AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವ ಭರವಸೆ ಉಲ್ಲಂಘನೆ ವಂಚನೆಯಲ್ಲ: ಹೈಕೋರ್ಟ್ ಏಕಸದಸ್ಯ ಪೀಠ ಆದೇಶ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಳು. ಸದ್ಯ ಮದುವೆಯ ಭರವಸೆ ಉಲ್ಲಂಘನೆ ವಂಚನೆಯಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿ ನ್ಯಾಯಾಧೀಶರಾದ ಕೆ. ನಟರಾಜನ್ ರವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.

ಮದುವೆಯಾಗುವ ಭರವಸೆ ಉಲ್ಲಂಘನೆ ವಂಚನೆಯಲ್ಲ: ಹೈಕೋರ್ಟ್ ಏಕಸದಸ್ಯ ಪೀಠ ಆದೇಶ
ಹೈಕೋರ್ಟ್
TV9 Web
| Updated By: preethi shettigar|

Updated on:Jan 24, 2022 | 8:07 PM

Share

ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಅದನ್ನು ಉಲ್ಲಂಘನೆ ಮಾಡಿದರೆ ವಂಚನೆಯಲ್ಲ(Fraud) ಎಂದು ಕೇಸ್ ರದ್ದುಗೊಳಿಸಿ ಹೈಕೋರ್ಟ್ (High court) ಏಕಸದಸ್ಯ ಪೀಠ ಆದೇಶ ನೀಡಿದೆ. ವೆಂಕಟೇಶ್ ಎಂಬಾತನ ವಿರುದ್ಧ ಯುವತಿ ನೀಡಿದ ದೂರು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.​ ಯುವತಿಯನ್ನು ಪ್ರೀತಿಸಿ ನಂತರ ವೆಂಕಟೇಶ್​ ಎಂಬಾತ ವಿವಾಹವಾಗಿರಲಿಲ್ಲ. ಮನೆಯವರ ಒತ್ತಾಯದಂತೆ ಬೇರೆ ಯುವತಿಯೊಂದಿಗೆ ವಿವಾಹವಾಗಿದ್ದ (Marriage). ಹೀಗಾಗಿ ವೆಂಕಟೇಶ್ ಮತ್ತು ಆತನ ಕುಟುಂಬದವರ ವಿರುದ್ಧ ಯುವತಿ ದೂರು ನೀಡಿದ್ದಳು.

ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಳು. ಸದ್ಯ ಮದುವೆಯ ಭರವಸೆ ಉಲ್ಲಂಘನೆ ವಂಚನೆಯಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿ ನ್ಯಾಯಾಧೀಶರಾದ ಕೆ. ನಟರಾಜನ್ ರವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ.

ಗದಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಪ್ರಕರಣ; ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿ ಸಿಎಂ ಪತ್ರ

ಜನವರಿ 18ರಂದು ನರಗುಂದದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಸಮೀರ್ ಶಹಾಪುರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿ ಸಿಎಂ ಬೊಮ್ಮಾಯಿಗೆ ಪರಿಷತ್ ಸದಸ್ಯ ಸಲೀಂ ಅಹ್ಮದ್ ಪತ್ರ ಬರೆದಿದ್ದಾರೆ. ಗದಗ ಜಿಲ್ಲೆ ಶಾಂತಿಯ ನಾಡು, ಮಹಾತ್ಮರು, ಸೂಫಿ, ಸಂತರ ಹುಟ್ಟಿದ ನಾಡು. ಅಂಥ ನಾಡಲ್ಲಿ ಇಂಥ ಘಟನೆ ನಡೆದಿದ್ದು ಸರಿಯಲ್ಲ. ಸಾಮರಸ್ಯ ಹಾಳು ಮಾಡುವ ಕೆಲಸ ನಡೆದಿದೆ. ಹೀಗಾಗಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ನರಗುಂದ ಪಟ್ಟಣದಲ್ಲಿ ಜನವರಿ 17 ರ ರಾತ್ರಿ ಬೈಕ್ ಮೇಲೆ ಹೋಗುವಾಗ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಸಮೀರ ಶಹಾಪೂರ (19) ಮತ್ತು ಶಮ್ಮಶಾದ್ ಖಾನ್ ಮೇಲೆ ಹಲ್ಲೆ ಮಾಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಸಮೀರ್ ಶಹಾಪೂರ ಜನವರಿ 18 ರಂದು ಸಾವನ್ನಪ್ಪಿದ್ದು, ಶಮ್ಶಶಾದ ಸ್ಥಿತಿ ಗಂಭೀರವಾಗಿದೆ. ಹುಬ್ಬಳ್ಳಿ ಕಿಮ್ಸ್  ಆಸ್ಪತ್ರೆಯಲ್ಲಿ ಸಮೀರ್​ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕೆಆರ್​ಎಸ್ ಸುತ್ತಮುತ್ತ ಕಲ್ಲುಗಣಿಗಾರಿಕೆ: ಹೈಕೋರ್ಟ್​ನಲ್ಲಿ ಲೈಸೆನ್ಸ್ ಅಮಾನತು ಪ್ರಶ್ನಿಸಿದ 17 ಕ್ವಾರಿ ಮಾಲೀಕರು

ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕದಲ್ಲಿದ್ದು, ಮದುವೆ ನಿರಾಕರಿಸಿ ಜೈಲು ಸೇರಿದ್ದವನನ್ನು ದೋಷಮುಕ್ತ ಗೊಳಿಸಿದ ಬಾಂಬೆ ಹೈಕೋರ್ಟ್​; ನ್ಯಾಯಾಧೀಶರು ಹೇಳಿದ್ದೇನು?

Published On - 7:53 pm, Mon, 24 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!