AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಚಾಕು ಹಲ್ಲೆ

ನಡು ರಸ್ತೆಯಲ್ಲಿ ಸಿದ್ಧಾರ್ಥ್​​ನನ್ನು ನೆಲಕ್ಕೆ ಬೀಳಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Bengaluru News: ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಚಾಕು ಹಲ್ಲೆ
ಯುವತಿ ಸಹೋದರನಿಂದ ಯುವಕನ ಮೇಲೆ ಹಲ್ಲೆ
TV9 Web
| Updated By: ಆಯೇಷಾ ಬಾನು|

Updated on: Feb 08, 2023 | 8:18 AM

Share

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ಯುವತಿಗೆ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಯುವತಿಯ ಮಾವ ಯುವಕನ್ನು ಅಪಹರಿಸಿ ಕೊಲೆ ಮಾಡಿದ್ದಾನೆ ಎನ್ನಲಾದ ಸುದ್ದಿ ಹರಿದಾಡುತ್ತಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ಯುವತಿಗೆ ಮೆಸೇಜ್ ಮಾಡಿದ ಎಂದು ಯುವತಿಯ ಸಹೋದರ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಗೋವಿಂದರಾಜನಗರದಲ್ಲಿ ಸಿದ್ಧಾರ್ಥ್ ಎಂಬ ಯುವಕನ ಮೇಲೆ ಚೇತನ್ ಮತ್ತು ಆತನ ಗೆಳೆಯರು ಹಲ್ಲೆ ನಡೆಸಿ ಕೃತ್ಯ ಎಸಗಿದ್ದಾರೆ. ನಡು ರಸ್ತೆಯಲ್ಲಿ ಸಿದ್ಧಾರ್ಥ್​​ನನ್ನು ನೆಲಕ್ಕೆ ಬೀಳಿಸಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿದ್ಧಾರ್ಥ್, ಕೀರ್ತಿ ಎಂಬ ಯುವತಿಯ ಜೊತೆ ಕಳೆದ ಒಂದು ವರ್ಷದಿಂದ ಇನ್ಸ್ಟಾಗ್ರಾಮ್​ನಲ್ಲಿ ಚಾಟ್ ಮಾಡ್ತಿದ್ದ. ಈ ವಿಚಾರ ತಿಳಿದ ಯುವತಿ ಅಣ್ಣ ಚೇತನ್, ಸಿದ್ಧಾರ್ಥ್​ಗೆ ಕರೆ ಮಾಡಿ ನಿಂದಿಸಿ ಮಾತನಾಡಬೇಕು ಸಿಗು ಎಂದಿದ್ದಾನೆ. ಅದರಂತೆ ಸಿದ್ಧಾರ್ಥ್ ಪಿಜಿ ಬಳಿ ಚೇತನ್ ಮತ್ತು ಆತನ ಗೆಳೆಯರು ಬಂದಿದ್ದಾರೆ. ಬಳಿಕ ಮಾತುಕತೆ ನಡೆದಿದ್ದು ಚೇತನ್ ಮತ್ತು ಆತನ ಸ್ನೇಹಿತರು ಹಲ್ಲೆ ಮಾಡಿ ಎಸ್ಕೆಪ್ ಆಗಿದ್ದಾರೆ. ಹಲ್ಲೆಗೊಳಗಾದ ಸಿದ್ಧಾರ್ಥ್​ ಗೋವಿಂದರಾಜ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಯುವತಿಗೆ ಮೆಸೇಜ್ ಮಾಡಿದ್ದೇ ಯುವಕನಿಗೆ ಕಂಟಕವಾಯ್ತಾ? ಯುವತಿಯ ಸೋದರ ಮಾವನಿಂದ ಕೊಲೆ ಆರೋಪ, ಯುವಕ ನಾಪತ್ತೆ

ಅಪಘಾತವಾಗಿ 11ದಿನದ ಬಳಿಕ ಕಾರು ಪತ್ತೆ, ಆರೋಪಿ ಅರೆಸ್ಟ್

ಕಳೆದ ತಿಂಗಳ 26ರಂದು ದೇವನಹಳ್ಳಿಯಿಂದ ಕೋರಮಂಗಲಕ್ಕೆ ತೆರಳುತಿದ್ದ ಫಾರ್ಚ್ಯನರ್ ಕಾರ್ ನಲ್ಲಿ ಬಂದ ಆರೋಪಿ ಅಪಘಾತ ಮಾಡಿ ಎಸ್ಕೇಪ್ ಆಗಿದ್ದ. ಈ ಅಪಘಾತದಲ್ಲಿ ವೆಂಕಟೇಶ್ ಎಂಬುವವರು ಮೃತಪಟ್ಟಿದ್ದರು. ಘಟನೆ ಸಂಬಂಧ ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸದ್ಯ ಈಗ ಆರೋಪಿಯನ್ನು ಬಂಧಿಸಿದ್ದಾರೆ.  ಅಪಘಾತವಾದ 11 ದಿನಗಳ ಬಳಿಕ ಕಾರು ಪತ್ತೆಯಾಗಿದೆ. ರವಿ ಬಂಧಿತ ಆರೋಪಿ. ಈತ ಉದ್ಯಮಿ ನಾಗಾರ್ಜುನ ಎಂಬುವವರಿಗೆ ಸೇರಿದ ಕಾರಿನ ಚಾಲಕ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!