AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದಾದ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on:May 29, 2024 | 1:30 PM

ಬೆಂಗಳೂರು, ಮೇ 08: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 1 (Terminal 1) ಮತ್ತು ಕೆಲವು ವಿಮಾನಗಳಲ್ಲಿ (Plane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ (Fake bomb threat) ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟರ್ಮಿನಲ್​ 1ರ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

“ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಮೇಲ್​ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPC ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:13 am, Wed, 8 May 24

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು