AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು
ವಿಶ್ವೇಶ್ವರಯ್ಯ ಮ್ಯೂಸಿಯಂ
Jagadisha B
| Edited By: |

Updated on: Jan 06, 2024 | 8:20 AM

Share

ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ (Visvesvaraya Museum) ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ (Bomb threat) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ (Cubbon Park Police Station) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ