AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಕೆರೆಗೆ ಬಿದ್ದಿದ್ದ ಅಣ್ಣ ತಂಗಿಯ ಮೃತ ದೇಹಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಂಗಳೂರಿನ ಕೆಂಗೇರಿ (Kengeri) ಕೆರೆಯಲ್ಲಿ ಬಿದ್ದು ನಾಪತ್ತೆಯಾಗಿದ್ದ ಅಣ್ಣ ತಂಗಿಯ ಮೃತದೇಹಗಳು ಪತ್ತೆಯಾಗಿವೆ. ರಬ್ಬರ್ ಬೋಟ್ ಮೂಲಕ ಅಗ್ನಿಶಾಮಕ ದಳ, ಸಿವಿಲ್ ಡಿಫೆನ್ಸ್ ನಡೆಸಿದ ನಿರಂತರ ಶೋಧದ ಬಳಿಕ ಮೊದಲಿಗೆ ಅಣ್ಣನ ಮೃತದೇಹ ಪತ್ತೆಯಾಗಿದೆ. ಬಳಿಕ ಇದೀಗ ತಂಗಿಯ ಮೃತದೇಹ ಸಿಕ್ಕಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಂಗೇರಿ ಕೆರೆಗೆ ಬಿದ್ದಿದ್ದ ಅಣ್ಣ ತಂಗಿಯ ಮೃತ ದೇಹಗಳು ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11)
Kiran Surya
| Edited By: |

Updated on: Oct 22, 2024 | 4:56 PM

Share

ಬೆಂಗಳೂರು, (ಅಕ್ಟೋಬರ್ 22): ಕೆಂಗೇರಿ ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳು ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆ ನೀರು ತರಲು ಹೋಗಿದ್ದರು. ಆ ವೇಳೆ ಅಣ್ಣ ಶ್ರೀನಿವಾಸ್ (13) ತಂಗಿ ಮಹಾಲಕ್ಷ್ಮೀ (11) ಕೆರೆಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಇಂದು(ಅಕ್ಟೋಬರ್ 22) ಬೆಳಗ್ಗೆಯಿಂದಲೇ ರಬ್ಬರ್ ಬೋಟ್​ ಮೂಲಕ ಶೋಧ ಕಾರ್ಯ ನಡೆಸಿದ್ದು, ಮೊದಲಿಗೆ ಅಣ್ಣ ಶ್ರೀನಿವಾಸ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳಾದ ಶ್ರೀನಿವಾಸ್ ಮತ್ತು ಲಕ್ಷ್ಮೀ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆಗೆ (Lake) ನೀರು ತರಲು ಹೋಗಿದ್ದರು. ನೀರು ತರಲು ಹೋದವರು ಕೆರೆ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಾ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಕೆರೆಯ ದಂಡೆ ಮೇಲೆ ಮಕ್ಕಳ ಬಟ್ಟೆ ಮತ್ತು ಬಿಂದಿಗೆ ಪತ್ತೆಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೋಲಿಸರು ದೌಡಾಯಿಸಿದ್ದು, ಶೋಧಕಾರ್ಯ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರು: ಆಟವಾಡುತ್ತ ಆಯತಪ್ಪಿ ಕೆಂಗೇರಿ ಕೆರೆಯಲ್ಲಿ ಬಿದ್ದ ಅಣ್ಣ-ತಂಗಿ?

ನಾಗಮ್ಮ ಬಿಬಿಎಂಪಿಯಲ್ಲಿ ಕಸ ವಿಂಗಡಣೆ ಕೆಲಸ ಮಾಡುತ್ತಿದ್ದಾರೆ. ನಾಗಮ್ಮ ತನ್ನ ಇಬ್ಬರು ಮಕ್ಕಳು ಮತ್ತು ಸಹೋದರಿ ಧನಲಕ್ಷ್ಮೀ ಜೊತೆಗೆ ವಾಸವಾಗಿದ್ದಾರೆ. ಇದೀಗ ತನ್ನಿಬ್ಬರು ಮಕ್ಕಳನ್ನು ಕಳೆದುಕೊಂಡಿರುವ ನಾಗಮ್ಮನ ರೋಧನೆ ಮುಗಿಲು ಮುಟ್ಟಿದ್ದು, , ನೆರೆದಿದ್ದ ಜನರ ಕಣ್ಣಾಲಿಗಳಲ್ಲಿ ನೀರು ತರಿಸಿತು.

ಜ್ಞಾನಭಾರತಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಕೆಂಗೇರಿ ಪೊಲೀಸ್ ಸಿಬ್ಬಂದಿ, ಸಿವಿಲ್ ಡಿಫೆನ್ಸ್​ ಸೇರಿದಂತೆ ಸುಮಾರು 15 ಜನರ ತಂಡ ಶೋಧ ಕಾರ್ಯ ನಡೆಸಿ ಎರಡು ಮೃತದೇಹಗಳನ್ನು ಪತ್ತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ