AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದಾದ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ, ಎಫ್​​ಐಆರ್​ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 29, 2024 | 1:30 PM

Share

ಬೆಂಗಳೂರು, ಮೇ 08: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 1 (Terminal 1) ಮತ್ತು ಕೆಲವು ವಿಮಾನಗಳಲ್ಲಿ (Plane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ (Fake bomb threat) ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಟರ್ಮಿನಲ್​ 1ರ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, 209.85.218.54 ಐಪಿ ವಿಳಾಸದೊಂದಿಗೆ 666darktriad666@gmail.com ಇಮೇಲ್ ವಿಳಾಸದಿಂದ ‘Terrorzers111’ ಗುಂಪಿನಿಂದ ಬಾಂಬ್​ ಬೆದರಿಕೆ ಮೇಲ್​ ಬಂದಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

“ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಮೇಲ್​ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPC ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:13 am, Wed, 8 May 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ