AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದೆ.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ
ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 01, 2023 | 6:32 PM

ಬೆಂಗಳೂರು, ಡಿ.01: ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ​​ ಬಾಂಬ್​​ ಬೆದರಿಕೆ ಸಂದೇಶ (Bomb Threat Message)ಕ್ಕೆ ಸಂಬಂಧಪಟ್ಟಂತೆ ‘ಬೆಂಗಳೂರು(Bengaluru) ಮಾತ್ರವಲ್ಲದೆ, ವಿದೇಶದಲ್ಲೂ ಶಾಲೆಗಳಿಗೆ ಬೆದರಿಕೆ ಸಂದೇಶ ರವಾನೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಎರಡು ತಿಂಗಳ ಹಿಂದೆಯಷ್ಟೇ ಮಲೇಷ್ಯಾ, ಜರ್ಮನಿ, ಟ್ರಿನಿಡಾಡ್​​ ದೇಶದ ಶಾಲೆಗಳಿಗೂ ಇ-ಮೇಲ್ ಬೆದರಿಕೆ ಸಂದೇಶವನ್ನು ದುಷ್ಕರ್ಮಿಗಳು ಹಾಕಿದ್ದರು.

ಐಪಿ ಅಡ್ರೆಸ್ ನೀಡುವಂತೆ ಬೀಬಲ್ ಕಂಪನಿಗೆ ಪೊಲೀಸರಿಂದ ಪತ್ರ

ಇನ್ನು ಈ ದುಷ್ಕರ್ಮಿಗಳು ಬೀಬಲ್. ಕಾಮ್ ಮೂಲಕ ಕೃತ್ಯ ಮಾಡಿದ ಹಿನ್ನಲೆ ಸದ್ಯ ಬೆಂಗಳೂರು ಪೊಲೀಸರು ಸೈಪ್ರಸ್ ದೇಶದ ಬೀಬಲ್. ಕಂಪನಿಗೆ ಐಪಿ ಅಡ್ರೆಸ್​ ನೀಡುವಂತೆ ಪತ್ರ ಬರೆದಿದ್ದಾರೆ. ಬೆಂಗಳೂರು  ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇ-ಮೇಲ್​ಗಳ ಐಪಿ ಅಡ್ರೆಸ್ ಜರ್ಮನಿಯಿಂದ ಬಂದಿರುವ ರೀತಿಯಲ್ಲಿ ಮಾಹಿತಿ ಬಂದಿದ್ದು,  ಜರ್ಮನಿಯಲ್ಲಿ ಕೂತು ಮೇಲ್ ಕಳಿಸಿರುವ ರೀತಿಯಲ್ಲಿ ಸಂದೇಶ ಬಂದಿದೆ. ಆದರೆ, ಈ ಬಗ್ಗೆ ಬೆಂಗಳೂರು ಪೊಲೀಸರು ಅನುಮಾನ ಹೊಂದಿದ್ದು, ಬೇರೆಡೆ ಎಲ್ಲೋ ಕುಳಿತು ಹ್ಯಾಕ್ ಮಾಡಿ ಮೇಲ್ ಸಂದೇಶ ರವಾನೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

ಈ ಹಿಂದೆ ಕೂಡ ಜರ್ಮನಿ ಐಪಿ ಅಡ್ರೆಸ್​ನಿಂದ ಬಂದಿತ್ತು ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದ್ದು, ಈ ಬಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 1 December 23

ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ