AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳಲು ನಗ್ನನಾಗಿಯೇ 4ನೇ ಮಹಡಿಯಿಂದ ಜಿಗಿದು ಆರೋಪಿ ಸಾವು: ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಕೊಳ್ಳಲು ಹೋಗಿ ನಾಲ್ಕನೇ ಮಹಡಿಯಿಂದ ಜಿಗಿದು ಆರೋಪಿ ಮೃತಪಟ್ಟ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ತನಿಖೆಗೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ನಗ್ನನಾಗಿಯೇ 4ನೇ ಮಹಡಿಯಿಂದ ಜಿಗಿದು ಆರೋಪಿ ಸಾವು: ಪ್ರಕರಣ ಸಿಐಡಿಗೆ ವರ್ಗಾವಣೆ
(ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 25, 2023 | 11:37 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮೊಹಮ್ಮದ್ ತಾಹೀರ್ ಹುಸೇನ್ ಸಾವು ಕೇಸ್
  • ಮೊಹಮ್ಮದ್ ಸಾವು ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
  • ಆರೋಪಿ ವಶಕ್ಕೆ ಪಡೆಯಲು ಹೋದಾಗ ಕಟ್ಟಡದಿಂದ ಬಿದ್ದು ಸಾವು

ಬೆಂಗಳೂರು: ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪ ಬೆತ್ತಲೆಯಲ್ಲೇ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಅಪರಾಧ ಪ್ರಕರಣದ ವಿಚಾರಣೆ ಸಲುವಾಗಿ ನಿನ್ನೆ (ಮೇ 24) ವಶಕ್ಕೆ ಪಡೆಯಲು ಪೊಲೀಸರು ತೆರಳಿದಾಗ ಆರೋಪಿ ಮೊಹಮ್ಮದ್ ಹುಸೇನ್ (31) ಬೆಂಗಳೂರಿನ ಬೇಗೂರು ರಸ್ತೆಯ ಮನೆಯೊಂದರ 3ನೇ ಮಹಡಿಯಿಂದ ಕೆಳಗೆ ಜಿಗಿದು ಮೃತಪಟ್ಟಿದ್ದ. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಪೊಲೀಸರೇ ತಳ್ಳಿ ಕೊಂದಿದ್ದಾರೆಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Bangalore News: ಬೊಮ್ಮನಹಳ್ಳಿ; ಪೊಲೀಸರು ವಶಕ್ಕೆ ಪಡೆಯಲು ತೆರಳಿದಾಗ ನಾಲ್ಕನೇ ಮಹಡಿಯಿಂದ ನಗ್ನನಾಗಿ ಬಿದ್ದು ಆರೋಪಿ ಸಾವು

ಘಟನೆ ಹಿನ್ನೆಲೆ

ಲಾಂಗ್‌ ತೋರಿಸಿ ಜೀವ ಬೆದರಿಕೆ: ತನ್ನ ಕುಟುಂಬದ ಜತೆ ನೆಲೆಸಿದ್ದ ಹುಸೇನ್‌, ಸ್ಥಳೀಯವಾಗಿ ಕಾನೂನುಬಾಹಿರ ಚಟುವಟಿಕೆಯಲ್ಲಿ ಸಹ ಪಾತ್ರವಹಿಸುತ್ತಿದ್ದ ಎಂಬ ಆರೋಪ ಬಂದಿದೆ. ಈ ಹಿಂದೆ ಆತನ ಮೇಲೆ ಬೊಮ್ಮನಹಳ್ಳಿ ಠಾಣೆಯಲ್ಲಿ ಸುಲಿಗೆ (ಐಪಿಸಿ 384) ಪ್ರಕರಣ ಕೂಡಾ ದಾಖಲಾಗಿತ್ತು. ಎರಡು ದಿನಗಳಿಂದ ಯುವತಿಯೊಬ್ಬಳಿಗೆ ರಸ್ತೆಯಲ್ಲಿ ಅಡ್ಡಗಟ್ಟಿಹುಸೇನ್‌ ಕಿರುಕುಳ ಕೊಡುತ್ತಿದ್ದ. ಮಂಗಳವಾರ ಕೂಡಾ ಆಕೆಗೆ ಲಾಂಗ್‌ ತೋರಿಸಿ ಹುಸೇನ್‌ ಜೀವ ಬೆದರಿಕೆ ಹಾಕಿದ್ದ. ಈ ಬಗ್ಗೆ ತನ್ನ ತಂದೆ ಬಳಿ ಸಂತ್ರಸ್ತೆ ಹೇಳಿಕೊಂಡು ಕಣ್ಣೀರಿಟ್ಟಿದ್ದಳು. ಕೊನೆಗೆ ಸಂತ್ರಸ್ತೆ ತಂದೆ ನೀಡಿದ ದೂರಿನ ಮೇರೆಗೆ ಹುಸೇನ್‌ ವಿರುದ್ಧ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಬುಧವಾರ ಸಂಜೆ ಹುಸೇನ್‌ನನ್ನು ವಶಕ್ಕೆ ಪಡೆಯಲು ಆತನ ಮನೆಗೆ ತೆರಳಿದ್ದರು. ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಹುಸೇನ್‌ ಕುಟುಂಬ ನೆಲೆಸಿದೆ. ಮನೆಗೆ ಪೊಲೀಸರನ್ನು ಬಂದಿದ್ದನ್ನು ಕಂಡು ತಪ್ಪಿಸಿಕೊಳ್ಳುವ ಭರದಲ್ಲಿ ಮಹಡಿಯಿಂದ ಆತ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದರು.

ಆದ್ರೆ, ಪೊಲೀಸರ ಹೇಳಿಕೆಯನ್ನು ಅಲ್ಲಗೆಳೆದಿದ್ದು, ಪೊಲೀಸರೇ ಹುಸೇನ್‌ನನ್ನು ದೂಡಿ ಸಾಯಿಸಿದ್ದಾರೆ ಎಂದು ಮೃತನ ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ಅಪರಾಧ ಪ್ರಕರಣದಲ್ಲಿ ಹುಸೇನ್‌ನನ್ನು ವಶಕ್ಕೆ ಪಡೆಯಲು ಮನೆಗೆ ಬಂದ ಪೊಲೀಸರು, ಬಳಿಕ ಆತನನ್ನು ಅರೆಬೆತ್ತಲೆಗೊಳಿಸಿ ಮನೋಸೋಇಚ್ಛೆ ಹೊಡೆದು ಕ್ರೌರ್ಯ ಮೆರೆದಿದ್ದಾರೆ. ಈ ದೌರ್ಜನ್ಯ ಎಸಗಿದ ಬಳಿಕ ಹುಸೇನ್‌ನನ್ನು ಹಿಡಿದು ಮೂರನೇ ಮಹಡಿಯಿಂದ ಕೆಳಗೆ ದೂಡಿದ್ದಾರೆ ಎಂದು ಕುಟುಂಬ ಸದಸ್ಯರು ಆಪಾದನೆಯಾಗಿದೆ.

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು