AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್​ಗೆ ಬಾಂಬ್ ಬೆದರಿಕೆ

Bomb Threat to Hotel Shangri La; ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Bomb Threat: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್​ಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Aug 12, 2023 | 8:05 AM

Share

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಪ್ರತಿಷ್ಠಿತ ಹೋಟೆಲ್ ಶಾಂಗ್ರೀಲಾಗೆ (Shangri-La Hotel) ಶುಕ್ರವಾರ ರಾತ್ರಿ ಬಾಂಬ್ ದಾಳಿ ಬೆದರಿಕೆ (Bomb Threat) ಇ-ಮೇಲ್ ಸಂದೇಶ ಬಂದಿದೆ. luisamaclare@proton.me ಎಂಬ ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಹೋಟೆಲ್​ನಲ್ಲಿ ಬಾಂಬ್ ಇಡಲಾಗಿದೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣವೇ ಶಾಂಗ್ರೀಲಾ‌ ಸಿಬ್ಬಂದಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೋಟೆಲ್‌ನಲ್ಲಿ ತಪಾಸಣೆ ಸಹ ನಡೆಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್‌ಗಳ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್‌ನವರಿಗೆ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗುತ್ತಿದೆ.

ಹಣಕ್ಕೆ ಬೇಡಿಕೆ

ನಿಮ್ಮ ಹೋಟೆಲ್‌ನಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗುವುದು. ಹೀಗೆ ಮಾಡಬಾರದೆಂದರೆ, 10 ಸಾವಿರ ಡಾಲರ್ (3 8.29 ಲಕ್ಷ) ಹಣ ನೀಡಿ ಎಂಬುದಾಗಿ ಆರೋಪಿಗಳು ಇಂಗ್ಲಿಷ್ ಮತ್ತು ಚೈನಿಸ್ ಭಾಷೆಗಳಲ್ಲಿ ಇಮೇಲ್​ ಸಂದೇಶ ಕಳುಹಿಸಿದ್ದಾರೆ.  ಯಾರೋ ಕಿಡಿಗೇಡಿಗಳು, ನಕಲಿ ಇ-ಮೇಲ್ ಸೃಷ್ಟಿಸಿದ್ದಾರೆ. ಅದರ ಮೂಲಕ ಸಾಮೂಹಿಕವಾಗಿ ಎಲ್ಲ ಹೋಟೆಲ್‌ಗಳಿಗೂ ಇ-ಮೇಲ್ ಕಳುಹಿಸಿ ಬೆದರಿಕೆಯೊಡ್ತಿದ್ದಾರೆ. ತಾಂತ್ರಿಕ ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್​​ ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Fri, 11 August 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!