AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ

Bengaluru News: ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಬೆಂಗಳೂರು: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​; ತಲೆ ಕೆಡಿಸಿಕೊಂಡಿದ್ದ ಪೊಲೀಸರು ನಿರಾಳ
ಸೂಟ್​ಕೇಸ್ ಪತ್ತೆ
TV9 Web
| Edited By: |

Updated on: Oct 13, 2021 | 4:17 PM

Share

ಬೆಂಗಳೂರು: ನಗರದ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸೂಟ್‌ಕೇಸ್ ಪತ್ತೆಯಾಗಿತ್ತು. ಸೂಟ್​ಕೇಸ್ ಪತ್ತೆಯಾಗುತ್ತಿದ್ದ ಹಾಗೆ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಕೂಡಲೇ ಸ್ಥಳಿಯರು ಪಶ್ಚಿಮ‌ ವಿಭಾಗದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಕೆ.ಆರ್.ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ಕೊಟ್ಟಿದ್ದರು. ಬಾಂಬ್ ಸ್ಕ್ವಾಡ್ ಗೆ ಸಿಟಿ ಪೊಲೀಸರು ಮಾಹಿತಿ ನೀಡಿದ್ದರು. ಇಷ್ಟೆಲ್ಲಾ ಆತಂಕದ ಬಳಿಕ, ಇದೀಗ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಸೂಟ್​ಕೇಸ್ ಓಪನ್​ ಮಾಡಲಾಗಿದೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿ ಖಾಲಿ ಮೈದಾನದಲ್ಲಿ ಸೂಟ್​ಕೇಸ್ ತೆರೆಯಲಾಗಿದೆ.

ಕಳೆದ 2 ಗಂಟೆಯಿಂದ ತಲೆ ಕೆಡಿಸಿಕೊಂಡಿದ್ದ ಪೊಲೀಸರು ಸದ್ಯ ನಿರಾಳರಾಗಿದ್ದಾರೆ. ಒಂದು ಸೂಟ್​ಕೇಸ್​ನಲ್ಲಿ ಬೆಡ್​ಶೀಟ್, ಬಟ್ಟೆಗಳು ಪತ್ತೆಯಾಗಿದೆ. ಮತ್ತೊಂದು ಸೂಟ್​ಕೇಸ್​​ನಲ್ಲಿ ಸೀರೆ, ಪಂಚೆ, ಟವೆಲ್​ ಪತ್ತೆಯಾಗಿದೆ. ಸೂಟ್​ಕೇಸ್​ ತೆರೆದು ಬಾಂಬ್ ನಿಷ್ಕ್ರಿಯ ದಳ ವಸ್ತುಗಳನ್ನು ಪರಿಶೀಲಿಸಿದೆ. ಸೂಟ್​ಕೇಸ್​ನಲ್ಲಿ ಮಧುರ ಅರ್ಕೇಸ್ಟ್ರಾ ಎಂಬ ಐಡಿ ಕಾರ್ಡ್ಪ್ ಪತ್ತೆಯಾಗಿದೆ.

ಇದಕ್ಕೂ ಮೊದಲೇ ಬಾಂಬ್ ನಿಷ್ಕ್ರಿಯ ದಳ ಸ್ಪೋಟಕ ಏನೂ ಇಲ್ಲಾ ಎಂದು ಪ್ರಾಥಮಿಕ ಮಾಹಿತಿ ನೀಡಿತ್ತು. ಆದರೂ ಸುರಕ್ಷತೆಯ ದೃಷ್ಟಿಯಿಂದ ಬಾಕ್ಸ್ ತೆರೆಯಲು ಸೂಚನೆ ಕೊಡಲಾಗಿತ್ತು. ಹೀಗಾಗಿ ಖಾಲಿ ಮೈದಾನಕ್ಕೆ ಸೂಟ್​ಕೇಸ್ ರವಾನೆ ಮಾಡಲಾಗಿತ್ತು. ಇದೀಗ ಸೂಟ್​ಕೇಸ್ ಪ್ರಕರಣ ತಾತ್ಕಾಲಿಕ ಅಂತ್ಯ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Crime: ಆಸ್ಟ್ರೇಲಿಯಾ ಪ್ರಜೆ ಮೇಲೆ ಹಲ್ಲೆ ನಡೆಸಿದ್ದ ಆಟೋ ಚಾಲಕ ಅರೆಸ್ಟ್

ಇದನ್ನೂ ಓದಿ: Crime News: ಚಲಿಸುವ ರೈಲಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!