AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ರ್ಯಾಂಚ್​ಗೆ ಬಾಂಬ್ ಬೆದರಿಕೆಯ ಇಮೇಲ್

Bomb threat to HSBC bank: ಬೆಂಗಳೂರಿನ ಎಂಜಿ ರಸ್ತೆಯ ಎಚ್​ಎಸ್​ಬಿಸಿ ಶಾಖಾ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಹುಸಿ ಬೆದರಿಕೆಯ ಇಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಹಲಸೂರು ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲ ತಿಂಗಳಿಂದಲೂ ಇಂಥ ಹಲವು ಹುಸಿ ಬೆದರಿಕೆ ಕರೆ, ಮೆಸೇಜ್​ಗಳು ಬಂದಿರುವುದುಂಟು.

ಎಂಜಿ ರಸ್ತೆಯ ಎಚ್​ಎಸ್​ಬಿಸಿ ಬ್ರ್ಯಾಂಚ್​ಗೆ ಬಾಂಬ್ ಬೆದರಿಕೆಯ ಇಮೇಲ್
ಎಚ್​ಎಸ್​ಬಿಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 27, 2024 | 4:29 PM

Share

ಬೆಂಗಳೂರು, ನವೆಂಬರ್ 27: ಎಚ್​ಎಸ್​ಬಿಸಿ ಬ್ಯಾಂಕ್​ನ ಎಂಜಿ ರಸ್ತೆ ಶಾಖೆಯಲ್ಲಿ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್​ವೊಂದನ್ನು ಬ್ಯಾಂಕ್​ಗೆ ಕಳುಹಿಸಲಾಗಿದೆ. ಇದರ ಬೆನ್ನಲ್ಲೇ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗು ಗ್ರಾಹಕರನ್ನು ಹೊರ ಕಳುಹಿಸಲಾಯಿತು. ಹಲಸೂರು ಠಾಣೆಯ ಪೊಲೀಸರು ಶೀಘ್ರದಲ್ಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಬ್ಯಾಂಕ್ ಕಚೇರಿಯ ಒಳಗೆ ಮತ್ತು ಅವರಣದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆ ಆಗಿಲ್ಲ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಇಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಬಾಂಬ್ ಇದೆ ಎಂದು ಬೆದರಿಸಿದ ಇಮೇಲ್ ಬಂದಿದೆ. ಕೂಡಲೇ ಸಿಬ್ಬಂದಿ ವರ್ಗದವರೆಲ್ಲರೂ ಗಾಬರಿಯಿಂದ ಹೊರಗೆ ಓಡಿದರು ಎನ್ನಲಾಗಿದೆ.

ಏರ್​ಪೋರ್ಟ್, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಜಾಗಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸಿ ನಕಲಿ ಮೆಸೇಜ್ ಕಳುಹಿಸುವ ಬಹಳಷ್ಟು ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿವೆ. ಬೆಂಗಳೂರಿನಲ್ಲೂ ಕೆಲ ತಿಂಗಳುಗಳಿಂದ ಈ ರೀತಿ ಹುಸಿ ಬೆದರಿಕೆ ಕರೆಗಳು, ಮೆಸೇಜ್​ಗಳು ಬಂದಿವೆ.

ಇದನ್ನೂ ಓದಿ: ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ಕೆಲ ವಾರಗಳ ಹಿಂದೆ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇಮೇಲ್ ಸಂದೇಶವೊಂದು ಬಂದಿತ್ತು. ಅದನ್ನು ಪರಿಶೀಲಿಸಿದಾಗ ಯಾವ ಬಾಂಬ್ ಪತ್ತೆಯಾಗಿರಲಿಲ್ಲ. ತಮಿಳುನಾಡು ಬಿಜೆಪಿ ನಾಯಕರೊಬ್ಬರ ಹೆಸರು ಬಳಸಿ ದುಷ್ಕರ್ಮಿಗಳು ಬೆಂಗಳೂರಿನ ಬಿಐಟಿ, ಬಿಎಂಎಸ್ ಮತ್ತು ಎಂಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಕಳುಹಿಸಲಾಗಿತ್ತು. ಅದು ಹುಸಿ ಬೆದರಿಕೆ ಎಂದು ಸಾಬೀತಾಗಿತ್ತು. ಆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ದಾರ್ಜೀಲಿಂಗ್ ಮೂಲದ ದೀಪಾಂಜನ್ ಮಿತ್ರ ಎನ್ನುವ ವ್ಯಕ್ತಿಯನ್ನು ಪೊಲೀಸರು ಹಿಡಿದಿದ್ದರು. ಅಕ್ಟೋಬರ್​ನ ಮೊದಲ ವಾರದಲ್ಲಿ ಈತ ಹುಸಿ ಬೆದರಿಕೆಯ ಇಮೇಲ್​ಗಳನ್ನು ಕಳುಹಿಸಿದ್ದ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Wed, 27 November 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ