AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ರ್ಯಾಂಚ್​ಗೆ ಬಾಂಬ್ ಬೆದರಿಕೆಯ ಇಮೇಲ್

Bomb threat to HSBC bank: ಬೆಂಗಳೂರಿನ ಎಂಜಿ ರಸ್ತೆಯ ಎಚ್​ಎಸ್​ಬಿಸಿ ಶಾಖಾ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಹುಸಿ ಬೆದರಿಕೆಯ ಇಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಹಲಸೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲ ತಿಂಗಳಿಂದಲೂ ಇಂಥ ಹಲವು ಹುಸಿ ಬೆದರಿಕೆ ಕರೆ, ಮೆಸೇಜ್​ಗಳು ಬಂದಿರುವುದುಂಟು.

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ರ್ಯಾಂಚ್​ಗೆ ಬಾಂಬ್ ಬೆದರಿಕೆಯ ಇಮೇಲ್
ಎಚ್​ಎಸ್​ಬಿಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 27, 2024 | 4:29 PM

Share

ಬೆಂಗಳೂರು, ನವೆಂಬರ್ 27: ಎಚ್​ಎಸ್​ಬಿಸಿ ಬ್ಯಾಂಕ್​ನ ಎಂಜಿ ರಸ್ತೆ ಶಾಖೆಯಲ್ಲಿ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗು ಗ್ರಾಹಕರನ್ನು ಹೊರ ಕಳುಹಿಸಲಾಯಿತು. ಹಲಸೂರು ಠಾಣೆಯ ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಬ್ಯಾಂಕ್ ಕಚೇರಿಯ ಒಳಗೆ ಮತ್ತು ಅವರಣದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆ ಆಗಿಲ್ಲ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಇಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಬಾಂಬ್ ಇದೆ ಎಂದು ಬೆದರಿಸಿದ ಇಮೇಲ್ ಬಂದಿದೆ. ಕೂಡಲೇ ಸಿಬ್ಬಂದಿ ವರ್ಗದವರೆಲ್ಲರೂ ಗಾಬರಿಯಿಂದ ಹೊರಗೆ ಓಡಿದರು ಎನ್ನಲಾಗಿದೆ.

ಏರ್​ಪೋರ್ಟ್, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಜಾಗಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸಿ ನಕಲಿ ಮೆಸೇಜ್ ಕಳುಹಿಸುವ ಬಹಳಷ್ಟು ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿವೆ. ಬೆಂಗಳೂರಿನಲ್ಲೂ ಕೆಲ ತಿಂಗಳುಗಳಿಂದ ಈ ರೀತಿ ಹುಸಿ ಬೆದರಿಕೆ ಕರೆಗಳು, ಮೆಸೇಜ್​ಗಳು ಬಂದಿವೆ.

ಇದನ್ನೂ ಓದಿ: ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ಕೆಲ ವಾರಗಳ ಹಿಂದೆ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇಮೇಲ್ ಸಂದೇಶವೊಂದು ಬಂದಿತ್ತು. ಅದನ್ನು ಪರಿಶೀಲಿಸಿದಾಗ ಯಾವ ಬಾಂಬ್ ಪತ್ತೆಯಾಗಿರಲಿಲ್ಲ. ತಮಿಳುನಾಡು ಬಿಜೆಪಿ ನಾಯಕರೊಬ್ಬರ ಹೆಸರು ಬಳಸಿ ದುಷ್ಕರ್ಮಿಗಳು ಬೆಂಗಳೂರಿನ ಬಿಐಟಿ, ಬಿಎಂಎಸ್ ಮತ್ತು ಎಂಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಕಳುಹಿಸಲಾಗಿತ್ತು. ಅದು ಹುಸಿ ಬೆದರಿಕೆ ಎಂದು ಸಾಬೀತಾಗಿತ್ತು. ಆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ದಾರ್ಜೀಲಿಂಗ್ ಮೂಲದ ದೀಪಾಂಜನ್ ಮಿತ್ರ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಿಡಿದಿದ್ದರು. ಅಕ್ಟೋಬರ್​ನ ಮೊದಲ ವಾರದಲ್ಲಿ ಈತ ಹುಸಿ ಬೆದರಿಕೆಯ ಇಮೇಲ್​ಗಳನ್ನು ಕಳುಹಿಸಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Wed, 27 November 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ