AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸಮಸ್ಯೆ ಬಗೆಹರಿದಿದೆ, ಮತ್ತೆ ಸಂಚಾರಕ್ಕೆ ಮುಕ್ತ -NHAI

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಮೇಲ್ಸೇತುವೆ ಮತ್ತು ಒಳಚರಂಡಿ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಎನ್‌ಎಚ್‌ಎಐ ತಿಳಿಸಿದೆ.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಸಮಸ್ಯೆ ಬಗೆಹರಿದಿದೆ, ಮತ್ತೆ ಸಂಚಾರಕ್ಕೆ ಮುಕ್ತ -NHAI
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ
ಆಯೇಷಾ ಬಾನು
|

Updated on:Mar 23, 2023 | 7:56 AM

Share

ಬೆಂಗಳೂರು: ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಉದ್ಘಾಟಿಸಿದ 117-ಕಿಮೀ ಉದ್ದದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ(Bengaluru Mysuru Expressway) ಹೆದ್ದಾರಿಯಲ್ಲಿ ಉದ್ಘಾಟನೆಯಾದ ಒಂದೇ ವಾರದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು. ಮಳೆ ಬಂದಾಗ ಹೆದ್ದಾರಿಯಲ್ಲಿ ಮಳೆ ನಿಲ್ಲುತ್ತಿತ್ತು. ಕೆಲ ಕಡೆ ರಸ್ತೆ ಕಿತ್ತು ಬಂದಿತ್ತು. ಇದರಿಂದ ಸವಾರರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಹೊಸ ಹೆದ್ದಾರಿಯಲ್ಲಿ ಎದುರಾದ ಎರಡು ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮಾಹಿತಿ ನೀಡಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಮೇಲ್ಸೇತುವೆ ಮತ್ತು ಒಳಚರಂಡಿ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗಿದೆ, ಹಾಗೂ ಹೆದ್ದಾರಿಯ ಸುತ್ತಲಿನ ಹಳ್ಳಿಗಳಲ್ಲಿ ವಾಸಿಸುವ ಜನರ ಅನುಕೂಲಕ್ಕಾಗಿ ಸರ್ವಿಸ್ ರಸ್ತೆಗಳಿಗೆ ಉಚಿತ ಪ್ರವೇಶದ ಸಮಸ್ಯೆಯನ್ನೂ ಕೂಡ ಪರಿಹರಿಸಲಾಗಿದೆ ಎಂದು ಎನ್‌ಎಚ್‌ಎಐ ತಿಳಿಸಿದೆ. ಸಗಬಸವನದೊಡ್ಡಿ ಗ್ರಾಮದ ಬಳಿಯ ಚರಂಡಿ ಸಮಸ್ಯೆಯನ್ನೂ ಎನ್‌ಎಚ್‌ಎಐ ಸರಿಪಡಿಸುತ್ತಿದೆ. 2023 ರ ಮಾರ್ಚ್ 17 ರಂದು ಆದ ಮಳೆಯಿಂದ 117 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇಯಲ್ಲಿ ನೀರು ನಿಂತಿತ್ತು. ಸಾಗಬಸವನದೊಡ್ಡಿ ಗ್ರಾಮದ ಬಳಿಯ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರವಾಹ ಉಂಟಾಗಿರುವುದಕ್ಕೆ ಸ್ಥಳೀಯ ನಿವಾಸಿಗಳೇ ಕಾರಣ ಎಂದು ಎನ್‌ಎಚ್‌ಎಐ ಆರೋಪಿಸಿದೆ.

ಕೆಲವು ಗ್ರಾಮಸ್ಥರು ತಮ್ಮ ಹಳ್ಳಿಗಳನ್ನು ತಲುಪಲು ಅಥವಾ ರಸ್ತೆ ದಾಟಲು ರಸ್ತೆ ಪಕ್ಕ ಹಾಕಲಾಗಿರುವ ತಡೆಗೋಡೆಗಳನ್ನು ತೆಗೆಯಬೇಕಾಗಿತ್ತು. ಪ್ರಯಾಣಿಕರು ಮಾಡುವ ದೂರುಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜೊತೆಗೆ ಗ್ರಾಮಸ್ಥರು ಚರಂಡಿಗೆ ಮಣ್ಣು ಸುರಿದಿದ್ದರಿಂದ ಪ್ರವಾಹ ಉಂಟಾಗಿದೆ. ಇದರಿಂದಾಗಿ ಮುಖ್ಯ ರಸ್ತೆಯಲ್ಲಿ ನೀರು ನಿಂತಿದೆ. ಇದನ್ನು ಪರಿಹರಿಸಲು, NHAI ಮಳೆನೀರು ಸುಲಭವಾಗಿ ಹರಿಯಲು ಅನುಕೂಲವಾಗುವಂತೆ ಎರಡು ಸಾಲುಗಳ ಪೈಪ್‌ಗಳೊಂದಿಗೆ ಪೈಪ್ ಡ್ರೈನ್ ಅನ್ನು ಹಾಕಿದೆ. 19ನೇ ಮಾರ್ಚ್ 2023 ರಂದು ಕಾಮಗಾರಿ ಪೂರ್ಣಗೊಂಡಿದ್ದು, ಸಂಚಾರ ಸುಗಮವಾಗಿ ಸಾಗುತ್ತಿದೆ ಎಂದು ಎನ್‌ಎಚ್‌ಎಐ ತಿಳಿಸಿದೆ. ಸ್ಥಳೀಯ ಜನರಿಗೆ ಪ್ರವೇಶಕ್ಕೆ ಅನುಕೂಲವಾಗುವಂತೆ ಹೆದ್ದಾರಿಗಳಿಗೆ ಸರ್ವಿಸ್ ರಸ್ತೆಗಳನ್ನು ಮಾಡುತ್ತಿದೆ ಎಂದು NHAI ಹೇಳಿದೆ.

ಇದನ್ನೂ ಓದಿ: KSRTC: ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ದರ ಹೆಚ್ಚಳದ ಶಾಕ್; ವಿವರ ಇಲ್ಲಿದೆ

ಈಗ, NHAI ಸೇವಾ ರಸ್ತೆಗಳಲ್ಲಿ ಸರಿಯಾದ ಒಳಚರಂಡಿಗಾಗಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ, ಇದರಲ್ಲಿ RCC ಡ್ರೈನ್‌ಗಳ ನಿರ್ಮಾಣವೂ ಸೇರಿದೆ. ಸರ್ವಿಸ್ ರಸ್ತೆಗಳಿಗೆ ಸರಿಯಾದ ಪ್ರವೇಶವನ್ನು ಖಾತ್ರಿಪಡಿಸಲಾಗುವುದು. “ಸುಮಾರು 55,000 ಪ್ರಯಾಣಿಕರ ಕಾರುಗಳು ಈ ರಸ್ತೆಯಲ್ಲಿ ಚಲಿಸುತ್ತಿವೆ. ಪ್ರಯಾಣದ ಸಮಯವನ್ನು ನಾಲ್ಕು ಗಂಟೆಗಳಿಂದ 1.5 ಗಂಟೆಗಳಿಗೆ ಇಳಿಸಲಾಗಿದೆ ಎಂದು ಎನ್‌ಎಚ್‌ಎಐ ಹೇಳಿಕೊಂಡಿದೆ.

ಇನ್ನು ಬಿಡದಿಯಲ್ಲಿನ ವಿಸ್ತರಣೆ ಜಂಟಿಗೆ ಸಂಬಂಧಿಸಿದಂತೆ, ಹೆದ್ದಾರಿ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಈಗ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ ಎಂದು ಹೇಳಿದೆ. ಚೈನ್ ಲಿಂಕ್ ಫೆನ್ಸಿಂಗ್ ಅನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುವುದು. ಆರು ಪಥದ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬೇಲಿ ದುರಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:51 am, Thu, 23 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ