AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ‌ ಟಿಕೆಟ್ ಸಿಗಬೇಕು ಅಂದ್ರೆ ಹಿರಿಯ ನಾಯಕರ ಕುಟುಂಬದವರಾಗಿರಬೇಕು; ಇಲ್ಲಾಂದ್ರೆ ಆಗರ್ಭ ಶ್ರೀಮಂತ ಆಗಿರಬೇಕು -ಬ್ರಿಜೇಶ್ ಕಾಳಪ್ಪ

ಕಾಂಗ್ರೆಸ್ ನ ಹಿರಿಯ ಮುಖಂಡರಾಗಿದ್ದ ಬ್ರಿಜೇಶ್ ಕಾಳಪ್ಪ ಇತ್ತೀಚೆಗೆ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 30 ವರ್ಷಗಳ ಕಾಂಗ್ರೆಸ್ ಒಡನಾಟಕ್ಕೆ ಗುಡ್ ಬೈ ಹೇಳಿ ಸಧ್ಯ ಈಗ ಎಎಪಿ ಸೇರಿದ್ದಾರೆ.

ಕಾಂಗ್ರೆಸ್​ನಲ್ಲಿ‌ ಟಿಕೆಟ್ ಸಿಗಬೇಕು ಅಂದ್ರೆ ಹಿರಿಯ ನಾಯಕರ ಕುಟುಂಬದವರಾಗಿರಬೇಕು; ಇಲ್ಲಾಂದ್ರೆ ಆಗರ್ಭ ಶ್ರೀಮಂತ ಆಗಿರಬೇಕು -ಬ್ರಿಜೇಶ್ ಕಾಳಪ್ಪ
ಅರವಿಂದ್ ಕ್ರೇಜಿವಾಲ್, ಬ್ರಿಜೇಶ್ ಕಾಳಪ್ಪ
TV9 Web
| Edited By: |

Updated on:Sep 05, 2022 | 2:32 PM

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್​ನಲ್ಲಿ ಬ್ರಿಜೇಶ್ ಕಾಳಪ್ಪ(Brijesh Kalappa) ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರಿದ್ದಾರೆ. ಆಪ್​ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಸಮ್ಮುಖದಲ್ಲಿ ಪಕ್ಷದ ಟೋಪಿ ತೊಡಿಸಿ ಎಎಪಿ ನಾಯಕರು ಬ್ರಿಜೇಶ್ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ನ ಹಿರಿಯ ಮುಖಂಡರಾಗಿದ್ದ ಬ್ರಿಜೇಶ್ ಕಾಳಪ್ಪ ಇತ್ತೀಚೆಗೆ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 30 ವರ್ಷಗಳ ಕಾಂಗ್ರೆಸ್ ಒಡನಾಟಕ್ಕೆ ಗುಡ್ ಬೈ ಹೇಳಿ ಸಧ್ಯ ಈಗ ಎಎಪಿ ಸೇರಿದ್ದಾರೆ. ಎಎಪಿ ಮುಖಂಡರು ಬ್ರಿಜೇಶ್ ಕಾಳಪ್ಪ ಅವರನ್ನು ಎಎಪಿ ಟೋಪಿ ತೊಡಿಸಿ ಪಕ್ಷಕ್ಕೆ ಬರಮಾಡಿಕೊಂಡಿದ್ದು ಪಕ್ಷದ ಧ್ವಜ ಹಿಡಿಯುವ ಮೂಲಕ ಎಎಪಿ ಸೇರ್ಪಡೆಗೊಂಡಿದ್ದಾರೆ. ಆಪ್​ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಕೆ.ಮಥಾಯಿ, ಮೋಹನ್ ದಾಸರಿ ಉಪಸ್ಥಿತರಿದ್ದರು.

ಇನ್ನು ಇದೇ ವೇಳೆ ಮಾತನಾಡಿದ ಬ್ರಿಜೇಶ್ ಕಾಳಪ್ಪ, ಕಾಂಗ್ರೆಸ್​ನಲ್ಲಿ‌ ಟಿಕೆಟ್ ಸಿಗಬೇಕು ಅಂದ್ರೆ ಹಲವು ಹೆದ್ದಾರಿಗಳಿವೆ. ಒಂದು ರಾಜ್ಯಮಟ್ಟದ ನಾಯಕರ ಕುಟುಂಬದವರಾಗಿರಬೇಕು. ಎರಡನೇಯದು ಆಗರ್ಭ ಶ್ರೀಮಂತ ಆಗಿರಬೇಕು. ಇದು ಬಿಟ್ಟು ಬೇರೆ‌ಬೇರೆ ದಾರಿಗಳಿವೆ, ಆ ಬಗ್ಗೆ ಮಾತನಾಡಲ್ಲ. ದುಡ್ಡು ಇದ್ದರೆ ಕೆಜಿಎಫ್ ಬಾಬು ರೀತಿ ಪರಿಷತ್ ಟಿಕೆಟ್ ಸಿಗುತ್ತೆ ಎಂದು ಆಪ್ ಸೇರ್ಪಡೆ ಬಳಿಕ ಕಾಂಗ್ರೆಸ್ ವಿರುದ್ಧ ಬ್ರಿಜೇಶ್ ವಾಗ್ದಾಳಿ ನಡೆಸಿದ್ದಾರೆ.

ಮೇ ಕೊನೆಯಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. 2018ರಿಂದಲೂ ನಮಗೆ ನೀರಿನ ಕೊರತೆ ಇಲ್ಲ. ಮೊದಲೆಲ್ಲಾ ನೀರಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಿತ್ತು. ಈಗ ಅಂತಹ ಪರಿಸ್ಥಿತಿ ಇಲ್ಲ. ಕಾರಣ ಪ್ರತಿ 25 ವರ್ಷಗಳಿಗೊಮ್ಮೆ ವಾಟರ್ ಸೈಕಲ್‌ ಬದಲಾಗುತ್ತದೆ. ಮಳೆ ಸುರಿಯೋದು ಹೆಚ್ಚಾಗುತ್ತದೆ. ಅದೇ ರೀತಿ ಕಾಲ ಬದಲಾದಂತೆ ರಾಜಕೀಯ ಪ್ರಕ್ರಿಯೆಗಳು ಕೂಡ ಬದಲಾಗುತ್ತಿರುತ್ತವೆ. ದೆಹಲಿ‌ ನಂತರ‌ ಪಂಜಾಬ್ ನಲ್ಲಿ ಅಧಿಕಾರ ಸಿಕ್ಕಿದೆ. ಕಾಂಗ್ರೆಸ್ ಪಕ್ಷ ಒಬ್ಬ ಸಿನ್ಸಿಯರ್ ವ್ಯಕ್ತಿಯನ್ನ ಕೇವಲ ಕಾರ್ಯಕರ್ತ ನನ್ನಾಗಿಯೇ ಇಟ್ಟಿದೆ. ಒಬ್ಬ ಕಾರ್ಯಕರ್ತ ಈಗ ಬಂದು ಎಎಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಸಮಾಧಾನ ಹೊರ ಹಾಕಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:32 pm, Mon, 5 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್