TV9 Kannada News Live: ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರು ಆರೋಪಿಗಳ ಬಂಧನ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಮುಂಬೈ ಸರಣಿ ಹತ್ಯಾಕಾಂಡದ ಭೀಕರ ಸಂಚು ಭೇದಿಸಿದ ಪೊಲೀಸರು! ಇತ್ತ ಬೆಂಗಳೂರಿನಲ್ಲಿ ಮೊದಲ ದಿನವೇ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿ ದಾಖಲೆ ಬರೆಯಲಾಗಿದೆ. ಪ್ರಿಯಾ ಸುದೀಪ್ ಅವರಿಂದ ಹೊಸ ಕಥೆಗಾರರಿಗೆ ಸುವರ್ಣ ಅವಕಾಶ. ದೇಶ-ವಿದೇಶ, ಸಿನಿಮಾ ಹಾಗೂ ರಾಜ್ಯದ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

TV9 Kannada News Live: ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರು ಆರೋಪಿಗಳ ಬಂಧನ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು

Updated on: Jul 03, 2026 | 8:46 AM

LIVE NEWS & UPDATES

  • 03 Jul 2026 08:46 AM (IST)

    ಟಿಬಿ ಡ್ಯಾಂನಿಂದ ನೀರು ಸ್ಥಗಿತ: ರೈತರಲ್ಲಿ ಆತಂಕ

    ಮುಂಗಾರು ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಾಲುವೆಗಳಿಗೆ ನೀರು ಪೂರೈಕೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಲಾಗಿದೆ. ಮುಂಗಾರು ಬೆಳೆಗೆ ನೀರು ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಳೆದ ವರ್ಷ ಕ್ರಸ್ಟ್ ಗೇಟ್ ಸಮಸ್ಯೆಯಿಂದ ಹಿಂಗಾರು ಕಳೆದುಕೊಂಡಿದ್ದ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶದ ರೈತರು ಈಗ ಸತತ ಎರಡನೇ ಬಾರಿಗೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

  • 03 Jul 2026 08:43 AM (IST)

    ಮಾದಪಟ್ಟಣ ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ

    ಗುರುವಾರ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಕಾವೇರಿ ಕ್ವಾರಿಯಲ್ಲಿ ಕಲ್ಲುಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಮತ್ತು ಲೋಕಲ್ ಇನ್‌ಚಾರ್ಜ್ ರಾಜು ಬಂಧಿತರು.

    ಬಸವೇಶ್ವರ ಕ್ರಷರ್ ಅನ್ನು ಲೀಸ್‌ಗೆ ಪಡೆದಿದ್ದ ಪಾಂಡುರಂಗ ಸೇರಿದಂತೆ ಮೂವರನ್ನು ತನಿಖೆಗೆ ಒಳಪಡಿಸಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿತ್ತು. ಆದರೆ, ಕಾವೇರಿ ಕ್ರಷರ್ ಮಾಲೀಕ ಉದಯ್ ಶಂಕರ್ ಮತ್ತು ಬಸವೇಶ್ವರ ಕ್ರಷರ್ ಮಾಲೀಕ ಡಿ.ಆನಂದಸ್ವಾಮಿ ಇನ್ನೂ ಬಂಧನವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮತ್ತಷ್ಟು ಓದಿ

ಕೇಂದ್ರ ಸರ್ಕಾರವು ಆನ್‌ಲೈನ್ ವಂಚನೆ ತಡೆಗೆ ವಾಟ್ಸಾಪ್ ಬೆನ್ನಲ್ಲೇ ಈಗ ಟೆಲಿಗ್ರಾಮ್ ಮತ್ತು ಸಿಗ್ನಲ್ ಆ್ಯಪ್‌ಗಳ ‘ಯೂಸರ್ ನೇಮ್’ ವೈಶಿಷ್ಟ್ಯದ ವಿರುದ್ಧ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ಇತ್ತ ಕ್ರಿಕೆಟ್ ಅಂಗಳದಲ್ಲಿ, ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯದಲ್ಲಿ ಯುವ ಆಟಗಾರ ವೈಭವ್‌ಗೆ ಅವಕಾಶ ಸಿಗಲ್ಲ, ಸಂಜುಗೇ ಚಾನ್ಸ್ ಎಂದು ದಿನೇಶ್ ಕಾರ್ತಿಕ್ ಭವಿಷ್ಯ ನುಡಿದಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಹೆಸರು ಫ್ರಾನ್ಸ್‌ನ ಪ್ರತಿಷ್ಠಿತ ಲುಮಿಯೆರ್ ಮ್ಯೂಸಿಯಂನ ‘ವಾಲ್ ಆಫ್ ಫಿಲ್ಮ್ ಮೇಕರ್ಸ್’ ಸೇರುವ ಮೂಲಕ ಜಾಗತಿಕ ಗೌರವ ಪಾತ್ರವಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

Published On - 8:41 am, Fri, 3 July 26

Follow Us