AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್

ಕಳೆದ ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ನಗರದ ಕೆಲವು ಕಾಲೇಜುಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

Bomb Threat: ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್
ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 04, 2024 | 5:26 PM

ಬೆಂಗಳೂರು, ಅ.04: ಬೆಂಗಳೂರಿನ ಕೆಲವು ಕಾಲೇಜು(College)ಗಳಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂಎಸ್​​ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ​ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸರು ಮೂರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಸದ್ಯ ಪರಿಶೀಲನೆ ಮುಂದುವರೆದಿದೆ.

ಘಟನೆ ಕುರಿತು ಮಾತನಾಡಿದ ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್, ‘ಇಂದು ಮಧ್ಯಾಹ್ನ 1 ಗಂಟೆಗೆ ಮೂರು ಕಾಲೇಜಿಗೆ ಡೆಸ್ಕ್​ನಲ್ಲಿ ಬಾಂಬ್ ಇದೆ ಎಂದು ಬೆದರಿಕೆ‌ ಮೇಲ್ ಬಂದಿದೆ. ಈ ಬಗ್ಗೆ ಹನುಮಂತ ನಗರ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗುತ್ತಿದೆ. ಮೇಲ್ ಕಳಿಸಿರುವ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಮೂರು ಕಾಲೇಜುಗಳಿಗೆ ಒಂದೇ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಆ ಸಂಬಂಧ ತನಿಖೆ ಮುಂದುವರಿದಿದೆ ಎಂದರು.

ಇದನ್ನೂ ಓದಿ:Bomb Threat: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

ಇನ್ನು ಇದೇ ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇದಾದ ಆರು ದಿನಗಳ ಬಳಿಕ ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮುಖಾಂತರ ಬಾಂಬ್​ ಬೆದರಿಕೆ ಬಂದಿದೆ.

ಇಂತಹ ಘಟನೆಗಳು ಇದೇ ಮೊದಲಲ್ಲ, ಹಲವಾರು ಬಾರಿ ನಡೆದಿವೆ. ಆದರೆ, ಇನ್ನೂವರೆಗೂ ಕಿಡಿಗೇಡಿಗಳು ಮಾತ್ರ ಪತ್ತೆಯಾಗಿಲ್ಲ. ಕಳೆದ ಆರು ದಿನಗಳ ಹಿಂದೆಯಷ್ಟೇ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾಗೆ ಇದೇ ರೀತಿಯ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿತ್ತು. ಅಷ್ಟೇ ಅಲ್ಲ, ಇತ್ತೀಚೆಗೆ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೂ ಇಂತಹುದೇ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಇಂತಹ ಬೆದರಿಕೆ ಇ-ಮೇಲ್​ಗಳು ಬರುತ್ತಲೇ ಇದೆ. ಆದರೆ, ಈವರೆಗೂ ಆರೋಪಿಗಳು ಮಾತ್ರ ಸಿಗದೆ ಇರುವುದು ದರುಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Fri, 4 October 24

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ