AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್: ವೇಗ ಮೀತಿ ಮೀರಿದ 44 ವಾಹನಗಳ ಮೇಲೆ ಕೇಸ್​ ಬುಕ್​

ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆ ವೇಗಕ್ಕೆ ಕಡಿವಾಣ ಹಾಕಲು ಪೊಲೀಸ್​ ಇಲಾಖೆ ಮುಂದಾಗಿದ್ದು, ಈ ಕುರಿತು ಎಡಿಜಿಪಿ ಅಲೋಕ್​ ಕುಮಾರ್​ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್: ವೇಗ ಮೀತಿ ಮೀರಿದ 44 ವಾಹನಗಳ ಮೇಲೆ ಕೇಸ್​ ಬುಕ್​
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 05, 2023 | 11:37 AM

Share

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇ(Bengaluru-Mysore Expressway)ನಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆ ವೇಗಕ್ಕೆ ಕಡಿವಾಣ ಹಾಕಲು ಪೊಲೀಸ್​ ಇಲಾಖೆ ಮುಂದಾಗಿದೆ. ಈ ಕುರಿತು ಎಡಿಜಿಪಿ ಅಲೋಕ್​ ಕುಮಾರ್(Alok Kumar)​ ಟ್ವೀಟ್ ಮಾಡಿದ್ದು, ‘120 ಕಿ.ಮೀ. ವೇಗದಲ್ಲಿ ವಾಹನ ಸಂಚಾರದಿಂದ ಅಪಘಾತ ಹೆಚ್ಚಳವಾಗಿದೆ. ಹೀಗಾಗಿ ಅಪಘಾತ ತಡೆಯಲು ಗಂಟೆಗೆ 100 ಕಿ.ಮೀ. ವೇಗದ ಮಿತಿ ನಿಗದಿ ಮಾಡಲಾಗಿದೆ. ಅದರಂತೆ ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ಸ್ಪೀಡ್​​​ ರಡಾರ್ ಗನ್​​​​, ವಾಹನಗಳ ನಂಬರ್​ ಪ್ಲೇಟ್ ರೆಕಗ್ನಿಷನ್(ANPR) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎಕ್ಸ್​​​ಪ್ರೆಸ್​​ವೇನಲ್ಲಿ ನಿಗದಿತ ವೇಗದಲ್ಲಿ ವಾಹನಗಳು ಸಂಚರಿಸಬೇಕು. 100 ಕಿ.ಮೀ. ವೇಗದ ಮಿತಿ ನಿಯಮ ಉಲ್ಲಂಘಿಸಿದರೆ ಕೇಸ್​​ ದಾಖಲು ಮಾಡಲಾಗುತ್ತದೆ ಎಂದು ರಸ್ತೆ ಸುರಕ್ಷಿತ ಮತ್ತು ಸಂಚಾರ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಹೇಳಿದ್ದಾರೆ.

ಇನ್ನು ಈಗಾಗಲೇ ರಾಮನಗರ ಪೊಲೀಸರು ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ನಿಗದಿತ ವೇಗದಲ್ಲಿ ಚಲಿಸದ ವಾಹನಗಳ ಪತ್ತೆಗಾಗಿ ಸ್ಪೀಡ್​​​ ರಡಾರ್ ಗನ್​ನ್ನು ಬಳಸಲು ಶುರು ಮಾಡಿದ್ದು, ಮುಂದಿನ ದಿನಗಳಲ್ಲಿ ಮಂಡ್ಯ ಮತ್ತು ಮೈಸೂರು ಪೊಲೀಸರು ಬಳಸಲು ಶುರು ಮಾಡುತ್ತಾರೆ. ಅದರಂತೆ  ನಿನ್ನೆ(ಜು.4) ರಾಮನಗರ ಪೊಲೀಸರು 44 ವೇಗ ಮೀತಿ ಮೀರಿದ ವಾಹನಗಳ ಮೇಲೆ ಕೇಸ್​ ಬುಕ್​ ಮಾಡಿದ್ದಾರೆ. ಈ ಕುರಿತು ರಾಮನಗರ ಎಸ್ಪಿ ಪ್ರಶಂಸಿದ್ದಾರೆ ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ:Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐದೇ ತಿಂಗಳಲ್ಲಿ 570 ಅಪಘಾತ, 55 ಸಾವು

ಇನ್ನು ಇತ್ತೀಚೆಗಷ್ಟೇ ಅಲೋಕ್ ಮೋಹನ್ ಅವರು ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ಸಂಚರಿಸಿ ಅತಿ ಹೆಚ್ಚು ಅಪಘಾತವಾಗುವ ಸ್ಪಾಟ್​ಗಳನ್ನು ಪರಿಶೀಲನೆ ಮಾಡಿದ್ದರು. ಬಳಿಕ ಮಾತನಾಡಿದ್ದ ಅವರು ‘ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದಾಗಿನಿಂದಲೂ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ತಡೆಯಲು ಹೆದ್ದಾರಿಯಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು  ವಾಹನಗಳ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು, ವಾಹನ ಮಿತಿಗಿಂತ ವೇಗವಾಗಿ ಚಲಿಸುತ್ತಿದ್ದರೆ, ಅಂತಹ ವಾಹನ ಸಂಖ್ಯೆಯ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಈ ಹಿಂದೆ ಹೇಳಿದ್ದರು.

ಎಕ್ಸ್‌ಪ್ರೆಸ್​ವೇನಲ್ಲಿ ಅಪಘಾತ ಹೆಚ್ಚಳ ಕುರಿತು ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿ ‘ವಾಹನಗಳು ಗಂಟೆಗೆ 120 ಕಿಮೀ ಗರಿಷ್ಠ ವೇಗದ ಮಿತಿಯೊಂದಿಗೆ ಚಲಿಸಲು ವಿನ್ಯಾಸಗೊಳಿಸಲಾಗಿದೆ. ಆದರೆ, 80 ಕಿಮೀ ನಿಂದ 100 ಕಿಮೀ ವೇಗದಲ್ಲಿ ಪ್ರಯಾಣಿಸುವಾಗ ಅಪಘಾತಗಳು ಸಂಭವಿಸುವುದಿಲ್ಲ. ಈ ವೇಗದಲ್ಲಿ ಪ್ರಯಾಣಿಸಿದಾಗಲೂ ಒಂದೂವರೆ ಗಂಟೆಯಲ್ಲಿ ಬೆಂಗಳೂರು ಸೇರಬಹುದು. 10-15 ನಿಮಿಷ ಉಳಿಸುವುದಕ್ಕಾಗಿ ಜನರು ವೇಗದ ಮಿತಿಯನ್ನು ದಾಟಬಾರದು. ಐಷಾರಾಮಿ ಕಾರಿನಲ್ಲಿ, ಕೆಲವರು 140-150 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದರೆ, ಅದನ್ನು ಹೇಗೆ ನಿಯಂತ್ರಿಸಬಹುದು? ಇದು ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 am, Wed, 5 July 23

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ