AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನಂತರವೂ ಮುಖ್ಯಮಂತ್ರಿಯಾಗಿಯೇ ಅಬ್ದುಲ್​ ಕಲಾಂ ಅವರಿಗೆ ಗೌರವ ಸಲ್ಲಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ

ಭಾರತದ ಮಾಜಿ ರಾಷ್ಟ್ರಪತಿಗಳು, ಮಿಸೈಲ್ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ಭಾರತರತ್ನ ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಜನತೆಯ ರಾಷ್ಟ್ರಪತಿ ಎನಿಸಿಕೊಂಡಿದ್ದ ಕಲಾಂ ಅವರ ವ್ಯಕ್ತಿತ್ವ, ಸಾಧನೆ ಅವಿಸ್ಮರಣೀಯ. ದೇಶಕ್ಕೆ ಅವರ ಕೊಡುಗೆ ಅಪಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜೀನಾಮೆ ನಂತರವೂ ಮುಖ್ಯಮಂತ್ರಿಯಾಗಿಯೇ ಅಬ್ದುಲ್​ ಕಲಾಂ ಅವರಿಗೆ ಗೌರವ ಸಲ್ಲಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ
ಎಪಿಜೆ ಅಬ್ದುಲ್​ ಕಲಾಮ್​ ಅವರನ್ನು ಸ್ಮರಿಸಿದ ಯಡಿಯೂರಪ್ಪ
TV9 Web
| Updated By: Skanda|

Updated on: Jul 27, 2021 | 11:34 AM

Share

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಿ.ಎಸ್.ಯಡಿಯೂರಪ್ಪ (BS Yediyurappa) ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದಾರೆ. ಇಂದು ಭಾರತದ ಮಾಜಿ ರಾಷ್ಟ್ರಪತಿ ಅಬ್ದುಲ್​ ಕಲಾಂ ಅವರ ಪುಣ್ಯತಿಥಿ (APJ Abdul Kalam Death Anniversary) ಪ್ರಯುಕ್ತ ಅವರಿಗೆ ನಮನ ಸಲ್ಲಿಸಿರುವ ಯಡಿಯೂರಪ್ಪ, ಮುಖ್ಯಮಂತ್ರಿಯಾಗಿಯೇ ಸಂದೇಶ ನೀಡಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಗಳ (Karnataka Chief Minister) ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಅವರು ಅಬ್ದುಲ್​ ಕಲಾಂ ಅವರ ಪುಣ್ಯತಿಥಿ ಪ್ರಯುಕ್ತ ಗೌರವಪೂರ್ವಕ ಪ್ರಣಾಮಗಳನ್ನು ತಿಳಿಸಿದ್ದಾರೆ.

‘ಭಾರತದ ಮಾಜಿ ರಾಷ್ಟ್ರಪತಿಗಳು, ಮಿಸೈಲ್ ಮ್ಯಾನ್ ಎಂದೇ ಖ್ಯಾತಿ ಪಡೆದಿದ್ದ ಭಾರತರತ್ನ ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಜನತೆಯ ರಾಷ್ಟ್ರಪತಿ ಎನಿಸಿಕೊಂಡಿದ್ದ ಕಲಾಂ ಅವರ ವ್ಯಕ್ತಿತ್ವ, ಸಾಧನೆ ಅವಿಸ್ಮರಣೀಯ. ದೇಶಕ್ಕೆ ಅವರ ಕೊಡುಗೆ ಅಪಾರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇಂದು ಯಾವುದೇ ಸಭೆ, ಆಡಳಿತ ಸಂಬಂಧ ಕಾರ್ಯಕ್ರಮಗಳಿಲ್ಲ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ಹಂಗಾಮಿ ಸಿಎಂ ಆಗಿ ಮುಂದುವರೆದಿರುವ ಬಿ.ಎಸ್.ಯಡಿಯೂರಪ್ಪ ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲೇ ಉಳಿದುಕೊಂಡಿದ್ದಾರೆ. ಯಾವುದೇ ಸಭೆ, ಸಮಾರಂಭ, ಆಡಳಿತ ಸಂಬಂಧ ಕಾರ್ಯಕ್ರಮಗಳನ್ನು ನಿಗದಿಪಡಿಸಿಕೊಳ್ಳದ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಮೌನವಾಗಿ ನಿವಾಸದಲ್ಲೇ ಉಳಿದಿದ್ದಾರೆ. ಏತನ್ಮಧ್ಯೆ, ಸಿಎಂ ಅಧಿಕೃತ ನಿವಾಸ ಕಾವೇರಿಗೆ ಗುಪ್ತಚರ ಇಲಾಖೆಯ ಮುಖ್ಯಸ್ಥ ದಯಾನಂದ್ ಭೇಟಿ ನೀಡಿ ಕೆಲಕಾಲ ಇದ್ದು ವಾಪಾಸ್ಸಾಗಿದ್ದಾರೆ.

ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಗೆ ಒಬ್ಬೊಬ್ಬರೇ ನಾಯಕರು ಆಗಮಿಸುತ್ತಿದ್ದು, ಎಂ.ಪಿ.ರೇಣುಕಾಚಾರ್ಯ, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕರು ಬರುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಮುರುಗೇಶ್ ನಿರಾಣಿ ಕೂಡಾ ಯಡಿಯೂರಪ್ಪ ಭೇಟಿಗೆ ಕಾಲಾವಕಾಶ ಕೇಳಿ ಅವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ.

(BS Yediyurappa admire APJ Abdul Kalam on his Death Anniversary as Chief Minister of Karnataka Even after resignation)

ಇದನ್ನೂ ಓದಿ: ಬಿಎಸ್​ವೈ ರಾಜೀನಾಮೆಯಿಂದ ಮನನೊಂದು ರವಿ ಅಲಿಯಾಸ್​ ರಾಜಾಹುಲಿ ಆತ್ಮಹತ್ಯೆ; ನೇಣಿಗೆ ಶರಣಾದ ಯಡಿಯೂರಪ್ಪ ಅಭಿಮಾನಿ 

ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ