪತ್ತೆಯಾಗಿದೆ.

ಇದಕ್ಕೂ ಮೊದಲೇ ಬಾಂಬ್ ನಿಷ್ಕ್ರಿಯ ದಳ ಸ್ಪೋಟಕ ಏನೂ ಇಲ್ಲಾ ಎಂದು ಪ್ರಾಥಮಿಕ ಮಾಹಿತಿ ನೀಡಿತ್ತು. ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Crime: ಆಸ್ಟ್ರೇಲಿಯಾ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ಆಟೋ ಚಾಲಕ ಅರೆಸ್ಟ್

ಇದನ್ನೂ ಓದಿ: Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ