AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brand Bengaluru: ತಿಂಗಳ ಅಂತ್ಯದಲ್ಲಿ ಮೂರು ಮೇಜರ್ ನಿರ್ಧಾರ ತಿಳಿಸುತ್ತೇನೆ- ಡಿಕೆ ಶಿವಕುಮಾರ್​

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಬ್ರ್ಯಾಂಡ್​ ಬೆಂಗಳೂರು ಅಂಗವಾಗಿ ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಮತ್ತು ನಾಗರಿಕ ಸಂಘದ ಜತೆ ವಿಧಾನಸೌಧದಲ್ಲಿ ವರ್ಚುವಲ್​ ಮೂಲಕ ಸಂವಾದ ನಡೆಸಿದರು. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಬ್ರ್ಯಾಂಡ್​​ ಬೆಂಗಳೂರಿಗಾಗಿ​ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ.

Brand Bengaluru: ತಿಂಗಳ ಅಂತ್ಯದಲ್ಲಿ ಮೂರು ಮೇಜರ್ ನಿರ್ಧಾರ ತಿಳಿಸುತ್ತೇನೆ- ಡಿಕೆ ಶಿವಕುಮಾರ್​
ಡಿಸಿಎಂ ಡಿಕೆ ಶಿವಕುಮಾರ್​
ಕಿರಣ್​ ಹನಿಯಡ್ಕ
| Edited By: |

Updated on: Jul 15, 2023 | 6:01 PM

Share

ಬೆಂಗಳೂರು: ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚಿಸಲಾಗಿದೆ. ಬೆಂಗಳೂರಲ್ಲಿ (Bengaluru) ತೆರಿಗೆ ಕಟ್ಟದೆ ಕಳ್ಳಾಟ ಆಡುವವರನ್ನು ಟ್ರೇಸ್ ಮಾಡಬೇಕು. ಫುಟ್​​ಪಾತ್ ಕ್ಲಿಯರೆನ್ಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೂರು ಮೇಜರ್ ನಿರ್ಧಾರಗಳನ್ನು ಈ ತಿಂಗಳ ಅಂತ್ಯದಲ್ಲಿ ಹೇಳುತ್ತೇನೆ. ಆಸ್ತಿ ಪತ್ರಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡಿ ಎಂದು ಸೂಚಿಸಿದ್ದೇನೆ. ಇನ್ನು ವೇಸ್ಟ್, ಡೆಬ್ರೀಸ್ ತಂದು ಸುರಿಯುತ್ತಿರುವುದನ್ನು ಸರಿ ಮಾಡುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ. ಡೆಬ್ರೀಸ್ ಲೆಕ್ಕ ಕೊಡಲು ಮತ್ತು ಅದಕ್ಕಾಗಿ ಒಂದು ಸಿಸ್ಟಂ ತರಲು ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು (ಜು.15) ಬ್ರ್ಯಾಂಡ್​ ಬೆಂಗಳೂರು (Brand Bengaluru) ಅಂಗವಾಗಿ ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಮತ್ತು ನಾಗರಿಕ ಸಂಘದ ಜತೆ ವಿಧಾನಸೌಧದಲ್ಲಿ ವರ್ಚುವಲ್​ ಮೂಲಕ ಸಂವಾದ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ಜಾಹೀರಾತು ಅಳವಡಿಕೆಗೆ ಹೊಸ ಪಾಲಿಸಿ ಇದೆ, ಅದನ್ನು ನಾನು ಸ್ಟಡಿ ಮಾಡುತ್ತಿದ್ದೇನೆ. ಆದಷ್ಟು ಬೇಗ ಒಂದು ಹೊಸ ರೂಪ ಕೊಡುತ್ತೇನೆ. ಎಲ್ಲರೂ ಪಾರದರ್ಶಕತೆ ಕೇಳುತ್ತಿದ್ದಾರೆ, ಅದು ಅವರ ಹಕ್ಕು. ಕರೆಂಟ್ ಈ ನಡುವೆ ಸಾಕಷ್ಟು ವ್ಯತ್ಯಯ ಆಗುತ್ತಿದೆ ಅಂತ ಹೇಳಿದ್ದಾರೆ. ನಮ್ಮ ಟೆಕ್ನಾಲಜಿ ಸರಿಯಾಗಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ ನೀಡಬೇಕಿದೆ ಎಂದರು.

ಇದನ್ನೂ ಓದಿ: ಆಷಾಢ ಮುಗಿಯುತ್ತಿದ್ದಂತೆಯೇ ಮನೆ ಬದಲಿಸಲಿರುವ ಸಿದ್ದರಾಮಯ್ಯ, ಸಿಎಂ ಅದೃಷ್ಟ ನಿವಾಸಕ್ಕೆ ಡಿಕೆ ಶಿವಕುಮಾರ್

ಬ್ರ್ಯಾಂಡ್​​ ಬೆಂಗಳೂರು ಬಗ್ಗೆ ಸರ್ಕಾರ, ಖಾಸಗಿ ಸಂಸ್ಥೆಗಳಿಂದ ಸಲಹೆ ಸ್ವೀಕರಿಸಿದೆ. ಫೈಬರ್ ಕನೆಕ್ಷನ್​​ನಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನಮಗೆ ತಿಳಿಸಿದ್ದಾರೆ. ವಾರ್ಡ್ ಮಾಡುವಾಗ ನಮ್ಮ ಅಭಿಪ್ರಾಯ ಕೇಳಿ ಎಂದು ಹೇಳಿದ್ದಾರೆ. ಫುಟ್​​ಪಾತ್ ಸಮಸ್ಯೆ ಬಗ್ಗೆಯೂ ಸಭೆಯಲ್ಲಿ ಕೆಲವು ಸಲಹೆ ನೀಡಿದ್ದಾರೆ. ತೆರಿಗೆ ಪಾವತಿದಾರರ ಬಗ್ಗೆಯೂ ಮಾತನಾಡಿದ್ದಾರೆ. ಮಕ್ಕಳ ಅಭಿಪ್ರಾಯವನ್ನೂ ಕೇಳುವಂತೆ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹೈಸ್ಕೂಲ್, ಕಾಲೇಜು ಮಕ್ಕಳ ಜತೆ ನಾನು ಈಗಾಗಲೇ ಮಾತಾಡಿದ್ದೇನೆ ಎಂದು ಹೇಳಿದರು.

ಇನ್ನು ಈ ಸಂವಾದದಲ್ಲಿ ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ರಾಕೇಶ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಮಾಜಿ ಶಾಸಕಿ ಸೌಮ್ಯಾರೆಡ್ಡಿ, ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಲಯ ಆಯುಕ್ತರು ಸೇರಿ ಹಲವರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ