AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು
ವಿಶ್ವೇಶ್ವರಯ್ಯ ಮ್ಯೂಸಿಯಂ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 06, 2024 | 8:20 AM

Share

ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ (Visvesvaraya Museum) ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ (Bomb threat) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ (Cubbon Park Police Station) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ವಿದೇಶಿ ಕೋರ್ಟ್ ಮೊರೆ ಹೋದ ನಗರ ಪೊಲೀಸರು

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ