AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್ ಬಳಕೆದಾರರಿಗೆ ಹೊಸ ಸಂಕಷ್ಟ; ನಿಮ್ಮ ಕಾರ್ಡ್​ನ ಮುಖ್ಯಸ್ಥರು ಪುರುಷರಾಗಿದ್ದರೆ ನಿಮಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಲಾಭ

ಬಿಪಿಎಲ್ ಕಾರ್ಡ್​ಗಳ ಹೆಡ್ ಆಫ್ ದಿ ಪ್ಯಾಮಿಲಿ ಪುರುಷರೇ ಆಗಿದ್ದರೇ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಸ್ಕೀಮ್ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಸಧ್ಯ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದರೆ  ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸರಾಗಿದ್ದರೆ ಅನ್ನಭಾಗ್ಯ ಸ್ಕೀಂ ಸಿಗುವುದಿಲ್ವಂತೆ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು.

ಬಿಪಿಎಲ್ ಬಳಕೆದಾರರಿಗೆ ಹೊಸ ಸಂಕಷ್ಟ; ನಿಮ್ಮ ಕಾರ್ಡ್​ನ ಮುಖ್ಯಸ್ಥರು ಪುರುಷರಾಗಿದ್ದರೆ ನಿಮಗೆ ಸಿಗಲ್ಲ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಲಾಭ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Sep 02, 2023 | 7:03 AM

ಬೆಂಗಳೂರು, ಸೆ.02: ಕಾಂಗ್ರೆಸ್ ಸರ್ಕಾರದ(Congress Government) ಮಹತ್ವದ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಜಾರಿಯಾಗಿದ್ದು, ಫಲಾನುಭವಿಗಳು ಕೂಡ ಅದರ ಉಪಯೋಗವನ್ನ ಪಡೆದುಕೊಳ್ಳುತ್ತಿದ್ದಾರೆ. ಆದರೆ ಈ ಮಧ್ಯೆ ಬಿಪಿಎಲ್ ಫಲಾನುಭವಿಗಳಿಗೆ ಹೊಸ ಸಮಸ್ಯೆ ಎದುರಾಗಿದೆ. ಬಿಪಿಎಲ್​ ಕಾರ್ಡ್​ನಲ್ಲಿ(BPL Card) ಮುಖ್ಯಸ್ಥರು ಪುರುಷರಾಗಿದ್ದರೆ ಅನ್ನಭಾಗ್ಯ(Anna Bhagya), ಗೃಹಲಕ್ಷ್ಮಿ ಸ್ಕೀಂ(Gruha Lakshmi Scheme) ಲಾಭಪಡೆಯಲಾಗಲ್ಲ. ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಸ್ಕೀಮ್​ಗಳ ಪೈಕಿ ಈಗಾಗಲೇ ನಾಲ್ಕು ಸ್ಕೀಮ್​ಗಳಿಗೆ ಚಾಲನೆ ಸಿಕ್ಕಿದೆ. ಜನರು ಕೂಡ ಅವುಗಳ ಲಾಭ ಪಡೆಯುತ್ತಿದ್ದಾರೆ. ಆದರೆ ಮೊನ್ನೆಯಷ್ಟೇ ಜಾರಿಯಾದ ಗೃಹಲಕ್ಷ್ಮಿ ಯೋಜನೆಗೆ ಇದೀಗಾ ಹೊಸ ಸಂಕಷ್ಟ ಎದುರಾಗಿದೆ. ಹೌದು, ಬಿಪಿಎಲ್ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಿದ್ದವರಿಗೆ ಗೃಹ ಲಕ್ಷ್ಮಿ ಸ್ಕೀಮ್ ಹಾಗೂ ಅನ್ನಭಾಗ್ಯ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

ಹೌದು, ಬಿಪಿಎಲ್ ಕಾರ್ಡ್​ಗಳ ಹೆಡ್ ಆಫ್ ದಿ ಪ್ಯಾಮಿಲಿ ಪುರುಷರೇ ಆಗಿದ್ದರೇ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಸ್ಕೀಮ್ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಸಧ್ಯ ಕಾರ್ಡ್ ನಲ್ಲಿ 18 ವರ್ಷದ ಒಳಗಿದ್ದ ಬಾಲಕಿಯರು ಇದ್ರೆ ತೊಂದರೆ ಇಲ್ಲ. ಆದರೆ  ವಯಸ್ಕ ಮಹಿಳೆ ಇದ್ದೂ ಕಾರ್ಡ್ ಮುಖ್ಯಸ್ಥ ಗಂಡಸರಾಗಿದ್ದರೆ ಅನ್ನಭಾಗ್ಯ ಸ್ಕೀಂ ಸಿಗುವುದಿಲ್ವಂತೆ. ಗೃಹಲಕ್ಷ್ಮಿ ಅರ್ಜಿ ಸಲ್ಲಿಸಲು ಬಿಪಿಎಲ್, ಎಪಿಎಲ್ ಕಾರ್ಡ್ ಮನೆಯೊಡತಿಯೇ ಇರಬೇಕು. ಇಲ್ಲದಿದ್ದರೆ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಎರಡೂ ಸ್ಕೀಂಗೂ ಅನರ್ಹರಾಗಿರುತ್ತಾರಂತೆ. ಯಾಕಂದ್ತೆ ಈ ಎರಡು ಯೋಜನೆಗಳು ಮಹಿಳೆಯರಿಗೆ ಹೆಚ್ಚು ಪ್ರಧಾನ್ಯತೆಯನ್ನ ನೀಡುತ್ತಿರುವುದುರಿಂದ ಜೊತೆಗೆ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮಾಹಿತಿಯನ್ನ ಆಧಾರಿಸಿ ಈ ನಿಯಮವನ್ನ ಕಡ್ಡಾಯ ಮಾಡಲಾಗಿದೆ. ಸಧ್ಯ ಆಹಾರ ಇಲಾಖೆಯ ಪ್ರಕಾರ ಈಗಿರುವ ಬಿಸಿಎಲ್ ಕಾರ್ಡ್ ದಾರರ ಪೈಕಿ ಆರು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಪುರುಷ ಮುಖ್ಯಸ್ಥ ಕಾರ್ಡ್ ದಾರರು ಇರುವುದು ಕಂಡುಬಂದಿದೆ.

ಬಿಪಿಎಲ್​ ಕಾರ್ಡ್​ನಲ್ಲಿ ಮನೆಯೊಡತಿ ಹೆಸರು ಬದಲಾಯಿಸಲು 10 ದಿನ ಅವಕಾಶ

ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಇದ್ದೂ ಪುರುಷ ಮುಖ್ಯಸ್ಥ ಇರೋ ಕಾರ್ಡ್ ನಿಂದ ಅರ್ಜಿ ಸಲ್ಲಿಸಿದ್ರೆ ಅರ್ಜಿ ಸ್ವೀಕಾರವಾಗುತ್ತಿಲ್ಲ. ಜೊತೆಗೆ ಆಂತಹ ಬಿಪಿಎಲ್ ಕಾರ್ಡ್ ದಾರರಿಗೆ ಗೃಹಲಕ್ಷ್ಮಿಯ ಎರಡು ಸಾವಿರ ದುಡ್ಡು ಕೂಡ ಸಿಗೋದಿಲ್ಲ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು ಆಹಾರ ಇಲಾಖೆ ಸಮಯ ನಿಗದಿ ಮಾಡಿದೆ. ಮನೆಯೊಡತಿ ಹೆಸರು ಬದಲಾವಣೆಗೆ ಸೆ. 1ರಿಂದ 10ರವರೆಗೆ ಅವಕಾಶ ನೀಡಿದ್ದು, ಈ ಹತ್ತು ದಿನದಲ್ಲಿ ಹೆಸರು ಬದಲಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಇನ್ನು, ಆಹಾರ ಇಲಾಖೆಯ ಪ್ರಕಾರ 94 % ರಷ್ಟು ಮಹಿಳೆಯರು ಬಿಪಿಎಲ್ ಕಾರ್ಡ್ ಗಳ ಮುಖ್ಯಸ್ಥರಾಗಿದ್ದಾರೆ. ಇನ್ನು 5 % ರಷ್ಟು ಕಾರ್ಡ್ ಗಳಲ್ಲಿ ಪುರುಷರು ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಈಗಾಗಲೆ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಕೆ ಮಾಡಿದ 1.28 ಕೋಟಿ ಫಲಾನುಭವಿಗಳ ಪೈಕಿ ಸಧ್ಯ 1.11 ಕೋಟಿಯಷ್ಟು ಅರ್ಜಿಸಲ್ಲಿಕೆಯಾಗಿದ್ದು, ಇನ್ನು 18 ಲಕ್ಷದಷ್ಟು ಮಹಿಳೆಯರು ಅರ್ಜಿ ಸಲ್ಲಿಸುವುದು ಬಾಕಿ ಇದೆ.‌ ಇದರಲ್ಲಿ ಆರು ಲಕ್ಷದಷ್ಟು ಕಾರ್ಡ್ ಗಳು ಬಿಪಿಎಲ್ ಕಾರ್ಡ್ ಗಳಲ್ಲಿ ಮುಖ್ಯಸ್ಥೆಯರು ಅಲ್ಲದೇ ಇರುವುದು ಕಂಡುಬಂದಿರುವುದೇ ಅರ್ಜಿ ಸಲ್ಲಿಕೆಗೆ ಸಮಸ್ಯೆಯಾಗುತ್ತಿದೆ ಎನ್ನಲಾಗುತ್ತಿದೆ. ಆದಷ್ಟು ಬೇಗ ಮಹಿಳೆಯರು ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾಮ ಒನ್ ಸೆಂಟರ್, ಕರ್ನಾಟಕ ಒನ್ ಸೆಂಟರ್ ಗಳಲ್ಲಿ ತಮ್ಮ ಹೆಸರುಗಳನ್ನ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಒಟ್ನಲ್ಲಿ ಮಹಿಳೆಯರು ಆರ್ಥಿಕವಾಗಿ ಸದೃಡತೆಯನ್ನಾಗಿ ಮಾಡುವ ಸಲುವಾಗಿ ಈ ಯೋಜನೆಗಳು ಜಾರಿಯಾಗಿವೆ. ಆದರೆ ಅರ್ಜಿಗಳ ಈ ನಿಯಮಗಳಿಂದಾಗಿ ಜನರು ಸೈಬರ್ ಸೆಂಟರ್ ಗಳನ್ನ ಸುತ್ತಿ ಸುಸ್ತಾಗುತ್ತಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ