AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದೆ.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ
ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 01, 2023 | 6:32 PM

Share

ಬೆಂಗಳೂರು, ಡಿ.01: ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ​​ ಬಾಂಬ್​​ ಬೆದರಿಕೆ ಸಂದೇಶ (Bomb Threat Message)ಕ್ಕೆ ಸಂಬಂಧಪಟ್ಟಂತೆ ‘ಬೆಂಗಳೂರು(Bengaluru) ಮಾತ್ರವಲ್ಲದೆ, ವಿದೇಶದಲ್ಲೂ ಶಾಲೆಗಳಿಗೆ ಬೆದರಿಕೆ ಸಂದೇಶ ರವಾನೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಎರಡು ತಿಂಗಳ ಹಿಂದೆಯಷ್ಟೇ ಮಲೇಷ್ಯಾ, ಜರ್ಮನಿ, ಟ್ರಿನಿಡಾಡ್​​ ದೇಶದ ಶಾಲೆಗಳಿಗೂ ಇ-ಮೇಲ್ ಬೆದರಿಕೆ ಸಂದೇಶವನ್ನು ದುಷ್ಕರ್ಮಿಗಳು ಹಾಕಿದ್ದರು.

ಐಪಿ ಅಡ್ರೆಸ್ ನೀಡುವಂತೆ ಬೀಬಲ್ ಕಂಪನಿಗೆ ಪೊಲೀಸರಿಂದ ಪತ್ರ

ಇನ್ನು ಈ ದುಷ್ಕರ್ಮಿಗಳು ಬೀಬಲ್. ಕಾಮ್ ಮೂಲಕ ಕೃತ್ಯ ಮಾಡಿದ ಹಿನ್ನಲೆ ಸದ್ಯ ಬೆಂಗಳೂರು ಪೊಲೀಸರು ಸೈಪ್ರಸ್ ದೇಶದ ಬೀಬಲ್. ಕಂಪನಿಗೆ ಐಪಿ ಅಡ್ರೆಸ್​ ನೀಡುವಂತೆ ಪತ್ರ ಬರೆದಿದ್ದಾರೆ. ಬೆಂಗಳೂರು  ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇ-ಮೇಲ್​ಗಳ ಐಪಿ ಅಡ್ರೆಸ್ ಜರ್ಮನಿಯಿಂದ ಬಂದಿರುವ ರೀತಿಯಲ್ಲಿ ಮಾಹಿತಿ ಬಂದಿದ್ದು,  ಜರ್ಮನಿಯಲ್ಲಿ ಕೂತು ಮೇಲ್ ಕಳಿಸಿರುವ ರೀತಿಯಲ್ಲಿ ಸಂದೇಶ ಬಂದಿದೆ. ಆದರೆ, ಈ ಬಗ್ಗೆ ಬೆಂಗಳೂರು ಪೊಲೀಸರು ಅನುಮಾನ ಹೊಂದಿದ್ದು, ಬೇರೆಡೆ ಎಲ್ಲೋ ಕುಳಿತು ಹ್ಯಾಕ್ ಮಾಡಿ ಮೇಲ್ ಸಂದೇಶ ರವಾನೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

ಈ ಹಿಂದೆ ಕೂಡ ಜರ್ಮನಿ ಐಪಿ ಅಡ್ರೆಸ್​ನಿಂದ ಬಂದಿತ್ತು ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದ್ದು, ಈ ಬಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 1 December 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ