AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದಕ್ಕೆ ಬಾಂಬ್​ ಬೆದರಿಕೆ ಇ-ಮೇಲ್

ಇದೇ ತಿಂಗಳ 13 ರಂದು ಕೂಡ ಬೆಂಗಳೂರಿನ ಖಾಸಗಿ ಕಂಪನಿಯೊಂದಕ್ಕೆ ಹುಸಿ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿತ್ತು. ಇದರ ಬೆನ್ನಲ್ಲೇ ಇಂದು(ಗುರುವಾರ) ನಗರದ ಖಾಸಗಿ ಶಾಲೆ(private school)ಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Bomb Threat: ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದಕ್ಕೆ ಬಾಂಬ್​ ಬೆದರಿಕೆ ಇ-ಮೇಲ್
ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದಕ್ಕೆ ಬಾಂಬ್​ ಬೆದರಿಕೆ ಇ-ಮೇಲ್,
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 29, 2024 | 7:08 PM

Share

ಬೆಂಗಳೂರು, ಆ.29: ಬೆಂಗಳೂರಿನ ಖಾಸಗಿ ಶಾಲೆ(private school)ಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು(ಗುರುವಾರ) ಬೆಳಗ್ಗೆ 6.57ರ ಸುಮಾರಿಗೆ ಇಂಡಿಯನ್ ಪಬ್ಲಿಕ್ ಶಾಲೆ ಆವರಣದಲ್ಲಿ 5 ಪೈಪ್​ಲೈನ್ ಬಾಂಬ್ ಇಡಲಾಗಿದೆ ಎಂದು Father Kodachi ಹೆಸರಿನ coldghost456@gmail.com askbirnorth@tipsglobal.net ಎಂಬ ಐಡಿಯಿಂದ ಬಾಂಬ್ ಬೆದರಿಕೆ ಮೇಲ್ ಬಂದಿತ್ತು.

ಮಾಹಿತಿ ಬಂದ ಕೂಡಲೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ

ಅದರಲ್ಲಿ ಮಧ್ಯಾಹ್ನ 1.30ಕ್ಕೆ ಬಾಂಬ್​​ ಬ್ಲಾಸ್ಟ್ ಆಗುತ್ತೆಂದು ತಿಳಿಸಲಾಗಿತ್ತು. ಮಾಹಿತಿ ಬಂದ ಕೂಡಲೇ ಶಾಲೆಗೆ ಭೇಟಿ ನೀಡಿದ ಗೋವಿಂದಪುರ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದರು. ಅದೃಷ್ಟವಶಾತ್​ ಪರಿಶೀಲನೆ ವೇಳೆ ಯಾವುದೇ ರೀತಿ ಬಾಂಬ್​ ಪತ್ತೆಯಾಗಿಲ್ಲ. ಸದ್ಯ ಶಾಲೆಯ ಆಡಳಿತಾಧಿಕಾರಿ ನೀಡಿರೋ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಇದೇ ತಿಂಗಳ 13 ರಂದು ಕೂಡ ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ‘ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ್ದ ಬಾಂಬ್​ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದರು. ಜೊತೆಗೆ ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂಲಕ ಒಂದೇ ತಿಂಗಳಲ್ಲಿ ಎರಡನೇ ಬಾರಿ ಹುಸಿ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ