AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದೆ.

ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ
ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 01, 2023 | 6:32 PM

Share

ಬೆಂಗಳೂರು, ಡಿ.01: ಬೆಂಗಳೂರಿನ ಶಾಲೆಗಳಿಗೆ ಇ-ಮೇಲ್ ಮೂಲಕ​​ ಬಾಂಬ್​​ ಬೆದರಿಕೆ ಸಂದೇಶ (Bomb Threat Message)ಕ್ಕೆ ಸಂಬಂಧಪಟ್ಟಂತೆ ‘ಬೆಂಗಳೂರು(Bengaluru) ಮಾತ್ರವಲ್ಲದೆ, ವಿದೇಶದಲ್ಲೂ ಶಾಲೆಗಳಿಗೆ ಬೆದರಿಕೆ ಸಂದೇಶ ರವಾನೆಯಾಗಿರುವ ಬಗ್ಗೆ ಮಾಹಿತಿ ಬಂದಿದೆ. ಎರಡು ತಿಂಗಳ ಹಿಂದೆಯಷ್ಟೇ ಮಲೇಷ್ಯಾ, ಜರ್ಮನಿ, ಟ್ರಿನಿಡಾಡ್​​ ದೇಶದ ಶಾಲೆಗಳಿಗೂ ಇ-ಮೇಲ್ ಬೆದರಿಕೆ ಸಂದೇಶವನ್ನು ದುಷ್ಕರ್ಮಿಗಳು ಹಾಕಿದ್ದರು.

ಐಪಿ ಅಡ್ರೆಸ್ ನೀಡುವಂತೆ ಬೀಬಲ್ ಕಂಪನಿಗೆ ಪೊಲೀಸರಿಂದ ಪತ್ರ

ಇನ್ನು ಈ ದುಷ್ಕರ್ಮಿಗಳು ಬೀಬಲ್. ಕಾಮ್ ಮೂಲಕ ಕೃತ್ಯ ಮಾಡಿದ ಹಿನ್ನಲೆ ಸದ್ಯ ಬೆಂಗಳೂರು ಪೊಲೀಸರು ಸೈಪ್ರಸ್ ದೇಶದ ಬೀಬಲ್. ಕಂಪನಿಗೆ ಐಪಿ ಅಡ್ರೆಸ್​ ನೀಡುವಂತೆ ಪತ್ರ ಬರೆದಿದ್ದಾರೆ. ಬೆಂಗಳೂರು  ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇ-ಮೇಲ್​ಗಳ ಐಪಿ ಅಡ್ರೆಸ್ ಜರ್ಮನಿಯಿಂದ ಬಂದಿರುವ ರೀತಿಯಲ್ಲಿ ಮಾಹಿತಿ ಬಂದಿದ್ದು,  ಜರ್ಮನಿಯಲ್ಲಿ ಕೂತು ಮೇಲ್ ಕಳಿಸಿರುವ ರೀತಿಯಲ್ಲಿ ಸಂದೇಶ ಬಂದಿದೆ. ಆದರೆ, ಈ ಬಗ್ಗೆ ಬೆಂಗಳೂರು ಪೊಲೀಸರು ಅನುಮಾನ ಹೊಂದಿದ್ದು, ಬೇರೆಡೆ ಎಲ್ಲೋ ಕುಳಿತು ಹ್ಯಾಕ್ ಮಾಡಿ ಮೇಲ್ ಸಂದೇಶ ರವಾನೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ

ಈ ಹಿಂದೆ ಕೂಡ ಜರ್ಮನಿ ಐಪಿ ಅಡ್ರೆಸ್​ನಿಂದ ಬಂದಿತ್ತು ಸಂದೇಶ

ಈ ಹಿಂದೆ ಕೂಡ ಎರಡು ಬಾರಿ ಇದೇ ರೀತಿ ಶಾಲೆಗಳಿಗೆ ಸಂದೇಶ ರವಾನೆಯಾಗಿತ್ತು. ಆ ಕುರಿತು ತನಿಖೆ ಕೈಗೊಂಡ ಪೊಲೀಸರಿಗೂ ಜರ್ಮನಿವರೆಗೂ ಐಪಿ ಅಡ್ರೆಸ್ ರೀಚ್ ಆಗಿತ್ತು. ಆ ಬಳಿಕ ಅಸಲಿ ಬೆದರಿಕೆ ಸಂದೇಶ ಕಳಿಸಿದವರ ಬಗ್ಗೆ ಗೊತ್ತಾಗಿರಲಿಲ್ಲ. ಇದೀಗ ಪುನಃ ಇಂತಹದ್ದೇ ಇ-ಮೇಲ್​ ಬಂದಿದ್ದು, ಈ ಬಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 1 December 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು