AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮತ್ತೆ ಮುಂದುವರಿದಿದೆ. ಜನವರಿ 29 ರಂದು ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಕಚೇರಿಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದಾದ ನಂತರ ನೆದರ್​ಲ್ಯಾಂಡ್​ ಕಾನ್ಸುಲೇಟ್ ಕಚೇರಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಈಗ ಬೆಳಕಿಗೆ ಬಂದಿದ್ದು, ದೂರು ದಾಖಲಾಗಿದೆ. ಭದ್ರತೆಯನ್ನೂ ಹೆಚ್ಚಿಸಲಾಗಿದೆ.

ಬೆಂಗಳೂರು: ಇಟಲಿ, ಜಪಾನ್ ಬಳಿಕ ನೆದರ್​​ಲ್ಯಾಂಡ್ ರಾಯಭಾರಿ ಕಚೇರಿಗೆ ಬಾಂಬ್​ ಬೆದರಿಕೆ ಸಂದೇಶ
ಸಾಂದರ್ಭಿಕ ಚಿತ್ರImage Credit source: TV9 Network
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 06, 2026 | 10:03 AM

Share

ಬೆಂಗಳೂರು, ಫೆಬ್ರವರಿ 6: ಬೆಂಗಳೂರಿನಲ್ಲಿ (Bangalore) ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ (Bomb Threat) ಸಂದೇಶಗಳು ಬರುತ್ತಿದ್ದು ಆತಂಕ ಮೂಡಿಸಿದೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್ ಬಳಿಕ ಇದೀಗ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಬೆಳಕಿಗೆ ಬಂದಿದೆ. ಆರ್​​ಟಿ ನಗರದ ಗಂಗಾನಗರದಲ್ಲಿರುವ ನೆದರ್‌ಲ್ಯಾಂಡ್ ರಾಯಭಾರಿ ಕಚೇರಿಗೆ ಜನವರಿ 29ರಂದು ಕಿಡಿಗೇಡಿಗಳು ಇ-ಮೇಲ್ ಕಳುಹಿಸಿ ‘‘5 RDX ಮತ್ತು ಐಇಡಿ ಬಳಸಿ ಸ್ಫೋಟ ಮಾಡುತ್ತೇವೆ’’ ಎಂದು ಬೆದರಿಕೆ ಹಾಕಿದ್ದಾರೆ. ಈ ಕುರಿತು ರಾಯಭಾರಿ ಕಚೇರಿ ಅಧಿಕಾರಿ ಭಾಸ್ಕರ್ ಸುಬ್ರಹ್ಮಣಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಹಲಸೂರಿನಲ್ಲಿರುವ ಇಟಾಲಿಯನ್ ಕಾನ್ಸುಲೇಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. gaina_ramesh@outlook.com ವಿಳಾಸದಿಂದ bangalore.visa@esteri.it ಗೆ ಸಂದೇಶ ಕಳುಹಿಸಿ ‘5 RDX ಬಾಂಬ್ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಇಟಾಲಿಯನ್ ಕಾನ್ಸುಲೇಟ್ ಭದ್ರತಾ ವ್ಯವಸ್ಥಾಪಕ ಜಿಯೋಡೊಮೆನಿಕ್ ಒ ಮಿಲಾನೋ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದರ ಬೆನ್ನಲ್ಲೇ ಕಬ್ಬನ್ ರಸ್ತೆಯಲ್ಲಿರುವ ಜಪಾನ್ ಕಾನ್ಸುಲೇಟ್ ಜನರಲ್ ಕಚೇರಿಗೂ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿತ್ತು. ‘Please be careful, someone will kill you’ ಎಂದು ಕರೆ ಬಂದಿದ್ದಾಗಿ ತಿಳಿದುಬಂದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಸದ್ಯ ಇಟಲಿ, ಜಪಾನ್ ಹಾಗೂ ನೆದರ್‌ಲ್ಯಾಂಡ್ ಕಚೇರಿಗಳಿಗೆ ಬಂದಿರುವ ಬೆದರಿಕೆ ಸಂದೇಶಗಳ ಮೂಲ ಪತ್ತೆಗೆ ಪೊಲೀಸರು ಇ-ಮೇಲ್ ಐಡಿ ಹಾಗೂ ಕರೆಗಳ ಜಾಡು ಬೆನ್ನತ್ತಿದ್ದು, ರಾಯಭಾರ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ