AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

ಇಂದು ಮಧ್ಯಾಹ್ನ ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದಾಗಿ ಕೆಲವೇ ಗಂಟೆಗಳ ಬಳಿಕ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಸಧ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Bomb Threat: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು
ಹೋಟೆಲ್​ ಒಟೆರಾಗೆ ಬಾಂಬ್​ ಬೆದರಿಕೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 28, 2024 | 4:52 PM

Share

ಬೆಂಗಳೂರು, ಸೆ.28: ಬೆಂಗಳೂರು (Bengaluru) ನಗರದ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ((bomb threat) ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಆರು ತಿಂಗಳ ಹಿಂದೆಯೂ ಹೊಟೇಲ್ ಓಟೇರಾಗೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ಬಾಂಬ್ ಇಟ್ಟು ಹೊಟೇಲ್ ಸ್ಪೋಟಿಸುವುದಾಗಿ ಈ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಮೂಲಕ ಒಂದೇ ದಿನ ಎರಡು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾಳ ದಳ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿದ್ದು, ಸಂಪೂರ್ಣ ಹೋಟೆಲ್​ನ್ನು ತಪಾಸಣೆ ಮಾಡಲಾಗುತ್ತಿದೆ.

ಇಂದು(ಶನಿವಾರ) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುವ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಕೂಡಲೇ ಎಚ್ಚೆತ್ತ ಹೋಟೆಲ್​ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲಹೊತ್ತಲ್ಲೇ ಸ್ಥಳಕ್ಕೆ ಬಂದ ಪೊಲೀಸರು, ಬಾಂಬ್ ಸ್ಕ್ವಾಡ್​​ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್​ ಬೆದರಿಕೆ ಎಂಬುದು ಗೊತ್ತಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಇತ್ತೀಚೆಗೆ ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೂ ಇಂತಹುದೇ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇಂತಹ ಘಟನೆಗಳು ಇದೇ ಮೊದಲಲ್ಲ, ಹಲವಾರು ಬಾರಿ ನಡೆದಿವೆ. ಆದರೆ, ಇನ್ನೂವರೆಗೂ ಕಿಡಿಗೇಡಿಗಳು ಮಾತ್ರ ಪತ್ತೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Sat, 28 September 24

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?