AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ಹಿನ್ನೆಲೆ ಸಿಎಂ ಕಚೇರಿ ಡ್ಯೂಟಿಯಿಂದ ಬಿಎಸ್‌ವೈ ಆಪ್ತ ಉಮೇಶ್​ಗೆ ಗೇಟ್​ ಪಾಸ್​ ನೀಡಿದ ಸಿಎಂ ಬೊಮ್ಮಾಯಿ

ಸಿಎಂ ಸೂಚನೆ ಮೇರೆಗೆ ಬಿಎಂಟಿಸಿ ಅನ್ಯಸೇವೆ ನಿಮಿತ್ತ ನಿಯೋಜನೆ ಆದೇಶ ವಾಪಸ್ ಪಡೆದಿದೆ. ಸಿಎಂ ಆಪ್ತ ಸಹಾಯಕನಾಗಿ ಸಿಎಂ ಕಚೇರಿಗೆ ಉಮೇಶ್ ನಿಯೋಜನೆಗೊಂಡಿದ್ದರು. ಆದ್ರೆ ಈಗ ಉಮೇಶ್ ಎಂ.ಆರ್. ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ.

ಐಟಿ ದಾಳಿ ಹಿನ್ನೆಲೆ ಸಿಎಂ ಕಚೇರಿ ಡ್ಯೂಟಿಯಿಂದ ಬಿಎಸ್‌ವೈ ಆಪ್ತ ಉಮೇಶ್​ಗೆ ಗೇಟ್​ ಪಾಸ್​ ನೀಡಿದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಬಿ.ಎಸ್. ಯಡಿಯೂರಪ್ಪ ಆಪ್ತ ಉಮೇಶ್
TV9 Web
| Edited By: |

Updated on:Oct 08, 2021 | 1:23 PM

Share

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಆಪ್ತ ಉಮೇಶ್ ನಿವಾಸದ ಮೇಲೆ ನಿನ್ನೆ ಮುಂಜಾನೆ ನುಗ್ಗಿದ್ದ ಐಟಿ ಆಫಿಸರ್ಸ್ ತಡರಾತ್ರಿವರೆಗೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮ್ಯಾರಥಾನ್ ತಲಾಶ್ ವೇಳೆ ಹಲವು ಮಹತ್ವದ ದಾಖಲೆಗಳನ್ನು ಸೀಜ್ ಮಾಡಿ ಕೊಂಡು ಹೋಗಿದ್ದಾರೆ. ಉಮೇಶ್ ಗಳಿಸಿರೋ ಆಸ್ತಿ ಹಾಗೂ ಟೆಂಡರ್ಗೆ ಸಂಬಂಧಪಟ್ಟ ಡಾಕ್ಯುಮೆಂಟ್ಗಳನ್ನ ವಶಪಡಿಸಿಕೊಂಡಿದ್ದಾರೆ. ಉಮೇಶ್ ಹಾಗೂ ಕುಟುಂಬಸ್ಥರು ಮನೆಯೊಳಗೇ ಲಾಕ್ ಆಗಿದ್ದು, ಎಲ್ಲರ ಮೊಬೈಲ್ ಸೀಜ್ ಮಾಡಲಾಗಿದೆ. ಉಮೇಶ್ ಮನೆಗೇ ಊಟ ತರಿಸಿಕೊಂಡ ಅಧಿಕಾರಿಗಳು ಮೆಗಾ ತಲಾಶ್ ಮುಂದುವರಿಸಿದ್ದಾರೆ. ಆದ್ರೆ ಈಗ ಮತ್ತೊಂದು ಬೆಳವಣಿಗೆಯಾಗಿ ಉಮೇಶ್ರ ಅನ್ಯ ಸೇವೆ ನಿಯೋಜನೆಯನ್ನು ಬಿಎಂಟಿಸಿ ವಾಪಸ್ ಪಡೆದಿದೆ.

ಐಟಿ ದಾಳಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ಆಪ್ತ ಉಮೇಶ್ ಅನ್ಯ ಸೇವೆ ನಿಯೋಜನೆಯನ್ನು ಬಿಎಂಟಿಸಿ ವಾಪಸ್ ಪಡೆದಿದೆ. ಸಿಎಂ ಕಚೇರಿಯಿಂದ ಬಿಡುಗಡೆಗೊಳಿಸಲು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ‌ ಸೂಚಿಸಿದ್ರು. ಹೀಗಾಗಿ ಸಿಎಂ ಸೂಚನೆ ಮೇರೆಗೆ ಬಿಎಂಟಿಸಿ ಅನ್ಯಸೇವೆ ನಿಮಿತ್ತ ನಿಯೋಜನೆ ಆದೇಶ ವಾಪಸ್ ಪಡೆದಿದೆ. ಸಿಎಂ ಆಪ್ತ ಸಹಾಯಕನಾಗಿ ಸಿಎಂ ಕಚೇರಿಗೆ ಉಮೇಶ್ ನಿಯೋಜನೆಗೊಂಡಿದ್ದರು. ಆದ್ರೆ ಈಗ ಉಮೇಶ್ ಎಂ.ಆರ್. ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಆಯನೂರು ಮೂಲದ ಉಮೇಶ್, 2007ರಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಕಂ ಡ್ರೈವರ್ ಆಗಿದ್ದ. ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಡಿಪೋದಲ್ಲಿ ಕೆಲಸಕ್ಕಿದ್ದ. ಈ ಮಧ್ಯೆ ಬಿಎಸ್ವೈ ಜೊತೆ ಗುರುತಿಸಿಕೊಂಡು ಬಳಿಕ ಆಪ್ತನಾಗಿದ್ದಾನೆ. ಯಡಿಯೂರಪ್ಪಗೆ ಅತಿ ಆಪ್ತನಂತೆ ಇದ್ದ ಉಮೇಶ್, ಬಿಎಸ್ವೈ ವಿಪಕ್ಷ ನಾಯಕರಾಗಿದ್ದಾಗಲೂ ಪಿಎ ಆಗಿದ್ದ. ಬಿಎಸ್ವೈ ಸಿಎಂ ಆಗಿದ್ದಾಗಲೂ ಉಮೇಶನೇ ಪಿಎ ಆಗಿದ್ದ. ಯಡಿಯೂರಪ್ಪನವರ ವ್ಯವಹಾರಗಳನ್ನ ನೋಡಿಕೊಳ್ಳುತ್ತಿದ್ದ. ಯಾವಾಗಲೂ ಬಿಎಸ್ವೈ ಮನೆಯಲ್ಲೇ ಇರುತ್ತಿದ್ದ.

ಬಿಎಸ್ವೈ ಕುಟುಂಬಕ್ಕೇ ಪಿಎ ಕೇವಲ ಯಡಿಯೂರಪ್ಪಗೆ ಅಷ್ಟೇ ಅಲ್ಲ, ಬಿಎಸ್ವೈ ಪುತ್ರ ಸಂಸದ ರಾಘವೇಂದ್ರಗೂ ಉಮೇಶ್ ಪಿಎ ಆಗಿದ್ದ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೂ ಉಮೇಶನೇ ಪಿಎ ಆಗಿದ್ದ. ರಾಘವೇಂದ್ರ ಬೆಂಗಳೂರಿಗೆ ಬಂದಾಗ ಅವರ ಕೆಲಸ ನೋಡಿಕೊಳ್ತಿದ್ದ. ಇನ್ನು ಸಿಎಂ ಸಚಿವಾಲಯದ ಆಪ್ತಸಹಾಯಕನಾಗಿಯೂ ಮುಂದುವರಿದಿದ್ದ ಉಮೇಶ್. ಆದ್ರೆ ಬೊಮ್ಮಾಯಿ ಜೊತೆಗೆ ಉಮೇಶ್ ಕೆಲಸ ಮಾಡ್ತಿರಲಿಲ್ಲ.

ಎರಡೇ ವರ್ಷದಲ್ಲಿ ಉಮೇಶ್ ಆದಾಯ ಶೇ. 300ರಷ್ಟು ಏರಿಕೆ? ಉಮೇಶ್ ಆದಾಯದಲ್ಲಿ ದಿಢೀರ್ ಏರಿಕೆ ಕಂಡು ಐಟಿ ಅಧಿಕಾರಿಗಳೇ ಶಾಕ್​ಗೆ ಒಳಗಾಗಿದ್ದಾರೆ. ಕೇವಲ 2 ವರ್ಷದಲ್ಲಿ ಉಮೇಶ್ ಆದಾಯ ಶೇಕಡಾ 300ರಷ್ಟು ಏರಿಕೆಯಾಗಿದೆ ಅಂತಾ ಹೇಳಲಾಗ್ತಿದೆ. ಕಾವೇರಿ ನೀರಾವರಿ ನಿಗಮ ಟೆಂಡರ್ನಲ್ಲಿ ಗೋಲ್ಮಾಲ್ ಆರೋಪ ಉಮೇಶ್ ಮೇಲಿದೆ. ಕೃಷ್ಣ ಭಾಗ್ಯ ಜಲ ನಿಗಮ ಟೆಂಡರ್ನಲ್ಲೂ ಭ್ರಷ್ಟಾಚಾರ ನಡೆಸಿರೋ ಆರೋಪವಿದೆ. ಯಾಕಂದ್ರೆ ಬಿಡುಗಡೆ ಮಾಡಿರುವ ಹಣಕ್ಕೂ ವರ್ಕ್ ಅರ್ಡರ್ಗೂ ವ್ಯತ್ಯಾಸವಿದೆ. ಎರಡೂ ಯೋಜನೆ ಪೂರ್ಣವಾದ ಬಳಿಕ ದಾಖಲೆಗಳಲ್ಲಿ ವ್ಯತ್ಯಾಸವಿದೆ. ಹೀಗಾಗಿ ಉಮೇಶ್ ಮನೆ ಮೇಲೆ ಐಟಿ ದಾಳಿ ನಡೆಸಿರೋದಾಗಿ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ರಾಹುಲ್ ಎಂಟರ್​ಪ್ರೈಸಸ್, ಉಮೇಶ್ ಮನೆ ಮೇಲಿನ ಐಟಿ ದಾಳಿ ಅಂತ್ಯ; ಹಲವು ಕಡತಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು

Published On - 8:35 am, Fri, 8 October 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ